ರೇಸ್ ನಲ್ಲಿದೆ ಅಮ್ಮೆ ರ್ ಪೊಲೀಸಾ ರಿಲೀಸ್ ಡೇಟ್!
Team Udayavani, May 31, 2018, 3:49 PM IST
ಬಹುನಿರೀಕ್ಷಿತ ‘ಅಮ್ಮೆರ್ ಪೊಲೀಸಾ’ ತುಳು ಚಿತ್ರವು ನಿರೀಕ್ಷೆಯಂತೆ ಜೂನ್ ತಿಂಗಳಲ್ಲಿ ಬಿಡುಗಡೆಯಾಗಬೇಕಿದ್ದರೂ, ಈಗ ಚಿತ್ರಕ್ಕೆ ಥಿಯೇಟರ್ ಸಮಸ್ಯೆಯಿಂದಾಗಿ ಚಿತ್ರ ಬಿಡುಗಡೆಯ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಚಿತ್ರ ಬಿಡುಗಡೆಗೆ ಜೂನ್ ತಿಂಗಳ ಮೂರು
ದಿನಾಂಕಗಳು ಲಿಸ್ಟ್ ನಲ್ಲಿದ್ದು, ಇನ್ನೆರಡು ದಿನಗಳಲ್ಲಿ ದಿನಾಂಕ ಫಿಕ್ಸ್ ಆಗಲಿದೆ.
ಜೂ. 15ರಂದು ಸಲ್ಮಾನ್ ಖಾನ್ ಅಭಿನಯದ ‘ರೇಸ್-3’ ಹಿಂದಿ ಚಿತ್ರ ಬಿಡುಗಡೆಗೊಳ್ಳುತ್ತಿದ್ದು, ಅದು ಮಂಗಳೂರು ಥಿಯೇಟರ್ನಲ್ಲೂ ರಿಲೀಸ್ ಆಗುತ್ತಿರುವುದರಿಂದ ‘ಅಮ್ಮೆರ್ ಪೊಲೀಸಾ’ ಚಿತ್ರದ ದಿನಾಂಕ ಮುಂದೂಡುವ ಸಾಧ್ಯತೆ ಇದೆ. ಜತೆಗೆ ರಜನೀಕಾಂತ್ ಅಭಿನಯದ ‘ಕಾಲ’ ತಮಿಳು ಚಿತ್ರಕ್ಕೆ ಪ್ರಸ್ತುತ ಕರ್ನಾಟಕದಲ್ಲಿ ಅವಕಾಶ ಇಲ್ಲ ಎಂದು ಹೇಳಿದರೂ, ಮುಂದೆ ಚಿತ್ರ ಪ್ರದರ್ಶನಕ್ಕೆ ಅವಕಾಶ ಸಿಕ್ಕಿದರೆ, ‘ಕಾಲ’ದಿಂದಲೂ ತೊಂದರೆ ಎದುರಾಗಬಹುದು.
ಎಕ್ಕಸಕ, ಪಿಲಿಬೈಲ್ ಯಮುನಕ್ಕ ಎಂಬ ಯಶಸ್ವಿ ಚಿತ್ರಗಳನ್ನು ನೀಡಿರುವ ನಿರ್ದೇಶಕ ಸೂರಜ್ ಶೆಟ್ಟಿ ಅವರೇ ‘ಅಮ್ಮೆರ್ ಪೊಲೀಸಾ’ ಚಿತ್ರವನ್ನೂ ನಿರ್ದೇಶನ ಮಾಡಿದ್ದು, ಈ ಚಿತ್ರ ತುಳುಚಿತ್ರ ಪ್ರೇಮಿಗಳಲ್ಲಿ ಹೆಚ್ಚಿನ ನಿರೀಕ್ಷೆಯನ್ನು ಹುಟ್ಟಿಸಿದೆ. ಹೀಗಾಗಿ ಇದರ ಬಿಡುಗಡೆಗಾಗಿ ಎಲ್ಲರೂ ತುದಿಗಾಲಲ್ಲಿ ನಿಂತಿದ್ದು, ಇನ್ನೂ ಬಿಡುಗಡೆಯ ದಿನಾಂಕ ನಿಗದಿಯಾಗದೇ ಇರುವುದು ಚಿತ್ರಪ್ರೇಮಿಗಳಿಗೆ ನಿರಾಸೆಯನ್ನು ತಂದಿದೆ.
ಕಳೆದ ಹಲವು ವರ್ಷಗಳಿಂದ ತುಳು ಚಿತ್ರಗಳಿಗೆ ಇದೇ ರೀತಿಯಲ್ಲಿ ಥಿಯೇಟರ್ ಸಮಸ್ಯೆ ಎದುರಾಗುತ್ತಿದ್ದು, ಅದಕ್ಕೊಂದು ಶಾಶ್ವತ ಪರಿಹಾರ ಇನ್ನೂ ಸಾಧ್ಯವಾಗಿಲ್ಲ. ಚಿತ್ರತಂಡ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡು ಬಿಡುಗಡೆಗೆ ತಯಾರಿ ನಡೆಸಿದರೆ ಆ ಸಂದರ್ಭದಲ್ಲಿ ಇತರ ಭಾಷೆಗಳ ಚಿತ್ರ ಬಿಡುಗಡೆಗೆ ಬಂದರೆ ತುಳು ಚಿತ್ರತಂಡ ಹಿಂದೆ ಸರಿಯಲೇ ಬೇಕಾಗುತ್ತದೆ.
ತುಳು ಚಿತ್ರಕ್ಕೆ ಸೀಮಿತ ಮಾರುಕಟ್ಟೆ ವ್ಯಾಪ್ತಿ ಇರುವುದರಿಂದ ಮಂಗಳೂರು, ಉಡುಪಿ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಪ್ರಮುಖ ಥಿಯೇಟರ್ಗಳು ಲಭ್ಯವಾಗಬೇಕಾಗುತ್ತದೆ. ಪ್ರಸ್ತುತ ‘ಅಮ್ಮೆರ್ ಪೊಲೀಸಾ’ ಚಿತ್ರಕ್ಕೂ ಅದೇ ಸಮಸ್ಯೆ ಎದುರಾಗಿದ್ದು, ಜೂ. 15, 22, 28 ದಿನಾಂಕಗಳಲ್ಲಿ ಒಂದನ್ನು ಚಿತ್ರತಂಡ ಆರಿಸಲಿದೆ. ಆದರೆ ಇನ್ನೂ ಯಾವ ದಿನಾಂಕ ಎಂಬುದು ಪಕ್ಕಾ ಆಗಿಲ್ಲ. ಇನ್ನೆರಡು ದಿನಗಳಲ್ಲಿ ಬಿಡುಗಡೆಯ ದಿನಾಂಕವನ್ನು ಅಂತಿಮಗೊಳಿಸಲಿದ್ದೇವೆ ಎಂದು ಚಿತ್ರದ ನಿರ್ದೇಶಕ ಸೂರಜ್ ಶೆಟ್ಟಿ ತಿಳಿಸಿದ್ದಾರೆ.
ಕಿರಣ್ ಸರಪಾಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ