Attention ಪ್ಲೀಸ್ : ಸ್ಥಳೀಯಾಡಳಿತದ ಕಳಪೆ ಕಾಮಗಾರಿಗೆ ಇದೇ ಸಾಕ್ಷಿ
Team Udayavani, Jul 2, 2018, 3:10 AM IST
ಮಹಾನಗರ: ಶ್ರೀ ರಾಘವೇಂದ್ರ ಬೃಂದಾವನದ ಮುಂದೆ ಚರಂಡಿಗೆ ಹಾಕಿರುವ ಕಾಂಕ್ರೀಟ್ ಹಲಗೆಯೊಂದು ಮುರಿದಿದ್ದು, ಅಪಾಯವನ್ನು ಆಹ್ವಾನಿಸುವಂತಿದೆ. ಕೇಂದ್ರ ಮಾರುಕಟ್ಟೆ ಹಾಗೂ ಸುತ್ತಮುತ್ತಲಿನ ಮಳೆ ನೀರು, ತ್ಯಾಜಗಳು ಭವಂತಿ ರಸ್ತೆಯಲ್ಲಿ ಹರಿದು ಶ್ರೀ ರಾಘವೇಂದ್ರ ಬೃಂದಾವನದ ಬಳಿಯಿಂದ ತ್ರಿಶುಲೇಶ್ವರ ದೇವಸ್ಥಾನದ ಬಳಿಯಲ್ಲಿರುವ ದೊಡ್ಡ ಚರಂಡಿಯನ್ನು ಸೇರುತ್ತಿತ್ತು. ಇದಕ್ಕೆ ಮುಖ್ಯ ಕಾರಣ ಈ ರಸ್ತೆಗಳಲ್ಲಿ ಸರಿಯಾದ ಚರಂಡಿಗಳಿಲ್ಲದಿರುವುದು. ಕೆಲವೆಡೆ ಇದ್ದರೂ ಕಿರಿದಾಗಿದ್ದು, ತ್ಯಾಜ್ಯ ತುಂಬಿ ನೀರು ಸರಾಗವಾಗಿ ಹರಿದು ಹೋಗಲು ತಡೆಯುಂಟಾಗಿತ್ತು.
ಈ ತೊಂದರೆಯನ್ನು ಅನೇಕ ವರ್ಷಗಳಿಂದಲೂ ಪಾಲಿಕೆಗೆ ಮನವಿ ಸಲ್ಲಿಸಲಾಗಿದ್ದು, ಕೊನೆಗೂ ಪಾಲಿಕೆಯು ಎರಡು ತಿಂಗಳ ಹಿಂದೆ ಕಾಮಗಾರಿಯನ್ನು ಕೈಗೆತ್ತಿಕೊಂಡಿತ್ತು. ಚರಂಡಿಯನ್ನು ಇನ್ನೂ ಅಗಲ ಹಾಗೂ ಆಳವಾಗಿ ಕಟ್ಟಿ ಮೇಲೆ ಕಾಂಕ್ರೀಟ್ ಮುಚ್ಚಿತ್ತು. ಆದರೆ ಈಗ ಮಾಡಲಾದ ಕಳಪೆ ಕಾಮಗಾರಿಯನ್ನು ಬಿಂಬಿಸುವಂತೆ ಮತ್ತೆ ಹಲಗೆ ಮರಿದಿದೆ. ಈ ದೇವಸ್ಥಾನಕ್ಕೆ ದಿನಂಪ್ರತಿ ನೂರಾರು ಭಕ್ತರು ಆಗಮಿಸುತ್ತಾರೆ. ಮುರಿದ ಕಾಂಕ್ರೀಟ್ ಹಲಗೆಯಿಂದ ಅಪಾಯ ಬಂದೊದಗುವ ಮೊದಲು ಸ್ಥಳೀಯಾಡಳಿತ ಎಚ್ಚೆತ್ತುಕೊಳ್ಳಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
MUST WATCH
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು