ಕೋಸ್ಟಲ್‌ ಹಾಡಿಗೆ ತಲೆತೂಗಿದ ಸ್ಯಾಂಡಲ್‌ವುಡ್‌ ಸ್ಟಾರ್!


Team Udayavani, May 31, 2018, 3:30 PM IST

31-may-11.jpg

ತುಳು ಸಿನೆಮಾ ಇಂದು ಕೋಸ್ಟಲ್‌ ಭಾಗಕ್ಕಷ್ಟೇ ಸೀಮಿತವಾಗಿಲ್ಲ. ಕೋಸ್ಟಲ್‌ ಗಡಿಯನ್ನು ದಾಟಿ ಮಿಂಚುತ್ತಿದೆ. ತುಳುವೇತರರು ಇರುವ ಜಾಗದಲ್ಲೂ ತುಳು ಸಿನೆಮಾ ಎದ್ದು ನಿಲ್ಲುವಷ್ಟರ ಮಟ್ಟಿಗೆ ಸಿನೆಮಾ ರೆಡಿಯಾಗಿದೆ ಎಂಬ ಹೆಮ್ಮೆ ಕೋಸ್ಟಲ್‌ವುಡ್‌ನ‌ದ್ದು. ಇಂತಹ ಅಪರೂಪದ ಸನ್ನಿವೇಶದ ಮಧ್ಯೆಯೇ ತುಳು ಸಿನೆಮಾವನ್ನು ಕೋಸ್ಟಲ್‌ವುಡ್‌ ಸ್ಟಾರ್ ಕೂಡ ಮೆಚ್ಚಿ ಕೊಂಡಾಡುತ್ತಿರುವುದು ಇನ್ನೊಂದು ಹೆಮ್ಮೆಯ ಸಂಗತಿ.

ಚಿತ್ರನಟರಾದ ಶಿವರಾಜ್‌ ಕುಮಾರ್‌, ದರ್ಶನ್‌, ಸುದೀಪ್‌ ಈಗಾಗಲೇ ತುಳು ಸಿನೆಮಾವನ್ನು ಕೊಂಡಾಡಿದ್ದಾರೆ. ತುಳುವಿನ ಮೂರು ಸಿನೆಮಾದ ಆಡಿಯೋ ರಿಲೀಸ್‌ ಮಾಡುವ ಮೂಲಕ ಸ್ಯಾಂಡಲ್‌ವುಡ್‌ ನಟರು ತುಳು ಸಿನೆಮಾವನ್ನು ಮೆಚ್ಚಿದ್ದಾರೆ. ಇದು ತುಳು ಸಿನೆಮಾದ ಐಡೆಂಟಿಟಿಯನ್ನು ಹೆಚ್ಚು ಮಾಡಿದೆ ಎಂದು ಹೇಳುವುದು ಅತಿಶಯೋಕ್ತಿಯಲ್ಲ. ಕೋಸ್ಟಲ್‌ವುಡ್‌ನ‌ಲ್ಲಿ ಬಹುನಿರೀಕ್ಷೆ ಮೂಡಿಸಿದ ಸೂರಜ್‌ ಶೆಟ್ಟಿ ನಿರ್ದೇಶನದ ‘ಅಮ್ಮೆರ್‌ ಪೊಲೀಸಾ’ ಚಿತ್ರ ರಿಲೀಸ್‌ನ ಹೊಸ್ತಿಲಲ್ಲಿದೆ. 

ಈಗ ಈ ಸಿನೆಮಾದ ಆಡಿಯೋ ರಿಲೀಸ್‌ ಸುದ್ದಿ ಇಲ್ಲದೆ ಮಾಡಿ ಮುಗಿಸಲಾಗಿದೆ. ವಿಶೇಷವೆಂದರೆ, ಚಿತ್ರನಟ ದರ್ಶನ್‌ ಅವರೇ ‘ಅಮ್ಮೆರ್‌ ಪೊಲೀಸಾ’ ಚಿತ್ರದ ಆಡಿಯೋ ರಿಲೀಸ್‌ ಮಾಡಿದ್ದಾರೆ. ಮಂಗಳೂರಿನ ಪ್ರತಿಷ್ಠಿತ ಹೊಟೇಲ್‌ನಲ್ಲಿ ಈ ಸಿನೆಮಾದ ಆಡಿಯೋ ರಿಲೀಸ್‌ ಆಗಿದೆ.

ಕೆಲವು ದಿನದ ಹಿಂದೆಯಷ್ಟೇ, ರಾಜೇಶ್‌ ಬ್ರಹ್ಮಾವರ ನಿರ್ಮಾಣದ ಜೆ.ಪಿ. ತೂಮಿನಾಡು ನಿರ್ದೇಶನದ ‘ಕಟಪಾಡಿ ಕಟ್ಟಪ್ಪೆ’ ಸಿನೆಮಾದ ಆಡಿಯೋ ರಿಲೀಸ್‌ ಅನ್ನು ಕಿಚ್ಚ ಸುದೀಪ್‌ ಮಂಗಳೂರಿನಲ್ಲಿ ನಡೆಸಿದ್ದರು. ಮಂಗಳೂರಿನ ಪುರಭವನದಲ್ಲಿ ನಡೆದ ಆಡಿಯೋ ರಿಲೀಸ್‌ ಕಾರ್ಯಕ್ರಮದಲ್ಲಿ ಸುದೀಪ್‌ ಭಾಗವಹಿಸಿದ್ದರು.

‘ತುಳು ಸಿನೆಮಾಗಳ ಬಗ್ಗೆ ನಾನು ಕೇಳಿದ್ದೇನೆ. ಬಹಳಷ್ಟು ಕಲಾವಿದರು- ತಂತ್ರಜ್ಞರಿಗೆ ಇಲ್ಲಿ ಅವಕಾಶ ದೊರೆಯುತ್ತಿದೆ. ಮುಂದೆ ಆವಶ್ಯಕತೆ ಇದ್ದರೆ ನಾನೂ ಕೂಡ ತುಳು ಸಿನೆಮಾ ಬಗ್ಗೆ ಆಸಕ್ತಿ ಹೊಂದಿದ್ದೇನೆ’ ಎಂದು ಹೇಳುವ ಮೂಲಕ ತುಳು ಸಿನೆಮಾ ಬಗ್ಗೆ ವಿಶೇಷ ಆಸಕ್ತಿಯನ್ನು ಸುದೀಪ್‌ ವ್ಯಕ್ತಪಡಿಸಿದ್ದರು. ಇದು ತುಳು ಸಿನೆಮಾ ಪಾಲಿಗೆ ಹೊಸ ಚೈತನ್ಯ ನೀಡಿದಂತಾಗಿತ್ತು.

ಅದಾಗಿ ಕೆಲವೇ ದಿನದಲ್ಲಿ ಮತ್ತೂಂದು ಸಿನೆಮಾ ಸ್ಯಾಂಡಲ್‌ವುಡ್‌ ಹೀರೋ ಕೈಯಲ್ಲಿಯೇ ಆಡಿಯೋ ರಿಲೀಸ್‌ ಮಾಡುವ ಸನ್ನಿವೇಶ ಕಾಣುವಂತಾಯಿತು. ಕೋಸ್ಟಲ್‌ವುಡ್‌ನ‌ ಬಹುನಿರೀಕ್ಷಿತ ‘ದಗಲ್‌ ಬಾಜಿಲು’ ಸಿನೆಮಾದ ಆಡಿಯೋವನ್ನು ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಬೆಂಗಳೂರಿನಲ್ಲಿ ನಡೆಸಿದರು.

ಸುರೇಶ್‌ ಅಂಚನ್‌ ಮೂಡಬಿದಿರೆ ಕಥೆ ಚಿತ್ರಕಥೆ ಸಂಭಾಷಣೆ, ಸಾಹಿತ್ಯ ಬರೆದ ಎ.ಎಸ್‌. ಪ್ರಶಾಂತ್‌ ನಿರ್ದೇಶನದ ಈ ಸಿನೆಮಾವನ್ನು ಕುಂಬ್ಳೆ ಸಂತೋಷ್‌ ಶೆಟ್ಟಿ ಹಾಗೂ ಸ್ನೇಹಿತರು ನಿರ್ಮಿಸಿದ್ದಾರೆ. ಅನುಗ್ರಹ ಫಿಲಂಸ್‌ ಬ್ಯಾನರ್‌ನಡಿ ಮೂಡಿಬಂದ ಈ ಸಿನೆಮಾಕ್ಕೆ ಆರ್‌.ಡಿ. ವರ್ಮನ್‌ ಹಾಗೂ ಸಂದೇಶ್‌ ಬಾಬು ಸಂಗೀತ ಒದಗಿಸಿದ್ದಾರೆ.

ವಿಘ್ನೇಶ್‌ ಹಾಗೂ ರಶ್ಮಿಕಾ ಮುಖ್ಯ ತಾರಾಗಣದ ಈ ಸಿನೆಮಾದಲ್ಲಿ ನವೀನ್‌ ಡಿ. ಪಡೀಲ್‌, ಅರವಿಂದ ಬೋಳಾರ್‌, ಭೋಜರಾಜ್‌ ವಾಮಂಜೂರು, ದೀಪಕ್‌ ರೈ, ಸತೀಶ್‌ ಬಂದಳೆ, ಉಮೇಶ್‌ ಮಿಜಾರ್‌ ಮುಂತಾದವರಿದ್ದಾರೆ. 

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Moodabidri: ಬೃಹತ್ ಜೈನ ಆರಾಧನಾ ಕೋಶ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

ಬಸ್‌ಗಳಿಗೆ ಬಾಗಿಲು ಅಳವಡಿಕೆ ; ಡಿಸಿ ಗಡುವು ಸಮೀಪಿಸಿದರೂ ಬಗೆಹರಿಯದ ಗೊಂದಲ!

ಬಸ್‌ಗಳಿಗೆ ಬಾಗಿಲು ಅಳವಡಿಕೆ ; ಡಿಸಿ ಗಡುವು ಸಮೀಪಿಸಿದರೂ ಬಗೆಹರಿಯದ ಗೊಂದಲ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.