ಹೆದ್ದಾರಿ ಬದಿ ಅಪಾಯ ಆಹ್ವಾನಿಸುವ ಮರಣ ಬಾವಿ !


Team Udayavani, Jun 27, 2018, 3:35 AM IST

honda-26-6.jpg

ಮಹಾನಗರ : ಕುಂಟಿಕಾನ ಫ್ಲೈಓವರ್‌ ನಿಂದ ಲೋಹಿತ್‌ ನಗರಕ್ಕೆ ಸಂಪರ್ಕ ಕಲ್ಪಿಸುವ ಕಾರು ಶೋರೂಂ ಎದುರಿನ ಸರ್ವಿಸ್‌ ರಸ್ತೆ ಮಧ್ಯೆ ದೊಡ್ಡ ಗುಂಡಿಯಾಗಿದ್ದು, ಇದರಿಂದಾಗಿ ಸಾರ್ವಜನಿಕರಿಗೆ ಮತ್ತು ವಾಹನ ಸವಾರರಿಗೆ ಅಪಾಯಕ್ಕೆ ಆಹ್ವಾನ ನೀಡುವಂತಿದೆ. ರಸ್ತೆ ಮಧ್ಯ ಇರುವಂತಹ ಮ್ಯಾನ್‌ ಹೋಲ್‌ ಸುತ್ತಲೂ ನಿರ್ಮಾಣವಾದ ಗುಂಡಿಯಿಂದಾಗಿ ಸಾರ್ವಜನಿಕರು ಆತಂಕಕ್ಕೊಳಗಾಗಿದ್ದಾರೆ. ಒಂದು ವರ್ಷಗಳ ಹಿಂದೆ ಮ್ಯಾನ್‌ ಹೋಲ್‌ ನಿರ್ಮಾಣಕ್ಕೆ ಇದೇ ರಸ್ತೆಯನ್ನು ಅಗೆಯಲಾಗಿತ್ತು. ಕೆಲವು ತಿಂಗಳ ಹಿಂದೆ ಹೊಸತಾಗಿ ಡಾಮರು ಹಾಕಲಾಗಿತ್ತು. ಕಳೆದ ತಿಂಗಳು ಬಂದಂತಹ ಜೋರಾದ ಮಳೆಗೆ ರಸ್ತೆ ಮಧ್ಯೆ ಇರುವ ಮ್ಯಾನ್‌ ಹೋಲ್‌ ಸುತ್ತ ಬಿರುಕು ಬಿದ್ದಿದ್ದು, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಕಳೆಪೆ ಡಾಮರು ಕಾಮಗಾರಿಯೇ ಮೂಲ ಕಾರಣ. ಆದರೆ ಸ್ಥಳೀಯಾಡಳಿತ ಮಾತ್ರ ಕೈಕಟ್ಟಿ ಕೂತಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

ಬ್ಯಾರಿಕೇಡ್‌ ಅಳವಡಿಸಿಲ್ಲ
ರಸ್ತೆ ಮಧ್ಯೆ ಇರುವ ದೊಡ್ಡ ಹೊಂಡದಿಂದ ಅಪಾಯ ಸ್ಥಿತಿಯಲ್ಲಿದ್ದು, ಮುನ್ನೆಚ್ಚರಿಕೆ ದೃಷ್ಟಿಯಿಂದ ಈ ಹೊಂಡದ ನಾಲ್ಕು ಬದಿಗಳಲ್ಲಿ ಬ್ಯಾರಿಕೇಡ್‌ ಅಳವಡಿಸಿಲ್ಲ. ಇದೇ ರಸ್ತೆಯಲ್ಲಿ ದಿನಂಪ್ರತಿ ನೂರಾರು ವಾಹನಗಳು ಸಂಚರಿಸುತ್ತಿದ್ದು, ಎಚ್ಚರ ತಪ್ಪಿದರೆ ವಾಹನ ಸವಾರರು ಈ ಗುಂಡಿಗೆ ಬೀಳುವ ಅಪಾಯ ಸ್ಥಳದಲ್ಲಿದೆ. ಇದೇ ರಸ್ತೆಯ ಪಕ್ಕದಲ್ಲಿ ಮತ್ತೂಂದು ಕಡೆಯಲ್ಲಿ ಯೂ ರಸ್ತೆ ಇದೇ ರೀತಿ ಬಿರುಕು ಬಿಟ್ಟಿದೆ.

ಅಸಮರ್ಪಕ ಚರಂಡಿ ವ್ಯವಸ್ಥೆ

ಈ ರಸ್ತೆಯ ಬದಿಯಲ್ಲಿರುವ ಚರಂಡಿ ವ್ಯವಸ್ಥೆ ಕೂಡ ಸಮರ್ಪಕವಾಗಿಲ್ಲ. ಚರಂಡಿ ತುಂಬೆಲ್ಲಾ ಕಸ, ಹುಲ್ಲು, ಕಲ್ಲುಗಳು ತುಂಬಿಕೊಂಡಿದೆ. ಇದರಿಂದಾಗಿ ಮಳೆ ನೀರು ಸರಾಗವಾಗಿ ಹರಿಯಲು ಸಾಧ್ಯ ವಾಗುತ್ತಿಲ್ಲ. ರಸ್ತೆಗೆ ನೀರು ಬಂದು ಕೃತಕ ನೆರೆ ಉಂಟಾಗುತ್ತಿದೆ. ಒಂದು ವೇಳೆ ರಸ್ತೆ ತುಂಬಾ ನೀರು ತುಂಬಿದರೆ ಈ ಗುಂಡಿಯಿಂದ ಮತ್ತಷ್ಟು ಅನಾಹುತ ಸಂಭವಿಸುವ ಸಾಧ್ಯತೆ ಇದೆ.

ಮಳೆಯಿಂದ ಕಾಮಗಾರಿ ನಡೆಸಲು ಕಷ್ಟ
ಸ್ಥಳೀಯ ಕಾರ್ಪೊರೇಟರ್‌ ರಾಜೇಶ್‌ ಅವರು ‘ಉದಯವಾಣಿ ಸುದಿನ’ಕ್ಕೆ ಪ್ರತಿ ಕ್ರಿಯಿಸಿ, ಈ ರಸ್ತೆ ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ಸಂಬಂಧಿಸಿದ್ದಾಗಿದೆ. ರಸ್ತೆಯಲ್ಲಿ ಮ್ಯಾನ್‌ ಹೋಲ್‌ ಇರುವುದರಿಂದ ನಾವು ಕಾಮಗಾರಿ ಕೈಗೆತ್ತಿಕೊಂಡಿದ್ದೇವೆ. ರಸ್ತೆ ಮಧ್ಯೆ ಗುಂಡಿಯಾದ ಕೂಡಲೇ ಸಂಬಂಧಪಟ್ಟ ಎಂಜಿನಿಯರ್‌ ಆದ ರಘುಪಾಲ್‌ ಮತ್ತು  ಅಶೋಕ್‌ ಅವರ ಗಮನಕ್ಕೆ ತಂದಿದ್ದೇನೆ. ನಗರದಲ್ಲಿ ನಿರಂತರ ಮಳೆ ಸುರಿಯುತ್ತಿರುವುದರಿಂದ ಕಾಮಗಾರಿ ನಡೆಸಲು ಕಷ್ಟವಾಗುತ್ತಿದೆ. ಸದ್ಯದಲ್ಲೇ ಕಾಮಗಾರಿ ಪೂರ್ಣಗೊಳಿಸುತ್ತೇವೆ. ಗುಂಡಿ ಬಿದ್ದ ಪ್ರದೇಶದ ನಾಲ್ಕೂ ಬದಿಗಳಲ್ಲಿ ಈ ಹಿಂದೆ ಬ್ಯಾರಿಕೇಡ್‌ ಅಳವಡಿಸಲಾಗಿತ್ತು. ಆದರೆ ಅದನ್ನು ಯಾರು ತೆರವುಗೊಳಿಸಿದ್ದು ಎಂಬುವುದರ ಬಗ್ಗೆ ಮಾಹಿತಿ ಇಲ್ಲ ಎಂದರು.

ಕಳೆಪೆ ಕಾಮಗಾರಿ ಕಾರಣ
ಈ ರಸ್ತೆ ಡಾಮರು ಕಾಮಗಾರಿ ನಡೆಸಿ ಎರಡು ತಿಂಗಳು ಕೂಡ ಕಳೆದಿಲ್ಲ. ಮ್ಯಾನ್‌ ಹೋಲ್‌ ಸುತ್ತ ಹೊಂಡ ನಿರ್ಮಾಣವಾಗಿದೆ. ಇದಕ್ಕೆ ಕಳೆಪೆ ಕಾಮಗಾರಿಯೇ ಮುಖ್ಯ ಕಾರಣ. ಸಂಬಂಧಪಟ್ಟ ಅಧಿಕಾರಿಗಳಿಂದ ಈ ಬಗ್ಗೆ ತನಿಖೆ ಮಾಡಿಸಬೇಕು. ಕೂಡಲೇ ಸಮಸ್ಯೆ ಬಗೆಹರಿಯಬೇಕು.
– ವಿಜಯ ಕುಮಾರ್‌, ಲೋಹಿತ್‌ನಗರ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.