ಟ್ರಾಫಿಕ್‌ ಜಾಮ್‌ : ಮಳೆಗಾಲ ಶುರುವಾದರೆ ಸವಾರರ ಪರದಾಟ


Team Udayavani, May 29, 2018, 5:05 AM IST

pumpwell-circle-28-5.jpg

ವಿಶೇಷ ವರದಿ
ಮಹಾನಗರ:
ರಾಷ್ಟ್ರೀಯ ಹೆದ್ದಾರಿ 66ರ ತಲಪಾಡಿ -ನಂತೂರು ಚತುಷ್ಪಥ ಕಾಮಗಾರಿ ಆರಂಭವಾಗಿ 8 ವರ್ಷ ಕಳೆದರೂ ಇನ್ನೂ ಪೂರ್ತಿಗೊಂಡಿಲ್ಲ. ಅದರಲ್ಲಿಯೂ ಈ ಹೆದ್ದಾರಿಯಲ್ಲಿರುವ ಪ್ರಮುಖ ಜಂಕ್ಷನ್‌ ಗಳಾದ ಪಂಪ್‌ ವೆಲ್‌ ಮತ್ತು ತೊಕ್ಕೊಟ್ಟಿನಲ್ಲಿ ಫ್ಲೈಓವರ್‌ ನಿರ್ಮಾಣ ಕಾಮಗಾರಿ 6 ವರ್ಷಗಳ ಹಿಂದೆ ಆರಂಭವಾಗಿದ್ದು, ಆಮೆಗತಿಯಲ್ಲಿ ನಡೆಯುತ್ತಿದೆ. ಇನ್ನು ಮಳೆಗಾಲ ಶುರು ವಾದರೆ, ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರ ಪರದಾಟ ಹೇಳತೀರದು. ಕಾಮಗಾರಿ ಕುಂಟುತ್ತಾ ಸಾಗುತ್ತಿದ್ದು, ಇನ್ನೂ ಶೇ. 80ರಷ್ಟು ಬಾಕಿ ಇದೆ. ಎರಡೂ ಕಡೆ ಕಾಂಕ್ರೀಟ್‌ ಪಿಲ್ಲರ್‌ ಗಳ ನಿರ್ಮಾಣವೇ ಇನ್ನೂ ಪೂರ್ತಿಗೊಂಡಿಲ್ಲ. ತೊಕ್ಕೊಟ್ಟಿನಲ್ಲಿ ಎರಡೂ ಬದಿ ಸರ್ವೀಸ್‌ ರಸ್ತೆ ನಿರ್ಮಾಣ ಮಾಡಲಾಗಿದ್ದು, ವಾಹನ ಸಂಚಾರಕ್ಕೇ ವ್ಯವಸ್ಥೆ ಮಾಡಿ ಕೊಡಲಾಗಿದೆ. ಆದರೆ ಪಂಪ್‌ ವೆಲ್‌ ನಲ್ಲಿ ಸರ್ವೀಸ್‌ ರಸ್ತೆ ನಿರ್ಮಾಣದ ಕೆಲಸ ಶೇ.50ರಷ್ಟು ಕೂಡ ಮುಗಿದಿಲ್ಲ.

ಪರಿಸ್ಥಿತಿ ಆಯೋಮಯ
ಧಾರಾಕಾರ ಮಳೆ ಬಂದರೆ ಪಂಪ್‌ ವೆಲ್‌ ಮತ್ತು ತೊಕ್ಕೊಟ್ಟು ಜಂಕ್ಷನ್‌ ಗಳೆರಡರಲ್ಲಿ ಯೂ ಪರಿಸ್ಥಿತಿ ಆಯೋಮಯ. ಫ್ಲೈಓವರ್‌ ನ ರ್‍ಯಾಂಪ್‌ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಇದಕ್ಕಾಗಿ ಮುಖ್ಯ ರಸ್ತೆಯ ಭಾಗವನ್ನು ಅಗೆದು ಎರಡೂ ಬದಿ ಸಿಮೆಂಟ್‌ ಕಾಂಕ್ರೀಟ್‌ ಸ್ಲ್ಯಾಬ್‌ ಗಳನ್ನು ತಡೆಗೋಡೆಗಳನ್ನಾಗಿ ಉಪಯೋಗಿಸಿ ಮಧ್ಯಭಾಗದಲ್ಲಿ ಮಣ್ಣು ತುಂಬಿಸುವ ಕೆಲಸ ಪ್ರಗತಿಯಲ್ಲಿದೆ.

ಆದರೆ ಇದೀಗ ಮಳೆ ಆರಂಭವಾಗಿದ್ದು, ಒಂದು ದಿನ ಸಾಮಾನ್ಯ ಮಳೆ ಬಂದರೆ ಮೂರು ದಿನ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ದಿನಂಪ್ರತಿ ಮಳೆ ಬಂದರೆ ಕೆಲಸ ಮಾಡುವಂತೆಯೇ ಇಲ್ಲ. ಧಾರಾಕಾರ ಮಳೆ ಬಂದರೆ ರ್‍ಯಾಂಪ್‌ ನಿರ್ಮಾಣಕ್ಕಾಗಿ ಅಗೆದ ಜಾಗದಲ್ಲಿ ನೀರು ತುಂಬಿ ರಸ್ತೆ ಯಾವುದು? ಹೊಂಡ ಯಾವುದು ಎಂದು ತಿಳಿಯದಂತಾಗುವುದು. ಇದರಿಂದ ಅಪಘಾತ ಸಂಭವಿಸುವ ಸಾಧ್ಯತೆ ಹೆಚ್ಚು. ಅಲ್ಲದೆ ನಿರಂತರವಾಗಿ ದಿನವಿಡೀ ಮಳೆ ಸುರಿದರೆ ಈ ಪ್ರದೇಶಗಳಲ್ಲಿ ಸಂಚಾರವನ್ನು ನಿಷೇಧಿಸ ಬೇಕಾಗಿಯೂ ಬರಬಹುದು!

ಚರಂಡಿ ವ್ಯವಸ್ಥೆ ಇಲ್ಲ
ಎರಡೂ ಜಕ್ಷನ್‌ ಗಳಲ್ಲಿ ಮಳೆ ನೀರು ಹರಿದು ಹೋಗಲು ಸೂಕ್ತವಾದ ಚರಂಡಿ ವ್ಯವಸ್ಥೆಯೂ ಇಲ್ಲ. ಇರುವ ಚರಂಡಿಯ ದುರಸ್ತಿ ಕೂಡ ಆಗಿಲ್ಲ. ಪಂಪ್‌ ವೆಲ್‌ ಜಂಕ್ಷನ್‌ ನಲ್ಲಿ ಉಜ್ಜ್ಯೋಡಿಯಿಂದ ಪಂಪ್‌ ವೆಲ್‌ ತನಕ‌ ಸರ್ವೀಸ್‌ ರಸ್ತೆ ಭಾಗಶಃ ನಿರ್ಮಾಣವಾಗಿದ್ದು, ಉಳಿದರ್ಧ ಭಾಗ ನಿರ್ಮಾಣ ಹಂತದಲ್ಲಿದೆ. ಇಲ್ಲಿ ನೀರು ಹರಿದು ಹೋಗಲು ವ್ಯವಸ್ಥಿತ ಚರಂಡಿ ವ್ಯವಸ್ಥೆ ಇಲ್ಲ. ರಸ್ತೆ ಬದಿ ಬಹು ಮಹಡಿ ಕಟ್ಟಡ ನಿರ್ಮಾಣ ಹಂತದಲ್ಲಿದ್ದು, ಅದರ ಎದುರು ಚರಂಡಿಯ ಭಾಗದಲ್ಲಿ ಮಣ್ಣಿನ ರಾಶಿ ಇದೆ. ಧಾರಾಕಾರ ಮಳೆ ಸುರಿದರೆ ಮಣ್ಣೆಲ್ಲವೂ ಚರಂಡಿಯ ಪಾಲಾಗಲಿದ್ದು, ನೀರು ಹರಿಯಲು ಕಷ್ಟಕರವಾಗಬಹುದು.

ಯಾವುದೇ ಕ್ರಮಕೈಗೊಂಡಿಲ್ಲ
ಪಂಪ್‌ ವೆಲ್‌ ವೃತ್ತದಲ್ಲಿ ಬಿ.ಸಿ.ರೋಡ್‌ ಭಾಗದಿಂದ ಬರುವ ವಾಹನಗಳು ಸ್ವಲ್ಪ ಎಡ ಭಾಗಕ್ಕೆ ಹೋಗಿ ಬಳಿಕ ಬಲಕ್ಕೆ ತಿರುಗುವಲ್ಲಿ ರಸ್ತೆಯಲ್ಲಿ ಹೊಂಡ ನಿರ್ಮಾಣವಾಗಿದ್ದು, ಅದನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಟ್ರಾಫಿಕ್‌ ಪೊಲೀಸರು ಸುಮಾರು ಒಂದು ತಿಂಗಳ ಹಿಂದೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಯಾವುದೇ ಕ್ರಮ ಆಗಿಲ್ಲ.

ಸಂಭಾವ್ಯ ದುರಂತ ತಪ್ಪಿಸಿ
ಇಲ್ಲಿನ ಫಾದರ್‌ ಮುಲ್ಲರ್‌ ಕನ್ವೆನ್ಶನ್‌ ಹಾಲ್‌ ದ್ವಾರದ ಎದುರು ಸರ್ವೀಸ್‌ ರಸ್ತೆಯಲ್ಲಿ ನಿರ್ಮಾಣವಾಗಿದ್ದ ಹೊಂಡದ ಬಳಿ ಕಳೆದ ಎಪ್ರಿಲ್‌ 29ರಂದು ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್‌ ಸವಾರರೊಬ್ಬರು ಸಾವನ್ನಪ್ಪಿದ್ದು, ಈ ಘಟನೆ ಇನ್ನೂ ಜನಮಾನಸದಿಂದ ಮಾಸಿಲ್ಲ. ರಸ್ತೆಯ ಗುಂಡಿಗಳನ್ನು ಮುಚ್ಚಿ, ಚರಂಡಿಗಳಲ್ಲಿ ಸರಾಗವಾಗಿ ನೀರು ಹರಿದು ಹೋಗುವಂತೆ ವ್ಯವಸ್ಥೆ ಮಾಡಿದರೆ ಮಳೆಗಾಲದ ಸಂಭಾವ್ಯ ದುರಂತಗಳನ್ನು ತಪಿಸಲು ಸಾಧ್ಯವಿದೆ. 

ಭಯ ಪಡಬೇಕಿಲ್ಲ
ದಿನದ 24 ಗಂಟೆ ಕಾಲವೂ ನಮ್ಮ ಜನರು ಸೂಕ್ತ ಯಂತ್ರೋಪಕರಣಗಳೊಂದಿಗೆ (ಜೇಸಿಬಿ, ಜೀಪ್‌ ಇತ್ಯಾದಿ) ಪಂಪ್‌ ವೆಲ್‌ ಜಂಕ್ಷನ್‌ ನಲ್ಲಿ ಸನ್ನದ್ಧರಾಗಿ ಇರುತ್ತಾರೆ. ಯಾವುದೇ ಸನ್ನಿವೇಶವನ್ನು ಎದುರಿಸಲು ಇಲಾಖೆ ಸಿದ್ಧವಾಗಿದೆ. ಜನರು ಭಯ ಪಡುವ ಆವಶ್ಯಕತೆ ಇಲ್ಲ. 
– ಸ್ಯಾಮ್ಸನ್‌ ವಿಜಯ ಕುಮಾರ್‌, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನ ನಿರ್ದೇಶಕರು.

ಮನವಿ ನೀಡಿದರೂ ಸ್ಪಂದಿಸಿಲ್ಲ
ಪಂಪ್‌ ವೆಲ್‌ ಜಂಕ್ಷನ್‌ ನ ವೃತ್ತದಲ್ಲಿರುವ ರಸ್ತೆ ಹೊಂಡಗಳನ್ನು ಮುಚ್ಚುವಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಒಂದು ತಿಂಗಳಾದರೂ ಇನ್ನೂ ಯಾವುದೇ ಕ್ರಮ ಆಗಿಲ್ಲ. ಅದೇನು ದೊಡ್ಡ ಕೆಲಸವಲ್ಲ. ಅರ್ಧ ಲೋಡು ಡಾಮರು ಇದ್ದರೆ ಸಾಕು. 
– ಮಂಜುನಾಥ ಶೆಟ್ಟಿ,ಟ್ರಾಫಿಕ್‌ ವಿಭಾಗದ ಎ.ಸಿ.ಪಿ., ಮಂಗಳೂರು.

ಟಾಪ್ ನ್ಯೂಸ್

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

Fraud: ಕ್ರೈಂ ಬ್ರಾಂಚ್‌ ಹೆಸರಲ್ಲಿ 1.60 ಕೋ.ರೂ. ಪಡೆದು ವಂಚನೆ   

Fraud: ಕ್ರೈಂ ಬ್ರಾಂಚ್‌ ಹೆಸರಲ್ಲಿ 1.60 ಕೋ.ರೂ. ಪಡೆದು ವಂಚನೆ   

Mangaluru: ಅಪಹರಿಸಲು ಸುಪಾರಿ; ಇಬ್ಬರ ಬಂಧನ

Mangaluru: ಅಪಹರಿಸಲು ಸುಪಾರಿ; ಇಬ್ಬರ ಬಂಧನ

Mangaluru: ಟಿಪ್ಪರ್‌ ಲಾರಿ ಹರಿದು ಸ್ಕೂಟರ್‌ ಸವಾರ ಸಾವು

Mangaluru: ಟಿಪ್ಪರ್‌ ಲಾರಿ ಹರಿದು ಸ್ಕೂಟರ್‌ ಸವಾರ ಸಾವು

Mangaluru: ರೈಲು ನಿಲ್ದಾಣದ ಬಳಿ ಗಲಾಟೆ; ಪ್ರಕರಣ ದಾಖಲು

Mangaluru: ರೈಲು ನಿಲ್ದಾಣದ ಬಳಿ ಗಲಾಟೆ; ಪ್ರಕರಣ ದಾಖಲು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

Sandalwood; ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

MASOCON

MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.