ಮಂಗಳೂರಿನಲ್ಲಿ ಅಮಿತ್ ಶಾ ರೋಡ್ ಶೋ
Team Udayavani, May 9, 2018, 8:25 AM IST
ಮಂಗಳೂರು: ಈ ವಿಧಾನಸಭಾ ಚುನಾವಣೆ ಕೇವಲ ಓರ್ವ ವ್ಯಕ್ತಿಯನ್ನಾಗಲಿ, ಓರ್ವ ಮಂತ್ರಿಯನ್ನಾಗಲಿ ಅಥವಾ ಕೇವಲ ಮುಖ್ಯ ಮಂತ್ರಿಯನ್ನು ಬದಲಿಸುವ ಚುನಾವಣೆಯಲ್ಲ. ಬದಲಾಗಿ ಇದು ಕರ್ನಾಟಕದ ಭವಿಷ್ಯವನ್ನು ಬದಲಿಸುವ ಚುನಾವಣೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್ ಶೆಟ್ಟಿ ಅವರ ಪರವಾಗಿ ಕಾವೂರಿನಲ್ಲಿ ಮಂಗಳವಾರ ಸಂಜೆ ರೋಡ್ ಶೋ ನಡೆಸಿ ಅವರು ಮಾತನಾಡಿದರು.
ಈ ಚುನಾವಣೆಯಲ್ಲಿ ಬಿಜೆಪಿಯ ಗೆಲುವು ಖಚಿತ ಎಂದು ಒತ್ತಿ ಹೇಳಿದ ಅಮಿತ್ ಶಾ, ಬಿಜೆಪಿ ಅಭ್ಯರ್ಥಿಗಳೆಲ್ಲರೂ ಚುನಾವಣೆಯಲ್ಲಿ ಗೆಲ್ಲುವ ಆತ್ಮವಿಶ್ವಾಸವಿದ್ದು, ಮೇ 15ರಂದು ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ರಾಜ್ಯದಲ್ಲಿ ಆಡಳಿತಕ್ಕೆ ಬರಲಿದೆ. ಸಿದ್ದರಾಮಯ್ಯ ಸೋಲಿನ ಭಯದಿಂದ ಬಾದಾಮಿಯಲ್ಲೂ ಸ್ಪರ್ಧಿಸುತ್ತಿದ್ದಾರೆ. ಆರೆ ಅಲ್ಲಿ ಬಿಜೆಪಿಯ ಶ್ರೀರಾಮುಲು ಸ್ಪರ್ಧಿಸುತ್ತಿರುವುದನ್ನು ನೋಡಿ ಮತ್ತೆ ಅವರಿಗೆ ಆತಂಕ ಶುರುವಾಗಿದೆ ಎಂದು ವ್ಯಂಗ್ಯವಾಡಿದರು.
ಬಾವಾ ಪ್ರಚಾರ ವಾಹನಕ್ಕೆ ಅಡ್ಡಿ
ಅಮಿತ್ ಶಾ ಭಾಷಣ ಮುಗಿಯುತ್ತಿದ್ದಂತೆಯೇ ಬಿಜೆಪಿ ಬೆಂಬಲಿಗರು ಉತ್ಸಾಹದಿಂದ ಮೋದಿ ಪರ ಘೋಷಣೆ ಕೂಗುತ್ತಾ ತೆರಳುತ್ತಿದ್ದರು. ಇದೇ ವೇಳೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊದೀನ್ ಬಾವಾ ಪರ ಪ್ರಚಾರ ವಾಹನ ಅದೇ ಮಾರ್ಗವಾಗಿ ಸಾಗುತ್ತಿತ್ತು. ಬಿಜೆಪಿ ಬೆಂಬಲಿಗರು ವಾಹನವನ್ನು ಸುತ್ತುವರಿದು ಏರಿದ ಸ್ವರದಲ್ಲಿ ಮೋದಿ ಪರ ಘೋಷಣೆ ಕೂಗತೊಡಗಿದರು. ಗಂಭೀರತೆ ಅರಿತುಕೊಂಡ ಪೊಲೀಸರು ಕಾರ್ಯಕರ್ತರನ್ನು ಚದುರಿಸಿ ಪ್ರಚಾರ ವಾಹನ ಮುಂದಕ್ಕೆ ಚಲಿಸುವುದಕ್ಕೆ ಅವಕಾಶ ಮಾಡಿಕೊಟ್ಟರು.
ಪ್ರಚಾರ ಸಭೆಗೂ ಮೊದಲು ಶಾ ಕ್ಷೇತ್ರದಲ್ಲಿ ಅಪಾರ ಕಾರ್ಯಕರ್ತರ ಸಮ್ಮುಖದಲ್ಲಿ ರೋಡ್ ಶೋ ನಡೆಸಿದರು. ಸಂಸದ ನಳಿನ್ ಕುಮಾರ್, ಕ್ಯಾ|ಗಣೇಶ್ ಕಾರ್ಣಿಕ್, ಬಿಜೆಪಿ ಅಭ್ಯರ್ಥಿ ಭರತ್ ಶೆಟ್ಟಿ, ಮುಖಂಡರಾದ ಉದಯ ಕುಮಾರ್ ಶೆಟ್ಟಿ, ನಾಗರಾಜ ಶೆಟ್ಟಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…