ಎತ್ತಿನಹೊಳೆ: ಅರ್ಧ ಕಾಮಗಾರಿ ಮುಗಿದ ಬಳಿಕ ನೀರು ಇದೆಯಾ ಟೆಸ್ಟಿಂಗ್‌!


Team Udayavani, May 26, 2018, 5:04 AM IST

yetthinahole-project-new-600.jpg

ಮಂಗಳೂರು: ಎತ್ತಿನಹೊಳೆ ಯೋಜನೆಯ ಮೂಲಕ ಬಯಲು ಸೀಮೆ ಜಿಲ್ಲೆಗಳಿಗೆ ನಿರೀಕ್ಷಿತ ನೀರು ಲಭ್ಯವಾಗುವುದಿಲ್ಲ ಎಂದು ವಿಜ್ಞಾನಿಗಳು, ನೀರಾವರಿ ತಜ್ಞರು ಹಾಗೂ ಪರಿಣತರು ಹೇಳುತ್ತಿದ್ದರೂ ಯಾವುದನ್ನೂ ಲೆಕ್ಕಿಸದೆ ಯೋಜನೆಗೆ ಮುಂದಾದ ಸರಕಾರಕ್ಕೆ ಇದೀಗ ದೊಡ್ಡ ಕಂಟಕವೊಂದು ಎದುರಾಗಿದೆ. ಯೋಜನೆಯ ಬಗ್ಗೆ ವಿಚಾರಣೆ ಕೈಗೊಂಡಿರುವ ರಾಷ್ಟ್ರೀಯ ಹಸಿರು ಪೀಠದ ಆದೇಶದಂತೆ ಕಾಮಗಾರಿ ಕೈಗೊಳ್ಳುವ 8 ಅಣೆಕಟ್ಟುಗಳ ತಳಭಾಗದಲ್ಲಿ ನೀರಿನ ಪ್ರಮಾಣವನ್ನು ಅಳತೆ ಮಾಡುವ ‘ಟೆಲಿಮಿಟ್ರಿ ಸ್ಟೀಮ್‌ ಫ್ಲೋ ಮೀಟರ್’ ಅಳವಡಿಸುವಂತೆ ಸೂಚಿಸಿದೆ.

ನೇತ್ರಾವತಿ ಉಪನದಿಗಳಾದ ಎತ್ತಿನಹಳ್ಳ, ಕಾಡುಮನೆ ಹೊಳೆ, ಹೊಂಗದಹಳ್ಳ, ಕೇರಿಹೊಳೆಗೆ ಪಶ್ಚಿಮಘಟ್ಟ ವ್ಯಾಪ್ತಿಯಲ್ಲಿ ತಲಾ 2ರಂತೆ ಒಟ್ಟು 8 ಅಣೆಕಟ್ಟು ಕಟ್ಟುವ ಕಾಮಗಾರಿ ಈಗಾಗಲೇ ನಡೆಯುತ್ತಿದ್ದು, ಅದೇ ಜಾಗದಲ್ಲಿ ನೀರಿನ ಪ್ರಮಾಣ ಅಳವಡಿಕೆಗೆ ಮೀಟರ್‌ ಅಳವಡಿಸುವ ಪ್ರಕ್ರಿಯೆಯೂ ಇದೀಗ ನಡೆಯುತ್ತಿದೆ. ಜರ್ಮನಿ ಮೂಲದ ಕ್ಯಾನರಿ ಆಟೋಮೆಷನ್‌ ಪ್ರೈ.ಲಿ. ಕಂಪೆನಿಗೆ ಸಂಬಂಧಿಸಿದ ಮೀಟರ್‌ ಗಳನ್ನು ಅಳವಡಿಸಲಾಗುತ್ತಿದೆ.

8 ಅಣೆಕಟ್ಟುಗಳ ತಳಮಟ್ಟದಲ್ಲಿ ಇಡಲಾಗುವ ಮೀಟರ್‌ ನ ಸಹಾಯದಿಂದ ಆ ವ್ಯಾಪ್ತಿಯಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ? ಅದರಲ್ಲಿ ಎಷ್ಟು ನೀರನ್ನು ಬಯಲು ಸೀಮೆ ಭಾಗಕ್ಕೆ ಕಳುಹಿಸಲಾಗುವುದು ಹಾಗೂ ಕೆಳಾಭಿಮುಖವಾಗಿ (ದಕ್ಷಿಣ ಕನ್ನಡ ಕಡೆಗೆ) ಹರಿಯುವ ನೀರಿನ ಪ್ರಮಾಣ ಎಷ್ಟು ಎಂಬ ನಿಖರ ಮಾಹಿತಿಯನ್ನು ಸಂಗ್ರಹಿಸಬಹುದು. ಇದೇ ಅಂಶದ ಮಾನದಂಡವನ್ನು ನ್ಯಾಯಾಲಯದಲ್ಲಿ ವಿಚಾರಣೆ ಸಂದರ್ಭ ಪರಿಗಣಿಸುವ ಸಾಧ್ಯತೆಯೂ ಇದೆ.

ಎತ್ತಿನಹೊಳೆ ಯೋಜನೆಯ ಕಾಮಗಾರಿ ಕೈಗೊಳ್ಳುವ ಸಂದರ್ಭದಲ್ಲಿ, ಅದರಲ್ಲಿಯೂ ಡ್ಯಾಂ ನಿರ್ಮಿಸುವ ಸ್ಥಳದಲ್ಲಿ ನೀರಿನ ಲಭ್ಯತೆ ಅಧಿಕವಾಗಿ ಕಾಮಗಾರಿ ನಡೆಸಲು ಕಷ್ಟವಾದ ಉದಾಹರಣೆ ಇಲ್ಲ. ಜತೆಗೆ ಡ್ಯಾಂ ನಿರ್ಮಿಸುವ ಸ್ಥಳದಲ್ಲಿ ನೀರು ಸಂಗ್ರಹಗೊಂಡು ಕಾಮಗಾರಿಗೆ ಸಮಸ್ಯೆ ಆಗಿರುವ ಬಗ್ಗೆಯೂ ವರದಿ ಇಲ್ಲ. ಹೀಗಿರುವಾಗ 24 ಟಿಎಂಸಿಯಷ್ಟು ನೀರು ಸಿಗಲಾರದು ಎಂದು ಗೊತ್ತಿದ್ದರೂ ಇದನ್ನು ಪರಿಗಣಿಸದೆ ಯೋಜನೆಯನ್ನು ಮುಂದುವರಿಸಿಕೊಂಡು ಬರಲಾಗುತ್ತಿರುವ ಸರಕಾರ ಈಗ ಉತ್ತರ ನೀಡಬೇಕಿದೆ ಎಂದು ಹೋರಾಟಗಾರರು ತಿಳಿಸುತ್ತಾರೆ.

ಈ ಬಗ್ಗೆ ‘ಉದಯವಾಣಿ’ ಜತೆಗೆ ಪ್ರತಿಕ್ರಿಯೆ ನೀಡಿದ ರಾಜ್ಯ ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ಬಿ.ಜಿ. ಗುರುಪಾದಸ್ವಾಮಿ ಅವರು, ‘ಎತ್ತಿನಹೊಳೆ ಯೋಜನಾ ಪ್ರದೇಶದ ಡ್ಯಾಂ ಭಾಗದಲ್ಲಿ ನೀರಿನ ಲಭ್ಯತೆಯ ಪ್ರಮಾಣವನ್ನು ಲೆಕ್ಕ ಹಾಕುವ ನೆಲೆಯಲ್ಲಿ ಮೀಟರ್‌ ಅಳವಡಿಸಲಾಗುತ್ತಿದೆ. ಈಗಾಗಲೇ ಇದರ ಕಾಮಗಾರಿ ಆರಂಭಗೊಂಡಿದೆ’ ಎಂದರು. 

3.3 ಕೋ.ರೂ.ಗಳ ಮೀಟರ್‌!
ಎತ್ತಿನಹೊಳೆ ಯೋಜನೆಗೆ ಸಾವಿರಾರು ಕೋ.ರೂ.ಗಳ ಅಂದಾಜು ವೆಚ್ಚದ ನಿರೀಕ್ಷೆ ಇದೆ. ಕಾಮಗಾರಿಯಿಂದಾಗಿ ಈಗಾಗಲೇ ಪಶ್ಚಿಮಘಟ್ಟ ಸೇರಿದಂತೆ ಪರಿಸರ ಸಂಪೂರ್ಣ ನಾಶವಾಗುವ ಆತಂಕದಲ್ಲಿದೆ. ಇಷ್ಟಿರುವಾಗಲೇ ಇದೀಗ ಎತ್ತಿನಹೊಳೆ ಪ್ರದೇಶದಲ್ಲಿ ನೀರು ಅಳತೆ ಮಾಡಲು ಅಳವಡಿಸುತ್ತಿರುವ ಜರ್ಮನ್‌ ತಂತ್ರಜ್ಞಾನದ ಮೀಟರ್‌ಗೆ 3.3 ಕೋ.ರೂ. ವೆಚ್ಚ ಮಾಡಲಾಗುತ್ತಿದೆ. 

‘ಸರಕಾರ ನೀರಿನ ಲೆಕ್ಕ ಈಗ ನೀಡಲಿ’
‘ದ.ಕ. ಜಿಲ್ಲೆಯ ವ್ಯಾಪಕ ವಿರೋಧದ ನಡುವೆಯೇ ತರಾತುರಿಯಲ್ಲಿ ಎತ್ತಿನಹೊಳೆ ಯೋಜನೆಯನ್ನು ಕೈಗೆತ್ತಿಕೊಂಡು ಕಾಮಗಾರಿ ನಡೆಸಲಾಗುತ್ತಿದೆ. ಅಲ್ಲಿ ನೀರು ಇಲ್ಲ ಎಂದು ಹೇಳಿದರೂ ಕೂಡ ಕೇಳದ ಸರಕಾರ ನೀರು ಇದೆ ಎಂದು ಹಠ ತೋರಿಸಿತ್ತು. ಇದೀಗ ಅಲ್ಲಿನ ನೀರಿನ ಪ್ರಮಾಣದ ಬಗ್ಗೆ ಲೆಕ್ಕ ನೀಡುವಂತೆ ರಾಷ್ಟ್ರೀಯ ಹಸಿರು ಪೀಠವು ಸೂಚಿಸಿದ ಮೇರೆಗೆ ಮೀಟರ್‌ ಅಳವಡಿಕೆಗೆ ಸರಕಾರ ಮುಂದಾಗಿದೆ’.
– ಕೆ.ಎನ್‌. ಸೋಮಶೇಖರ್‌, ಎತ್ತಿನಹೊಳೆ ಯೋಜನೆ ವಿರೋಧಿ ಹೋರಾಟ ಸಮಿತಿ

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.