ಹಿಂದೂ ಸೋಗಿನಲ್ಲಿ ವಂಚಿಸಿ ಮದುವೆ: ಯುವಕನಿಗೆ ಯುವತಿ ಮನೆಯಲ್ಲಿ ಹಲ್ಲೆ
Team Udayavani, Jun 14, 2018, 6:00 AM IST
ಉಳ್ಳಾಲ: ಹಿಂದೂ ಹೆಸರಿನಲ್ಲಿ ಕುಂಪಲದ ಯುವತಿಯನ್ನು ಮದುವೆಯಾಗಿದ್ದ ಸುಳ್ಯ ಮೂಲದ ಮಹಮ್ಮದ್ ಹಾರೂನ್ ಯಾನೆ ಬಶೀರ್(28)ಗೆ ಯುವತಿ ಮನೆಯವರು ಮತ್ತು ಸಾರ್ವಜನಿಕರು ಧರ್ಮದೇಟು ನೀಡಿದ ಘಟನೆ ಬುಧವಾರ ನಡೆದಿದ್ದು, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಖಾಸಗಿ ದೂರವಾಣಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ಹಾರೂನ್ ಮೂರು ವರ್ಷಗಳ ಹಿಂದೆ ಪರಿಚಯವಾಗಿದ್ದ ತನಗಿಂತ ಸುಮಾರು 12 ವರ್ಷ ಹೆಚ್ಚು ಪ್ರಾಯದ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ. ತಾನು ಅರುಣ್ ಪೂಜಾರಿ ಎಂದು ಕುಂಪಲದಲ್ಲಿ ಹೇಳಿಕೊಂಡಿದ್ದ ಈತನ ನಿಜ ಬಣ್ಣ ಏಳು ತಿಂಗಳ ಹಿಂದೆ ಬಯಲಾಗಿತ್ತು. ಯುವತಿಯ ಸಹೋದರಿ ಬ್ಯಾಗ್ ಚೆಕ್ ಮಾಡಿದಾಗ ಈತನ ನಿಜ ಹೆಸರು ಪತ್ತೆಯಾಗಿತ್ತು. ಆವರೆಗೆ ತಾನು ಅನಾಥ ಎಂದು ತಿಳಿಸಿದ್ದ. ಈ ಸಂದರ್ಭದಲ್ಲಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಈತನ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಘಟನೆ ಬಳಿಕ ಯುವತಿಯೊಂದಿಗೆ ಸಂಪರ್ಕ ಇರಲಿಲ್ಲ ಎನ್ನಲಾಗಿದ್ದು, ಬುಧವಾರ ಏಕಾಏಕಿ ಹಾರೂನ್ ಯುವತಿ ಮನೆಗೆ ತೆರಳಿ 60 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದು, ಈ ಸಂದರ್ಭದಲ್ಲಿ ಯುವತಿಯ ಸಹೋದರಿ ಹಾರೂನ್ ಮೇಲೆ ಹಲ್ಲೆ ನಡೆಸಿದ್ದಾರೆ. ಆಗ ಸ್ಥಳೀಯರೂ ಹಾರೂನ್ಗೆ ಧರ್ಮದೇಟು ನೀಡಿ ಬಳಿಕ ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದಾರೆ.
ಹಾರೂನ್ನ ಹುಡುಗಿಯ ಚಾಳಿಯಿಂದ ಆತನ ಮನೆಯವರೂ ಈತನನ್ನು ಮನೆಗೆ ಸೇರಿಸಿಕೊಂಡಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ