ಮಂಗಳೂರು-ಮುಂಬಯಿ ಎಐ ವಿಮಾನ 81 ದಿನ ರದ್ದು


Team Udayavani, Jul 6, 2018, 10:44 AM IST

airindiaaviationairlines720-770×433.png

ಮಂಗಳೂರು: ಏರ್‌ ಇಂಡಿಯಾ ವಿಮಾನ ಯಾನ ಸಂಸ್ಥೆಯು ಜುಲೈ 12ರಿಂದ ಸೆಪ್ಟಂಬರ್‌ 30ರ ವರೆಗೆ ಮಂಗಳೂರು- ಮುಂಬಯಿ ನಡುವಿನ ವಿಮಾನಯಾನ ಸೇವೆಯನ್ನು ದಿಢೀರನೆ ರದ್ದುಗೊಳಿಸಿದ್ದು, ಈಗಾಗಲೇ ಟಿಕೆಟ್‌ ಬುಕ್‌ ಮಾಡಿರುವ ನೂರಾರು ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. “ನಿರ್ವಹಣೆಯ ಕಾರಣಗಳಿಗಾಗಿ (ಆಪ ರೇಶನಲ್‌ ರೀಸನ್‌)’ 81 ದಿಗಳ ಕಾಲ ಮಂಗಳೂರು- ಮುಂಬಯಿ ನಡುವಿನ ವಿಮಾನ ಯಾನವನ್ನು ರದ್ದುಪಡಿಸ‌ಲಾಗಿದೆ’ ಎಂದಷ್ಟೇ ಏರ್‌ ಇಂಡಿಯಾ ಸಂಸ್ಥೆಯ ಮಂಗಳೂರಿನ ಅಧಿಕಾರಿಗಳು “ಉದಯವಾಣಿ’ಗೆ ತಿಳಿಸಿದ್ದಾರೆ.

ಶೀಘ್ರದಲ್ಲೇ ಹಜ್‌ ಯಾತ್ರೆ ಕೂಡ ಆರಂಭವಾಗಲಿದ್ದು, ಇಂತಹ ಸಂದರ್ಭದಲ್ಲಿಯೇ ವಿಮಾನ ಯಾನ ರದ್ದು ಪಡಿಸಿರುವ ಸಂಸ್ಥೆಯ ನಿರ್ಧಾರಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಇನ್ನೊಂದೆಡೆ ಹಜ್‌ ಯಾತ್ರೆಗೆ ಅನುಕೂಲತೆ ಕಲ್ಪಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೂಡ ಹೇಳಲಾಗುತ್ತಿದೆ. ಆದರೆ ಏರ್‌ ಇಂಡಿಯಾ ಮಾತ್ರ ಈ ದಿಢೀರ್‌ ನಿರ್ಧಾರಕ್ಕೆ ಬಲವಾದ ಕಾರಣ ನೀಡದಿರುವುದು ಸಂಶಯಕ್ಕೆ ಎಡೆಮಾಡಿದೆ.
ಜೂ. 25ರ ತನಕವೂ ಏರ್‌ ಇಂಡಿಯಾ ಸಂಸ್ಥೆಯು ಆನ್‌ಲೈನ್‌ನಲ್ಲಿ ಟಿಕೆಟ್‌ ಬುಕಿಂಗ್‌ಗೆ ಅವಕಾಶ ಕಲ್ಪಿಸಿತ್ತು. ಜೂ. 26ರಂದು ಮಂಗಳೂರು- ಮುಂಬಯಿ ವಿಮಾನ ಯಾನ ವನ್ನು ಜುಲೈ 12ರಿಂದ ರದ್ದು ಮಾಡುತ್ತಿರುವುದಾಗಿ ಟಿಕೆಟ್‌ ಬುಕ್‌ ಮಾಡಿದವರಿಗೆ ದಿಢೀರನೆ ಏರ್‌ ಇಂಡಿಯಾ ಕಡೆಯಿಂದ ಸಂದೇಶ ರವಾನೆಯಾಗಿದೆ.

ಟಿಕೆಟ್‌ ಹಣ ವಾಪಸ್‌ 
ಟಿಕೆಟ್‌ ಬುಕ್‌ ಮಾಡಿದವರಿಗೆ ಏರ್‌ ಇಂಡಿಯಾ ಸಂಸ್ಥೆಯು ಪ್ರಯಾಣ ಕೈಗೊಳ್ಳಲು ಪರ್ಯಾಯ ವ್ಯವಸ್ಥೆ ಮಾಡಿಲ್ಲ. ಬದಲಾಗಿ ಟಿಕೆಟ್‌ ಹಣವನ್ನು ಪೂರ್ತಿ ಮರು ಪಾವತಿಸಲು ಅವಕಾಶ ಕಲ್ಪಿಸಿದೆ ಎಂದು ಸಂಸ್ಥೆಯ ಓರ್ವ ಅಧಿಕಾರಿ ತಿಳಿಸಿದ್ದಾರೆ.

ಏರ್‌ ಇಂಡಿಯಾ ಆಯ್ಕೆ ಯಾಕೆ?
ಏರ್‌ ಇಂಡಿಯಾವು ಮಂಗಳೂರು-ಮುಂಬಯಿ ನಡುವೆ ಪ್ರತಿದಿನ ಮಧ್ಯಾಹ್ನ 12.45ಕ್ಕೆ ಒಂದು ಟ್ರಿಪ್‌ ಸಂಚರಿಸುತ್ತಿದೆ. ಬೇರೆ ವಿಮಾನಯಾನಗಳಿಗೆ ಹೋಲಿಸಿದರೆ ಇದರಲ್ಲಿ ಪ್ರಯಾಣ ದರ ಸ್ವಲ್ಪ ಕಡಿಮೆ. ಜತೆಗೆ ಕರಾವಳಿ ಭಾಗದ ಹೆಚ್ಚಿನ ಸಂಖ್ಯೆಯ ಜನರು ಮುಂಬಯಿಯಲ್ಲಿ ನೆಲೆಸಿರುವುದರಿಂದ ಅಲ್ಲಿಗೆ ಹೋಗಿ ಬರಲು ಈ ವಿಮಾನವನ್ನೇ ಅವಲಂಬಿಸಿದ್ದಾರೆ. ಸಾಕಷ್ಟು ಮುಂಚಿತವಾಗಿ ಟಿಕೆಟ್‌ ಬುಕ್‌ ಮಾಡಿದರೆ ಟಿಕೆಟ್‌ ದರದಲ್ಲಿ ಉಳಿತಾಯ ಆಗುವುದರಿಂದ ಹಲವಾರು ಮಂದಿ ಮಂಗಳೂರು- ಮುಂಬಯಿ- ಮಂಗಳೂರು ಪ್ರಯಾಣಕ್ಕೆ ಟಿಕೆಟ್‌ ಬುಕ್‌ ಮಾಡಿದ್ದರು. ಅಲ್ಲದೆ ಏರ್‌ ಇಂಡಿಯಾದ ದೇಶಿಯ ಯಾನದಲ್ಲಿ 25 ಕೆ.ಜಿ. ತೂಕದ ಲಗೇಜ್‌ ಕೊಂಡೊ ಯ್ಯಲು ಅವಕಾಶ ಇರುವುದರಿಂದ ಹೆಚ್ಚಿನ ಪ್ರಯಾಣಿಕರು ಏರ್‌ ಇಂಡಿಯಾವನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಮಾತ್ರವಲ್ಲದೆ ಈ ವಿಮಾನಕ್ಕೆ ಮುಂಬಯಿಯಲ್ಲಿ ಸಾಕಷ್ಟು ಸಂಪರ್ಕ ವಿಮಾನಗಳ ಲಭ್ಯತೆಯೂ ಇರುವುದು ಜನತೆ ಪ್ರಯಾಣಕ್ಕೆ ಆಯ್ಕೆ ಮಾಡಿಕೊಳ್ಳಲು ಇನ್ನೊಂದು ಕಾರಣ.

ಟಾಪ್ ನ್ಯೂಸ್

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.