ಕರಾವಳಿ ಜಿಲ್ಲೆಗಳಲ್ಲಿ “ಪ್ರಜಾಪ್ರಭುತ್ವದ ಹಬ್ಬ ‘ಯಶಸ್ವಿ


Team Udayavani, May 13, 2018, 9:25 AM IST

karavali.png

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ಬಿರುಸಿನ ಹಾಗೂ ಶಾಂತಿಯುತ ಮತದಾನವಾಗಿದ್ದು, ಒಟ್ಟು ಎಂಟು ಕ್ಷೇತ್ರಗಳಲ್ಲಿ ಒಟ್ಟಾರೆ ಶೇ. 77.63ರಷ್ಟು ಮತದಾನ ದಾಖಲಾಗಿದೆ. 

2013ಕ್ಕಿಂತ ಈ ಬಾರಿ ಶೇ. 3.25ರಷ್ಟು ಅಧಿಕ ಮತದಾನವಾಗಿದೆ. ಜಿಲ್ಲೆಯಲ್ಲಿ ಒಟ್ಟು 8 ಕ್ಷೇತ್ರಗಳಿದ್ದು, ಎಲ್ಲ ಕ್ಷೇತ್ರಗಳ ಬಹುತೇಕ ಬೂತ್‌ಗಳಲ್ಲಿ ಬೆಳಗ್ಗೆ 7 ಗಂಟೆಗೆ ಮತದಾನ ಪ್ರಾರಂಭಗೊಂಡಾಗಿನಿಂದಲೇ ಮತ ದಾರರು ಬಹಳ ಉತ್ಸುಕತೆಯಿಂದ ಸರದಿಯಲ್ಲಿ ನಿಂತಿದ್ದ ದೃಶ್ಯ ಬಹುತೇಕ ಎಲ್ಲ ಮತಗಟ್ಟೆಗಳಲ್ಲಿಯೂ ಕಂಡು ಬಂದಿತ್ತು. ಕೆಲವು ಮತಗಟ್ಟೆಗಳಲ್ಲಿ ಮುಂಜಾನೆ 6.45ರ ವೇಳೆಗೇ ಮತದಾರರು ತಮ್ಮ ಹಕ್ಕು ಚಲಾಯಿಸುವುದಕ್ಕೆ ಬಂದು ಕಾದು ಕುಳಿತದ್ದು ವಿಶೇಷ. 

ಈ ಬಾರಿ ವಿ.ವಿ. ಪ್ಯಾಟ್‌ ವ್ಯವಸ್ಥೆ ಅಳವಡಿಸಿದ್ದ ಕಾರಣಕ್ಕೆ ಮತದಾನ ಪ್ರಕ್ರಿಯೆ ಕೊಂಚ ತಡವಾಗಿತ್ತು. ಜಿಲ್ಲೆಯ ಬಹುತೇಕ ಎಲ್ಲ ಮತ ಗಟ್ಟೆಗಳಲ್ಲಿ ಮಧ್ಯಾಹ್ನದ ವೇಳೆಗೆ ಶೇ.50ಕ್ಕಿಂತ ಅಧಿಕ ಮತದಾರರು ಮತ ಚಲಾಯಿಸಿದ್ದು ಮತ್ತೂಂದು ವಿಶೇಷ. ಮಧ್ಯಾಹ್ನದ ಬಳಿಕ ಮತದಾನ ಮಂದ ಗತಿಯಲ್ಲೇ ಸಾಗಿತ್ತು. 

ಮತಯಂತ್ರ ಸಂಬಂಧ 24 ಕಂಟ್ರೋಲ್‌ ಯೂನಿಟ್‌, 21 ಬ್ಯಾಲೆಟ್‌ ಯೂನಿಟ್‌ ಹಾಗೂ 42 ವಿವಿ ಪ್ಯಾಟ್‌ಗಳಲ್ಲಿ ತಾಂತ್ರಿಕ ದೋಷ ಕಂಡುಬಂದಿತ್ತು. ತತ್‌ಕ್ಷಣ ತಂತ್ರಜ್ಞ ರನ್ನು ಕರೆಸಿ ಅವುಗಳನ್ನು ಬದಲಾಯಿಸಿ ಮತದಾನ ಮುಂದುವರಿಕೆ ಅವಕಾಶ ಮಾಡಿಕೊಡಲಾಯಿತು.

ಶಾಂತಿಯುತ ಮತದಾನ
ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಪ್ರಕ್ರಿಯೆ ಸಂಜೆ 6 ಗಂಟೆ ತನಕ ನಡೆದಿದ್ದು, ಜಿಲ್ಲೆಯ ಯಾವುದೇ ಮತಗಟ್ಟೆಯಲ್ಲಿಯೂ ಅಹಿತಕರ ಘಟನೆ ಆಗಿರುವ ಬಗ್ಗೆ ವರದಿಯಾಗಿಲ್ಲ. ಶಾಂತಿಯುತ ಮತದಾನ ನಡೆಸುವಲ್ಲಿ ಒಂದು ಕಡೆ ಮತದಾರರು ಪೂರ್ಣ ಸಹಕಾರ ನೀಡಿದ್ದರೆ, ಇನ್ನೊಂದೆಡೆ ಜಿಲ್ಲಾಡಳಿತ ಹಾಗೂ ಪೊಲೀಸ್‌ ಇಲಾಖೆ ಕೂಡ ಪರಿಣಾಮಕಾರಿಯಾಗಿ ಬಂದೋಬಸ್ತ್ ಕೈಗೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. 

ನಿಷೇಧಾಜ್ಞೆ ಅಂತ್ಯ
ಮುಕ್ತ ಹಾಗೂ ಶಾಂತಿಯುತ ಮತದಾನ ನಡೆಸುವ ದೃಷ್ಟಿಯಿಂದ ಗುರುವಾರ (ಮೇ 10) ಸಂಜೆ 6 ಗಂಟೆಯಿಂದಲೇ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಜಿಲ್ಲಾದ್ಯಂತ ಸಿಆರ್‌ಪಿಸಿ ಸೆಕ್ಷನ್‌ 144 ಅನ್ವಯ ಜಾರಿಗೊಳಿಸಿದ್ದ ನಿಷೇಧಾಜ್ಞೆಯನ್ನು ಶನಿವಾರ ಸಂಜೆ 6 ಗಂಟೆ ವೇಳೆಗೆ ಮುಕ್ತಾಯವಾಗಿದೆ. ಮದ್ಯ ಮಾರಾಟ ನಿಷೇಧವು ಮಧ್ಯ ರಾತ್ರಿ 12 ಗಂಟೆ ವೇಳೆಗೆ ಕೊನೆಗೊಂಡಿದೆ.

ಮತದಾರರಿಗೆ ವರದಾನವಾದ ಹವಾಮಾನ
ಮೂರ್ನಾಲ್ಕು ದಿನಗಳ ಹಿಂದೆ ಜಿಲ್ಲೆಯಲ್ಲಿ ಸುಡು ಬಿಸಿಲಿನ ತಾಪವಿದ್ದು, ಜನರು ಮನೆಯಿಂದ ಹೊರಗೆ ಕಾಲಿಡಲು ಭಯ ಪಡುವ ಪರಿಸ್ಥಿತಿ ಇತ್ತು. ಆದರೆ ಕಳೆದ ಎರಡು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಮಳೆ ಬಂದಿದೆ. ಶುಕ್ರವಾರ ರಾತ್ರಿ ಧಾರಾಕಾರ ಮಳೆಯಾಗಿದ್ದು, ಇದರಿಂದಾಗಿ ಶನಿವಾರ ಮಧ್ಯಾಹ್ನದವರೆಗೆ ತಂಪು ವಾತಾವರಣವಿತ್ತು. ಇದರಿಂದ ಮತದಾರರಿಗೂ ಸೆಕೆ ಯಿಂದ ಅಷ್ಟೊಂದು ಕಿರಿಕಿರಿಯಾಗಿರಲಿಲ್ಲ. ಜತೆಗೆ ಮತದಾನದ ದಿನವಾದ ಶನಿವಾರ ಮಧ್ಯಾಹ್ನದ ಅನಂತರ ಜಿಲ್ಲೆಯಲ್ಲಿ ಭಾರೀ ಮಳೆ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದರೂ ಸಂಜೆ 6 ಗಂಟೆವರೆಗೆ ಮಳೆ ಬಾರದ್ದು ಮತದಾರರಿಗೆ ವರದಾನವಾಗಿದ್ದು, ಎಲ್ಲಿಯೂ ಮತದಾನಕ್ಕೆ ಮಳೆ ಅಡ್ಡಿಪಡಿಸಿಲ್ಲ. ಮತದಾನ ಪ್ರಮಾಣ ಹೆಚ್ಚಳಕ್ಕೆ ಇದೂ ಒಂದು ಕಾರಣವಾಗಿದೆ.

ಶೇ. 3.25 ಹೆಚ್ಚಳ
ಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಳೆದ ಬಾರಿಗೆ ಹೋಲಿಸಿದರೆ ಒಟ್ಟು ಮತದಾನದ ಶೇಕಡಾವಾರು ಪ್ರಮಾಣದಲ್ಲಿ 3.25 ಹೆಚ್ಚಳವಾಗಿದೆ. 2013ರ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು ಶೇ. 74.48 ಮತದಾನವಾಗಿತ್ತು.

ಮೇ 15: ಅಭ್ಯರ್ಥಿಗಳ ಭವಿಷ್ಯ 
ಮತದಾರರು ನೀಡಿದ ತೀರ್ಪು ಮತ ಯಂತ್ರಗಳಲ್ಲಿ ಭದ್ರವಾಗಿದ್ದು, ಕಣದಲ್ಲಿದ್ದ 58 ಮಂದಿಯ ಭವಿಷ್ಯ ಮೇ 15ರಂದು ಪ್ರಕಟವಾಗಲಿದೆ. 

ಬಸ್‌ ವಿಳಂಬ
ಜಿಲ್ಲೆಯ ಮತದಾರರಾಗಿದ್ದು, ದೂರದ ಮುಂಬಯಿ ಮತ್ತು ಬೆಂಗಳೂರಿನಲ್ಲಿದ್ದವರು ಬಸ್‌, ರೈಲುಗಳಲ್ಲಿ ಆಗಮಿಸಿದ್ದರು. ಬಸ್‌ಗಳಲ್ಲಿ ಪ್ರಯಾಣಿಕರ ಒತ್ತಡ ಜಾಸ್ತಿ ಇದ್ದ ಕಾರಣ ಶನಿವಾರ ಬೆಳಗ್ಗೆ ಬಸ್‌ಗಳು 
ವಿಳಂಬವಾಗಿ ಮಂಗಳೂರಿಗೆ ತಲುಪಿದವು. 

ಜನರಿಲ್ಲ: ಮಾಲ್‌, ಅಂಗಡಿ ಬಂದ್‌
ಮಂಗಳೂರಿನಲ್ಲಿ ವಾಹನ ಮತ್ತು ಜನ ಸಂಚಾರ ವಿರಳವಾಗಿತ್ತು. ಜನ ಸಂಚಾರ ಕಡಿಮೆಯಾಗಿದ್ದರಿಂದ‌ ಪ್ರಮುಖ ಮೂರು ಮಾಲ್‌ಗ‌ಳು ಸಹಿತ ಹಲವು ಅಂಗಡಿಗಳನ್ನು ಮುಚ್ಚಲಾಗಿತ್ತು. ಸಂಜೆ ವೇಳೆಗೆ ಕೆಲವು ಅಂಗಡಿಗಳು ತೆರೆದಿದ್ದವು. 

ನಗರದಲ್ಲಿ  ಕನಿಷ್ಠ-ಗ್ರಾಮೀಣದಲ್ಲಿ  ಗರಿಷ್ಠ‌
ಬೆಳ್ತಂಗಡಿ ಕ್ಷೇತ್ರದಲ್ಲಿ ಒಟ್ಟು ಶೇ.81.40, ಮೂಡಬಿದಿರೆಯಲ್ಲಿ ಶೇ.75.41, ಮಂಗಳೂರು ದಕ್ಷಿಣದಲ್ಲಿ ಶೇ.67.47, ಮಂಗಳೂರು ಉತ್ತರ ಕ್ಷೇತ್ರದಲ್ಲಿ ಶೇ.74.55, ಮಂಗಳೂರು ಕ್ಷೇತ್ರದಲ್ಲಿ ಶೇ.75.73, ಬಂಟ್ವಾಳ ಕ್ಷೇತ್ರದಲ್ಲಿ ಶೇ.81.89, ಪುತ್ತೂರು ಕ್ಷೇತ್ರದಲ್ಲಿ ಶೇ.81.70 ಹಾಗೂ ಸುಳ್ಯ ಕ್ಷೇತ್ರದಲ್ಲಿ ಶೇ.83.00 ಮತದಾನ ದಾಖಲಾಗಿದೆ. ಮತದಾನ ಪ್ರಮಾಣ ನೋಡಿದರೆ, ಅತೀ ಹೆಚ್ಚು ಮತದಾನ ಸುಳ್ಯ ಕ್ಷೇತ್ರದಲ್ಲಿ ಹಾಗೂ ಅತೀ ಕಡಿಮೆ ಮತದಾನ ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಆಗಿದೆ. 

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.