ವರ್ಷದೊಳಗೆ ಮಂಗಳೂರಿಗೆ ಪ್ರತಿದಿನ 24 ಗಂಟೆ ನೀರು: ವೇದವ್ಯಾಸ ಕಾಮತ್‌


Team Udayavani, May 9, 2018, 11:31 AM IST

9-May-8.jpg

ಮಹಾನಗರ: ಶಾಸಕನಾಗಿ ಆಯ್ಕೆಯಾದ ಒಂದು ವರ್ಷದೊಳಗೆ ನಗರಕ್ಕೆ ಕುಡಿಯುವ ನೀರಿನ ಪೂರೈಕೆಗೆ ಹೊಸ ನೀತಿಯನ್ನು ರೂಪಿಸಿ ದಿನದ 24 ಗಂಟೆಯೂ ನೀರು ಲಭಿಸುವಂತೆ ಮಾಡಲು ಮೊದಲ ಆದ್ಯತೆ ನೀಡುವುದಾಗಿ ಮಂಗಳೂರು ದಕ್ಷಿಣ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಡಿ. ವೇದವ್ಯಾಸ ಕಾಮತ್‌ ಹೇಳಿದ್ದಾರೆ.

ನಗರದ ಟ್ಯಾಂಕ್‌ ಕಾಲೋನಿ, ನವಾಯತ್‌ ವಾರ್ಡ್‌, ಕಂದುಕ ಪ್ರದೇಶಗಳಲ್ಲಿ ಇಂದು ಮತಯಾಚನೆ ನಡೆಸಿದ ಅವರು ಎಡಿಬಿ ಸಾಲ ಯೋಜನೆಯಲ್ಲಿ ಅಗಿರುವ ನ್ಯೂನತೆಗಳನ್ನು ಸರಿಪಡಿಸಿ ಕುಡಿಯುವ ನೀರಿನ ಪೂರೈಕೆ ನಿರಂತರವಾಗಿರಲು ಗಮನ ನೀಡಲಾಗುವುದು ಎಂದರು. ನಗರದಲ್ಲಿ ಈಗ ಶೇ. 60ರಷ್ಟು ನೀರಿನ ಸೋರಿಕೆಯಾಗುತ್ತಿದೆ. ಅದನ್ನು ಶೇ.5ಕ್ಕೆ ಇಳಿಸಿದಾಗ ನಗರದ ಎಲ್ಲ ಜನತೆಗೆ ದಿನದ 24 ಗಂಟೆ ಕಾಲವೂ ನಿರಂತರ ನೀರು ಒದಗಿಸಲು ಸಾಧ್ಯವಾಗುವುದು. ಇದರಿಂದ ಪಾಲಿಕೆಯ ಅದಾಯವೂ ಹೆಚ್ಚಲಿದೆ ಎಂದು ತಿಳಿಸಿದರು.

ನಗರದಲ್ಲಿ ದಿನದಿಂದ ದಿನಕ್ಕೆ ಸಾರಿಗೆ, ಸಂಚಾರ ಸಮಸ್ಯೆ ಅಧಿಕವಾಗುತ್ತಿದೆ. ಇದಕ್ಕೆ ಸೂಕ್ತ ಪರಿಹಾರವನ್ನು ಕಂಡುಕೊಳ್ಳುವ ಅಗತ್ಯವಿದೆ. ಮುಖ್ಯ ರಸ್ತೆಗಳನ್ನು ವ್ಯವಸ್ಥಿತ ಡ್ರೈನೇಜ್‌ನೊಂದಿಗೆ ಕಾಂಕ್ರೀಟ್‌ ರಸ್ತೆ ಮಾಡಲಾಗುವುದು. ಪಾದಚಾರಿ ರಸ್ತೆಗಳು, ಸೈಕಲ್‌ಟ್ರಾಫಿಕ್‌ ಗಳನ್ನು ನಿರ್ಮಿಸಲಾಗುವುದು. ಉಪರಸ್ತೆಗಳನ್ನು ಕೂಡಾ ವಿಸ್ತ ರ ಣೆಗೊಳಿಸಿ ಅಭಿವೃದ್ಧಿ ಪಡಿಸಲಾಗುವುದು. ಅಗತ್ಯಕ್ಕೆ ತಕ್ಕಂತೆ ಬಸ್‌ ಬೇಗಳನ್ನು ನಿರ್ಮಿಸಲಾಗುವುದು. ಪ್ರಥಮ ಹಂತದಲ್ಲಿ ಪ್ರಮುಖ ಜಂಕ್ಷನ್‌ಗಳನ್ನು ಅಭಿವೃದ್ದಿಪಡಿಸಲಾಗುವುದು ಎಂದು ವಿವರಿಸಿದರು.

ನಗರದಲ್ಲಿರುವ ತ್ಯಾಜ್ಯ ಸಂಸ್ಕರಣಾ ಘಟಕಗಳು ಸರಿಯಾಗಿ ಕಾರ್ಯನಿರ್ವಹಿಸದ ಕಾರಣ ಎಲ್ಲೆಡೆ ಡ್ರೈನೇಜ್ ಸಮಸ್ಯೆ ಕಂಡು ಬರುತ್ತಿದೆ. ಇದರ ಜತೆಯಲ್ಲಿ ಮಳೆ ನೀರು ಹರಿಯುವ ತೋಡುಗಳನ್ನು ಕೂಡಾ ವೈಜ್ಞಾನಿಕ ರೀತಿಯಲ್ಲಿ ಅಭಿವೃದ್ದಿಪಡಿಸುವ ಅಗತ್ಯವಿದೆ. ಒಳಚರಂಡಿ ಇಲ್ಲದ ಕಡೆಗಳಲ್ಲಿ ವ್ಯವಸ್ಥಿತ ರೀತಿಯಲ್ಲಿ ಈ ವ್ಯವಸ್ಥೆಯನ್ನು ಕಲ್ಪಿಸುವ ಜರೂರಿ ಇದೆ. ವರ್ಷದೊಳಗೆ ಈ ಕಾರ್ಯಗಳನ್ನು ನಿರ್ವಹಿಸಲು ಎಲ್ಲ ಕ್ರಮ ಜರಗಿಸಲಾಗುವುದು ಎಂದು ಹೇಳಿದರು.

ಮಂಗಳೂರು ನಗರವನ್ನು ಸ್ವಚ್ಛ ನಗರ ಮಾದರಿ ನಗರವನ್ನಾಗಿ ರೂಪಿಸುವುದು ಬಹು ಅಗತ್ಯ. ಮಂಗಳೂರು ನಗರವನ್ನು ಹಸಿರು ನಗರಿಯನ್ನಾಗಿಸುವ ಮೂಲಕ ಈ ಕಡಲತಡಿಯನ್ನು ಮತ್ತಷ್ಟು ಸುಂದರೀಕರಣಕ್ಕೆ ಯೋಜನೆ ರೂಪಿಸಲಾಗುವುದು ಎಂದು ನುಡಿದರು.

ನಗರದಲ್ಲಿರುವ ಹಲವಾರು ಕರೆಗಳು ಪಾಳು ಬಿದ್ದಿವೆ. ಈ ಕರೆಗಳನ್ನು ಅಭಿವೃದ್ಧಿªಪಡಿಸಿದರೆ ನಗರಕ್ಕೆ ಪರ್ಯಾಯ ನೀರಿನ ಸೆಲೆ ದೊರೆತಂತಾಗುತ್ತದೆ. ನಗರದ ಪರಿಸರ ಹಾಗೂ ಸೌಂದರೀಕರಣಕ್ಕೂ ಈ ಕರೆಗಳ ಅಭಿವೃದ್ದಿ ಪೂರಕವಾಗಲಿವೆ ಎಂದು ಹೇಳಿದರು. ನೇತ್ರಾವತಿ ನದಿಗೆ ಬಂಟ್ವಾಳದಿಂದ ಹಿಡಿದು ಉಳ್ಳಾಲದವರೆಗೆ ಹಾಗೂ ಘಲ್ಗುಣಿ ನದಿಗೆ ಗುರುಪುರದಿಂದ ಹಿಡಿದು ಬಂದರುತನಕ ಕೊಳಚೆ ನೀರು ಸೇರುತ್ತಿದೆ.

ಇದು ಪರಿಸರದ ಮೇಲೆ ತೀವ್ರವಾದ ಪರಿಣಾಮ ಬೀರುವುದಲ್ಲದೆ ನಗರದ ಸ್ವಾಸ್ಥ್ಯವನ್ನು ಹಾಳುಗೆಡುತ್ತಿದೆ. ಇದನ್ನು ತಡೆಯುವುದು ಅತ್ಯಗತ್ಯವಾಗಿದೆ. ದೀರ್ಘ‌ಕಾಲಿನ ಯೋಜನೆಯೊಂದನ್ನು ಕೇಂದ್ರ ಸರಕಾರದ ನೆರವಿನಿಂದ ಜಾರಿಗೊಳಿಸಲು ಯೋಜನೆ ರೂಪಿಸುವುದಾಗಿ ಅವರು ವಿವರಿಸಿದರು.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.