ಮದ್ದುಗುಂಡಿನೊಂದಿಗೆ ವಿಮಾನ ನಿಲ್ದಾಣಕ್ಕೆ ಬಂದ ವ್ಯಾಪಾರಿ
Team Udayavani, May 6, 2018, 6:00 AM IST
ಮಂಗಳೂರು: ಬೆಳ್ತಂಗಡಿಯ ಅಡಿಕೆ ವ್ಯಾಪಾರಿ ಒಬ್ಬರು 15 ಮದ್ದುಗುಂಡುಗಳನ್ನು ಬ್ಯಾಗ್ನಲ್ಲಿ ಹಾಕಿಕೊಂಡು ಶನಿವಾರ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಪ್ರಧಾನಿ ಮೋದಿ ಅವರ ಭೇಟಿ ಕಾರ್ಯಕ್ರಮವೂ ಇದ್ದ ಕಾರಣ ಕೆಲ ಹೊತ್ತು ಆತಂಕದ ವಾತಾವರಣ ನಿರ್ಮಾಣವಾಯಿತು.
ಬೆಳ್ತಂಗಡಿಯ ಇಸ್ಮಾಯಿಲ್ 67 ವರ್ಷ ವಯಸ್ಸಿನ ವೃದ್ಧರಾಗಿದ್ದು, ಅವರು ನಾಗಪುರಕ್ಕೆ ಹೊರಟಿದ್ದರು ಎನ್ನಲಾಗಿದೆ. ಪೊಲೀಸರು ವಿಚಾರಣೆಗೆ ಒಳ ಪಡಿಸಿದಾಗ ಈ ವ್ಯಕ್ತಿ ತಾನು ಅಧಿಕೃತವಾಗಿ ಗನ್ ಲೈಸನ್ಸ್ ಹೊಂದಿರುವುದಾಗಿ ತಿಳಿಸಿದ್ದಾರೆ.
ಮಧ್ಯಾಹ್ನ 12.55ಕ್ಕೆ ಹೊರಡುವ ಇಂಡಿಗೊ ವಿಮಾನದಲ್ಲಿ ಪ್ರಯಾಣಿಸಲು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಅವರ ಕೈಚೀಲವನ್ನು ಸಿಐಎಸ್ಎಫ್ ಭದ್ರತಾ ಸಿಬಂದಿ ಪರಿಶೀಲಿಸಿದಾಗ ಬ್ಯಾಗಿನಲ್ಲಿ 32 ಮಿ.ಮೀ. ನ 15 ಸಜೀವ ಮದ್ದುಗುಂಡುಗಳು ಪತ್ತೆಯಾದವು. ಅವುಗಳನ್ನು ಯಾತಕ್ಕಾಗಿ ಬ್ಯಾಗಿನಲ್ಲಿ ಇರಿಸಿದ್ದರು ಎಂಬುದು ತಿಳಿದು ಬಂದಿಲ್ಲ. ತನ್ನ ಬಳಿ ಗನ್ ಲೈಸನ್ಸ್ ಇದೆ ಎಂದು ತಿಳಿಸಿದ ಹಿನ್ನೆಲೆಯಲ್ಲಿ ಈ ಬಗೆಗೆ ದಾಖಲೆ ಪತ್ರಗಳನ್ನು ತಂದೊಪ್ಪಿಸುವಂತೆ ಸೂಚಿಸಿ ಭದ್ರತಾ ಸಿಬಂದಿ ಅವರನ್ನು ಬಜಪೆ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ