ಕೋಸ್ಟಲ್‌ ಹಾಡಿಗೆ ತಲೆತೂಗಿದ ಸ್ಯಾಂಡಲ್‌ವುಡ್‌ ಸ್ಟಾರ್!


Team Udayavani, May 31, 2018, 3:30 PM IST

31-may-11.jpg

ತುಳು ಸಿನೆಮಾ ಇಂದು ಕೋಸ್ಟಲ್‌ ಭಾಗಕ್ಕಷ್ಟೇ ಸೀಮಿತವಾಗಿಲ್ಲ. ಕೋಸ್ಟಲ್‌ ಗಡಿಯನ್ನು ದಾಟಿ ಮಿಂಚುತ್ತಿದೆ. ತುಳುವೇತರರು ಇರುವ ಜಾಗದಲ್ಲೂ ತುಳು ಸಿನೆಮಾ ಎದ್ದು ನಿಲ್ಲುವಷ್ಟರ ಮಟ್ಟಿಗೆ ಸಿನೆಮಾ ರೆಡಿಯಾಗಿದೆ ಎಂಬ ಹೆಮ್ಮೆ ಕೋಸ್ಟಲ್‌ವುಡ್‌ನ‌ದ್ದು. ಇಂತಹ ಅಪರೂಪದ ಸನ್ನಿವೇಶದ ಮಧ್ಯೆಯೇ ತುಳು ಸಿನೆಮಾವನ್ನು ಕೋಸ್ಟಲ್‌ವುಡ್‌ ಸ್ಟಾರ್ ಕೂಡ ಮೆಚ್ಚಿ ಕೊಂಡಾಡುತ್ತಿರುವುದು ಇನ್ನೊಂದು ಹೆಮ್ಮೆಯ ಸಂಗತಿ.

ಚಿತ್ರನಟರಾದ ಶಿವರಾಜ್‌ ಕುಮಾರ್‌, ದರ್ಶನ್‌, ಸುದೀಪ್‌ ಈಗಾಗಲೇ ತುಳು ಸಿನೆಮಾವನ್ನು ಕೊಂಡಾಡಿದ್ದಾರೆ. ತುಳುವಿನ ಮೂರು ಸಿನೆಮಾದ ಆಡಿಯೋ ರಿಲೀಸ್‌ ಮಾಡುವ ಮೂಲಕ ಸ್ಯಾಂಡಲ್‌ವುಡ್‌ ನಟರು ತುಳು ಸಿನೆಮಾವನ್ನು ಮೆಚ್ಚಿದ್ದಾರೆ. ಇದು ತುಳು ಸಿನೆಮಾದ ಐಡೆಂಟಿಟಿಯನ್ನು ಹೆಚ್ಚು ಮಾಡಿದೆ ಎಂದು ಹೇಳುವುದು ಅತಿಶಯೋಕ್ತಿಯಲ್ಲ. ಕೋಸ್ಟಲ್‌ವುಡ್‌ನ‌ಲ್ಲಿ ಬಹುನಿರೀಕ್ಷೆ ಮೂಡಿಸಿದ ಸೂರಜ್‌ ಶೆಟ್ಟಿ ನಿರ್ದೇಶನದ ‘ಅಮ್ಮೆರ್‌ ಪೊಲೀಸಾ’ ಚಿತ್ರ ರಿಲೀಸ್‌ನ ಹೊಸ್ತಿಲಲ್ಲಿದೆ. 

ಈಗ ಈ ಸಿನೆಮಾದ ಆಡಿಯೋ ರಿಲೀಸ್‌ ಸುದ್ದಿ ಇಲ್ಲದೆ ಮಾಡಿ ಮುಗಿಸಲಾಗಿದೆ. ವಿಶೇಷವೆಂದರೆ, ಚಿತ್ರನಟ ದರ್ಶನ್‌ ಅವರೇ ‘ಅಮ್ಮೆರ್‌ ಪೊಲೀಸಾ’ ಚಿತ್ರದ ಆಡಿಯೋ ರಿಲೀಸ್‌ ಮಾಡಿದ್ದಾರೆ. ಮಂಗಳೂರಿನ ಪ್ರತಿಷ್ಠಿತ ಹೊಟೇಲ್‌ನಲ್ಲಿ ಈ ಸಿನೆಮಾದ ಆಡಿಯೋ ರಿಲೀಸ್‌ ಆಗಿದೆ.

ಕೆಲವು ದಿನದ ಹಿಂದೆಯಷ್ಟೇ, ರಾಜೇಶ್‌ ಬ್ರಹ್ಮಾವರ ನಿರ್ಮಾಣದ ಜೆ.ಪಿ. ತೂಮಿನಾಡು ನಿರ್ದೇಶನದ ‘ಕಟಪಾಡಿ ಕಟ್ಟಪ್ಪೆ’ ಸಿನೆಮಾದ ಆಡಿಯೋ ರಿಲೀಸ್‌ ಅನ್ನು ಕಿಚ್ಚ ಸುದೀಪ್‌ ಮಂಗಳೂರಿನಲ್ಲಿ ನಡೆಸಿದ್ದರು. ಮಂಗಳೂರಿನ ಪುರಭವನದಲ್ಲಿ ನಡೆದ ಆಡಿಯೋ ರಿಲೀಸ್‌ ಕಾರ್ಯಕ್ರಮದಲ್ಲಿ ಸುದೀಪ್‌ ಭಾಗವಹಿಸಿದ್ದರು.

‘ತುಳು ಸಿನೆಮಾಗಳ ಬಗ್ಗೆ ನಾನು ಕೇಳಿದ್ದೇನೆ. ಬಹಳಷ್ಟು ಕಲಾವಿದರು- ತಂತ್ರಜ್ಞರಿಗೆ ಇಲ್ಲಿ ಅವಕಾಶ ದೊರೆಯುತ್ತಿದೆ. ಮುಂದೆ ಆವಶ್ಯಕತೆ ಇದ್ದರೆ ನಾನೂ ಕೂಡ ತುಳು ಸಿನೆಮಾ ಬಗ್ಗೆ ಆಸಕ್ತಿ ಹೊಂದಿದ್ದೇನೆ’ ಎಂದು ಹೇಳುವ ಮೂಲಕ ತುಳು ಸಿನೆಮಾ ಬಗ್ಗೆ ವಿಶೇಷ ಆಸಕ್ತಿಯನ್ನು ಸುದೀಪ್‌ ವ್ಯಕ್ತಪಡಿಸಿದ್ದರು. ಇದು ತುಳು ಸಿನೆಮಾ ಪಾಲಿಗೆ ಹೊಸ ಚೈತನ್ಯ ನೀಡಿದಂತಾಗಿತ್ತು.

ಅದಾಗಿ ಕೆಲವೇ ದಿನದಲ್ಲಿ ಮತ್ತೂಂದು ಸಿನೆಮಾ ಸ್ಯಾಂಡಲ್‌ವುಡ್‌ ಹೀರೋ ಕೈಯಲ್ಲಿಯೇ ಆಡಿಯೋ ರಿಲೀಸ್‌ ಮಾಡುವ ಸನ್ನಿವೇಶ ಕಾಣುವಂತಾಯಿತು. ಕೋಸ್ಟಲ್‌ವುಡ್‌ನ‌ ಬಹುನಿರೀಕ್ಷಿತ ‘ದಗಲ್‌ ಬಾಜಿಲು’ ಸಿನೆಮಾದ ಆಡಿಯೋವನ್ನು ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಬೆಂಗಳೂರಿನಲ್ಲಿ ನಡೆಸಿದರು.

ಸುರೇಶ್‌ ಅಂಚನ್‌ ಮೂಡಬಿದಿರೆ ಕಥೆ ಚಿತ್ರಕಥೆ ಸಂಭಾಷಣೆ, ಸಾಹಿತ್ಯ ಬರೆದ ಎ.ಎಸ್‌. ಪ್ರಶಾಂತ್‌ ನಿರ್ದೇಶನದ ಈ ಸಿನೆಮಾವನ್ನು ಕುಂಬ್ಳೆ ಸಂತೋಷ್‌ ಶೆಟ್ಟಿ ಹಾಗೂ ಸ್ನೇಹಿತರು ನಿರ್ಮಿಸಿದ್ದಾರೆ. ಅನುಗ್ರಹ ಫಿಲಂಸ್‌ ಬ್ಯಾನರ್‌ನಡಿ ಮೂಡಿಬಂದ ಈ ಸಿನೆಮಾಕ್ಕೆ ಆರ್‌.ಡಿ. ವರ್ಮನ್‌ ಹಾಗೂ ಸಂದೇಶ್‌ ಬಾಬು ಸಂಗೀತ ಒದಗಿಸಿದ್ದಾರೆ.

ವಿಘ್ನೇಶ್‌ ಹಾಗೂ ರಶ್ಮಿಕಾ ಮುಖ್ಯ ತಾರಾಗಣದ ಈ ಸಿನೆಮಾದಲ್ಲಿ ನವೀನ್‌ ಡಿ. ಪಡೀಲ್‌, ಅರವಿಂದ ಬೋಳಾರ್‌, ಭೋಜರಾಜ್‌ ವಾಮಂಜೂರು, ದೀಪಕ್‌ ರೈ, ಸತೀಶ್‌ ಬಂದಳೆ, ಉಮೇಶ್‌ ಮಿಜಾರ್‌ ಮುಂತಾದವರಿದ್ದಾರೆ. 

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.