ಸಾಂಪ್ರದಾಯಿಕ ಮೀನುಗಾರಿಕೆಗೆ ಮೀನುಗಾರರು ಸಜ್ಜು 


Team Udayavani, Jun 25, 2018, 10:18 AM IST

25-june-2.jpg

ಮಹಾನಗರ: ಆಳ ಸಮುದ್ರ ಮೀನುಗಾರಿಕೆಗೆ ಈಗ ರಜೆ ಇರುವುದರಿಂದ ನಾಡ ದೋಣಿಗಳಲ್ಲಿ ಸಾಂಪ್ರದಾಯಿಕ ಮೀನುಗಾರಿಕೆ ನಡೆಸಲು ಮೀನುಗಾರರು ಸಜ್ಜಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸೋಮವಾರದಿಂದ ಮಂಗಳೂರು ವಲಯದಲ್ಲಿ ನಾಡದೋಣಿ ಮೀನುಗಾರಿಕೆ ಆರಂಭವಾಗಲಿದೆ.

ಒಟ್ಟು ಮೀನುಗಾರಿಕೆಯ ಪೈಕಿ ಶೇ.15ರಿಂದ 18ರಷ್ಟು ಮೀನುಗಳು ನಾಡದೋಣಿಯಿಂದ ದೊರೆಯುತ್ತದೆ. ಹೀಗಾಗಿ ಮಳೆಗಾಲದಲ್ಲಿ ನಾಡದೋಣಿ ಮೀನುಗಾರಿಕೆಗೆ ಹೆಚ್ಚಿನ ಪ್ರಾಮುಖ್ಯ ನೀಡಲಾಗುತ್ತದೆ. ಈ ಬಾರಿ ಮಂಗಳೂರು ವಲಯದಲ್ಲಿ ಸುಮಾರು 135 ಜೋಡಿ ದೋಣಿಗಳು ಸಮುದ್ರಕ್ಕಿಳಿಯುವ ತವಕದಲ್ಲಿವೆ. ಈಗಾಗಲೇ 2,500 ಮೀನುಗಾರರಿಗೆ ಪಾಸ್‌ ನೀಡುವ ಕೆಲಸವಾಗಿದೆ. ಅವರು ಮೀನಿಗೆ ಬಲೆ ಬೀಸಲು ಸಕಲ ರೀತಿಯಲ್ಲೂ ಸಜ್ಜಾಗಿದ್ದಾರೆ ಎಂದು ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷರು ಉದಯವಾಣಿ ಸುದಿನಕ್ಕೆ ತಿಳಿಸಿದ್ದಾರೆ.

ಬಹುತೇಕ ನಾಡದೋಣಿಗಳಿಗೆ ಇಂದು ಮುಹೂರ್ತ
ಆಳಸಮುದ್ರ ಮೀನುಗಾರಿಕೆ ನಿಷೇಧವಾದ ಬಳಿಕ ಆರಂಭವಾಗುವ ನಾಡದೋಣಿ ಮೀನುಗಾರಿಕೆ ಆರಂಭವಿಸುವ ಮೊದಲು ಸೂಕ್ತ ಮುಹೂರ್ತ ನೋಡಿ ಸಮುದ್ರಕ್ಕಿಳಿಸಲಾಗುತ್ತದೆ. ಸೋಮವಾರ ದಿನ ಒಳ್ಳೆಯದಿದೆ ಹಾಗೂ ಮುಹೂರ್ತ ಇದೆ ಎನ್ನುವ ಕಾರಣಕ್ಕಾಗಿ ಇಂದು ಬಹುತೇಕ ನಾಡದೋಣಿಗಳು ಸಮುದ್ರಕ್ಕಿಳಿಯಲಿವೆ. ಮೊದಲು ದೋಣಿಗಳಿಗೆ ಪೂಜೆ ಮಾಡಿ ಬಳಿಕ ಸಮುದ್ರದತ್ತ ತೆರಳುತ್ತಾರೆ.

ಮಂಗಳೂರು ವಲಯದಲ್ಲಿ ಸುಮಾರು 150 ಜೋಡಿ ನಾಡದೋಣಿಗಳಿವೆ. ಅದರಲ್ಲಿ ರಾಣಿ ಬಲೆಯಲ್ಲಿ 50 ಯೂನಿಟ್‌ಗಳಿವೆ. ಒಂದು ಯೂನಿಟ್‌ನಲ್ಲಿ ಎರಡು ಮದರ್‌ ಬೋಟ್‌, ಒಂದು ಕ್ಯಾರಿಯರ್‌ ಸೇರಿ 40 ಜನರಿರುತ್ತಾರೆ. ಇನ್ನು ಪಟ್ಟೆಬಲೆಯಲ್ಲಿ 50 ಯೂನಿಟ್‌ ಗಳಿದ್ದು, ಅದರ ಒಂದು ಯೂನಿಟ್‌ನಲ್ಲಿ ಒಂದು ಬೋಟ್‌ ಹಾಗೂ 7 ಜನರಿರುತ್ತಾರೆ. 50 ಬುಲ್‌ ಟ್ರಾಲ್‌ಗ‌ಳ ಒಂದು ಯೂನಿಟ್‌ನಲ್ಲಿ ಎರಡು ಬೋಟ್‌ ಹಾಗೂ ಐದು ಜನರಿರುತ್ತಾರೆ.

20 ಕಿ.ಮೀ.ನ ವ್ಯಾಪ್ತಿಯಲ್ಲಿ ನಾಡದೋಣಿ ಮೀನುಗಾರಿಕೆ 
ಜೂನ್‌ ಮೊದಲ ವಾರದಲ್ಲಿ ಸಾಮಾನ್ಯವಾಗಿ ಮೀನುಗಾರಿಕಾ ಋತು ಅಂತ್ಯಗೊಳ್ಳುತ್ತದೆ. ಮತ್ತೆ ಮೀನುಗಾರಿಕೆ ಆರಂಭಗೊಳ್ಳುವುದು ಆಗಸ್ಟ್‌ನಲ್ಲಿ. ಈ ಮಧ್ಯದ ಅವಧಿಯಲ್ಲಿ ನಾಡದೋಣಿ ಮೀನುಗಾರಿಕೆ ನಡೆಸಲಾಗುತ್ತದೆ. ಸಮುದ್ರದಲ್ಲಿ ಸುಮಾರು 20 ಕಿ.ಮೀ.ನ ಒಳಗಡೆಯಲ್ಲಿ ನಾಡದೋಣಿ ಮೀನುಗಾರಿಕೆ ನಡೆಯುತ್ತದೆ. ಆದರೆ, ಸಮುದ್ರ ಪ್ರಕ್ಷುಬ್ಧವಾಗಿರುವ ಸಮಯದಲ್ಲಿ 10 ಕಿ.ಮೀ.ನ ಒಳಗಡೆಯೇ ಮೀನುಗಾರಿಕೆ ನಡೆಯುತ್ತದೆ. ಎರಡು ಗಂಟೆಯಿಂದ ಸುಮಾರು 10 ಗಂಟೆಗಳವರೆಗೆ ಮಾತ್ರ ಸಮುದ್ರದಲ್ಲಿದ್ದು, ಸುತ್ತು ಬಲೆ ಮೂಲಕ ಮೀನುಗಾರಿಕೆ ನಡೆಸುತ್ತಾರೆ. ಸಮುದ್ರದಲ್ಲಿ ಯಾವುದೇ ಅವಘಡ ಸಂಭವಿಸಿದರೆ ಕೂಡಲೇ ದಡ ಸೇರುವಷ್ಟು ದೂರ ಮಾತ್ರ ಮೀನುಗಾರರು ತೆರಳುತ್ತಾರೆ.

ಇಂದು ನಾಡದೋಣಿಗಳು ಸಮುದ್ರದತ್ತ
ಆಳಸಮುದ್ರ ಮೀನುಗಾರಿಕೆ ಬಳಿಕ ಇಂದಿನಿಂದ ಬಹುತೇಕ ನಾಡದೋಣಿಗಳು ಮೀನುಗಾರಿಕೆಗೆ ತೆರಳಲಿವೆ. ಕೆಲವು ದಿನಗಳಿಂದ ಸಮುದ್ರ ಪ್ರಕ್ಷುಬ್ಧಗೊಂಡಿದ್ದರಿಂದ ಮೀನುಗಾರಿಕೆಗೆ ತೆರಳಲು ಸಾಧ್ಯವಾಗಿರಲಿಲ್ಲ. ಈಗ ಹತೋಟಿಗೆ ಬಂದಿದೆ.
– ವಾಸುದೇವ ಬಿ. ಕರ್ಕೇರ, 
ಅಧ್ಯಕ್ಷರು, ಕರಾವಳಿ ನಾಡದೋಣಿ ಮೀನುಗಾರರ ಸಂಘ, ಮಂಗಳೂರು ವಲಯ 

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.