ಋತುಸ್ರಾವದಬಗ್ಗೆ ಹೆಣ್ಣು ಮಕ್ಕಳಲ್ಲಿಹೆಚ್ಚಿನಜಾಗೃತಿ ಮೂಡಿಸಿ:ಮೀನಾಕ್ಷಿ


Team Udayavani, Jun 23, 2018, 12:33 PM IST

23-june-6.jpg

ಮಹಾನಗರ: ಹೆಣ್ಣುಮಕ್ಕಳು ಹದಿಹರೆಯಕ್ಕೆ ಕಾಲಿಡುವ ವೇಳೆ ಅವರ ದೈಹಿಕ ಬದಲಾವಣೆ ಕೆಲವೊಮ್ಮೆ ಮಾನಸಿಕ ಖನ್ನತೆಗೂ ಕಾರಣವಾಗುತ್ತದೆ. ಈ ಬಗ್ಗೆ ಜಾಗೃತಿ ಮೂಲಕ ಮಕ್ಕಳಲ್ಲಿ ಆತ್ಮಸ್ಥೈರ್ಯ ತುಂಬುವ ಕೆಲಸ ಆಗಬೇಕು ಎಂದು ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಹೇಳಿದರು.

ಜಿಲ್ಲಾ ಪಂಚಾಯತ್‌, ಸ್ವಚ್ಛ ಭಾರತ್‌ ಮಿಷನ್‌, ಜಿಲ್ಲಾ ನೆರವು ಘಟಕದ ವತಿಯಿಂದ ಜಿ.ಪಂ. ನೇತ್ರಾವತಿ ಸಭಾಂಗಣದಲ್ಲಿ ‘ಸ್ವಚ್ಛ  ಗೆಳತಿ- ಋತುಸ್ರಾವ ಜಾಗೃತಿ ಅಭಿಯಾನ ಮತ್ತು ತ್ಯಾಜ್ಯ ನಿರ್ವಹಣೆ’ ಕುರಿತ ಜಿಲ್ಲಾ ಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಋತುಸ್ರಾವ ಸಂದರ್ಭ ಬಳಸುವ ಪ್ಯಾಡ್‌ಗಳ ನಿರ್ವಹಣೆ ಬಗ್ಗೆ ಅವರಿಗೆ ಯಾವುದೇ ಮಾಹಿತಿ ಇರುವುದಿಲ್ಲ. ಈ ನಿಟ್ಟಿನಲ್ಲಿ ಋತುಸ್ರಾವ ಸಂದರ್ಭ ಸ್ವಚ್ಛತೆಗೆ ನೀಡಬೇಕಾದ ಪ್ರಾಮುಖ್ಯ ಹಾಗೂ ತ್ಯಾಜ್ಯ ನಿರ್ವಹಣೆಗಾಗಿ ಜಿ.ಪಂ. ವತಿಯಿಂದ ಸ್ವತ್ಛ ಗೆಳತಿ ಅಭಿಯಾನ ನಡೆಸಲಾಗುತ್ತಿದೆ. ಇದರ ಸಮರ್ಪಕ ಅನುಷ್ಠಾನ ಹೆಣ್ಣು ಮಕ್ಕಳಿಗೆ ಸಹಕಾರಿಯಾಗಲಿದೆ ಎಂದರು.

ನ್ಯಾಪ್‌ಕಿನ್‌ಗಳ ವಿಲೇವಾರಿ
ಜಿ.ಪಂ. ಸಿಇಒ ಡಾ| ಎಂ.ಆರ್‌. ರವಿ ಮಾತನಾಡಿ, ಋತುಸ್ರಾವದ ಸಂದರ್ಭ ಬಳಸಲಾಗುವ ಪ್ಯಾಡ್‌ ಅಥವಾ ನ್ಯಾಪ್‌ಕಿನ್‌ಗಳ ಪೈಕಿ ಜಿಲ್ಲೆಯಲ್ಲಿ ಶೇ. 18.55ರಷ್ಟು ಮಣ್ಣಿನಲ್ಲಿ ಹೂಳಲಾಗುತ್ತದೆ. ಶೇ. 24.84ರಷ್ಟು ತ್ಯಾಜ್ಯ ವಿಲೇವಾರಿ ವಾಹನಕ್ಕೆ ಹಾಕಲಾಗುತ್ತದೆ. ಶೇ. 14.03 ಶೌಚಾಲಯದ ಗುಂಡಿಗೆ ಹಾಕಲಾಗುತ್ತದೆ. ಶೇ. 29.52ರಷ್ಟು ಮಂದಿ ಬಚ್ಚಲು ಮನೆಯ ಒಲೆಯಲ್ಲಿ ಸುಡುತ್ತಾರೆ. ಶೇ. 13.01ರಷ್ಟು ಮಂದಿ ತೋಡು ಅಥವಾ ರಸ್ತೆ ಬದಿಗಳಲ್ಲಿ ಎಸೆಯುತ್ತಾರೆ. ಇವೆಲ್ಲವೂ ತ್ಯಾಜ್ಯ ನಿರ್ವಹಣೆಯ ವೈಜ್ಞಾನಿಕ ವಿಧಾನವಲ್ಲ. ಸುಡುವುದು ಮತ್ತು ಹೂಳುವುದನ್ನು ಸದ್ಯದ ಮಟ್ಟಿಗೆ ಪ್ರಸ್ತುತವೆನ್ನಲಾಗುತ್ತಿದೆ. ಸುಡಲು ಬಳಸಲಾಗುವ ಇನ್ಸಿನೆರೇಟರ್‌ಗಳು ದುಬಾರಿಯಾಗಿದೆ. ಜಿಲ್ಲೆಯಲ್ಲಿ 140 ಶಾಲೆಗಳಿಗೆ ಈ ಇನ್ಸಿನೆರೇಟರ್‌ಗಳನ್ನು ಒದಗಿಸಲಾಗಿದೆ. ಮನೆಗಳಲ್ಲಿ ಈ ವ್ಯವಸ್ಥೆಗೆ ಸರಕಾರ ಸಬ್ಸಿಡಿ ಮೂಲಕ ವ್ಯವಸ್ಥೆ ಕಲ್ಪಿಸಿದರೆ ಉತ್ತಮ ಎಂದು ಅವರು ಹೇಳಿದರು.

ಮಾಹಿತಿ ಕೈಪಿಡಿ ಬಿಡುಗಡೆ
ಜಿ.ಪಂ. ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಅನಿತಾ ಹೇಮಾನಾಥ ಶೆಟ್ಟಿ ಸ್ವಚ್ಛ  ಗೆಳತಿ ಮಾಹಿತಿ ಕೈಪಿಡಿ ಬಿಡುಗಡೆಗೊಳಿಸಿದರು. ಜಿ.ಪಂ. ಸದಸ್ಯರಾದ ಸುಚರಿತ ಶೆಟ್ಟಿ, ವಿನೋದ್‌ ಬೊಳ್ಳೂರು, ಮಮತಾ ಗಟ್ಟಿ, ಮಂಜುಳಾ ಮಾವೆ, ಶಾಹುಲ್‌ ಹಮೀದ್‌ ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಗಳಾದ ರಮೀಳಾ ಶೇಖರ್‌, ಡಾ| ಪೂರ್ಣಿಮಾ ಭಟ್‌, ಡಾ| ಶ್ರೀನಿವಾಸ್‌ ಭಟ್‌ ತರಬೇತಿ ನೀಡಿದರು. ಜಿ.ಪಂ.ನ ಉಪ ಕಾರ್ಯದರ್ಶಿ ಎಂ.ವಿ. ನಾಯಕ್‌ ಸ್ವಾಗತಿಸಿದರು.

ಪ್ರಮಾಣಪತ್ರ ವಿತರಣೆ
ಅಭಿಯಾನ ಅಂಗವಾಗಿ ಆಯೋಜಿಸಲಾದ ಸ್ವಚ್ಛತಾ ಘೋಷಣಾ ಸ್ಪರ್ಧೆ ಹಾಗೂ ಸ್ವಚ್ಛತಾ ಗೀತ ರಚನೆ ಮತ್ತು ಗಾಯನ ಸ್ಪರ್ಧೆಯ ವಿಜೇತರಿಗೆ ಪ್ರಮಾಣಪತ್ರ ವಿತರಿಸಲಾಯಿತು.

ಎನ್ನೆಸ್ಸೆಸ್‌ ಕಾರ್ಯಕರ್ತರಿಂದ ಜಾಗೃತಿ
ಅಭಿಯಾನ ಬಗ್ಗೆ ಮಾಹಿತಿ ನೀಡಿದ ಜಿ.ಪಂ. ಸಿಇಒ ಡಾ| ಎಂ.ಆರ್‌. ರವಿ, ಜಿಲ್ಲೆಯ ಶಾಲೆಗಳಲ್ಲಿ ಜುಲೈ ತಿಂಗಳಿನಿಂದ ವಿದ್ಯಾರ್ಥಿನಿಯರಿಗೆ ಋತುಸ್ರಾವ ಸಂದರ್ಭದ ಸ್ವಚ್ಛತೆ ಹಾಗೂ ತ್ಯಾಜ್ಯ ನಿರ್ವಹಣೆ ಕುರಿತು ಜಾಗೃತಿ ಅಭಿಯಾನ 10 ತಿಂಗಳ ಕಾಲ ನಡೆಯಲಿದೆ. 6 ಮತ್ತು 7ನೇ ತರಗತಿಯ ಜಿಲ್ಲೆಯ 1,182 ಸರಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳ 30,734 ವಿದ್ಯಾರ್ಥಿನಿಯರನ್ನು ಗುರಿಯಾಗಿರಿಸಿ ಈ ಅಭಿಯಾನ ನಡೆಯಲಿದೆ. ಈ ಮಕ್ಕಳನ್ನು 10 ರಿಂದ 25 ಮಕ್ಕಳ ತಂಡಗಳಾಗಿಸಿ ಒಟ್ಟು 1,604 ತಂಡಗಳಿಗೆ ಅಷ್ಟೇ ಸಂಖ್ಯೆಯ ಎನ್ನೆಸ್ಸೆಸ್‌ ಕಾರ್ಯಕರ್ತರಿಂದ ಆಪ್ತ ಸಮಾಲೋಚನೆಯ ಮೂಲಕ ಬಗ್ಗೆ ಜಾಗೃತಿ ಮೂಡಿಸಲಾಗುವುದು ಎಂದರು. 

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.