ಬಿಎಸ್‌ವೈ ಮತ್ತೆ ಸಿಎಂ ಬಿಜೆಪಿ ಗುರಿ: ಕೋಟ


Team Udayavani, Jul 8, 2018, 6:00 AM IST

v-37.jpg

ಮಂಗಳೂರು: ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದು ಬಿ.ಎಸ್‌. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡುವುದೇ ಬಿಜೆಪಿಯ ಗುರಿ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ದ.ಕ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶನಿವಾರ ಅಭಿನಂದನೆ ಸ್ವೀಕರಿಸಿದ  ಅವರು, ವಿಪಕ್ಷ ಸ್ಥಾನವನ್ನು ನಿರ್ವಹಣೆ ಮಾಡುವುದು ಬಿಜೆಪಿಯ ಗುರಿಯಲ್ಲ. ರಾಜ್ಯದಲ್ಲಿ ಬಿಜೆಪಿಯ ಆಡಳಿತವನ್ನು ತರುವುದೇ ನಮ್ಮ ಮೊದಲ ಆದ್ಯತೆ ಎಂದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಂಕಿ-ಅಂಶಗಳೇ ಮುಖ್ಯ. ಹೀಗಾಗಿ, ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾರೆ. ಮುಖ್ಯಮಂತ್ರಿ ರಾಜ್ಯದ ಜನರ ತಾಯಿಯಿದ್ದಂತೆ ಎಂದು ಹೇಳಿದ್ದವರು ಬಜೆಟ್‌ ಮಂಡನೆ ಬಳಿಕ ಕರಾವಳಿ ಜಿಲ್ಲೆಗಳ ಪಾಲಿಗೆ ಮಲತಾಯಿಯಾಗಿದ್ದಾರೆ ಎಂದು ಶ್ರೀನಿವಾಸ ಪೂಜಾರಿ ಟೀಕಿಸಿದರು.

ಮೀನುಗಾರಿಕೆಗೆ ಸಂಬಂಧಿಸಿದ ಯೋಜನೆಗಳನ್ನು ಬಜೆಟ್‌ನಲ್ಲಿ ಘೋಷಿಸಿಲ್ಲ. ಕಡಲ್ಕೊರೆತಕ್ಕೆ ಶಾಶ್ವತ ತಡೆಗೋಡೆ ರಚನೆ, ಹೂಳೆತ್ತುವ ಸಮಸ್ಯೆ ಬಗ್ಗೆ ಕಲ್ಪನೆಯೇ ಇಲ್ಲ. ಕರಾವಳಿಗೆ ಈ ಹಿಂದಿನ ಸರಕಾರ ಘೋಷಿಸಿದ ಯೋಜನೆಗಳನ್ನು ಪೂರ್ಣಗೊಳಿಸುವವರೆಗೂ ಹೋರಾಟ ನಡೆಸುತ್ತೇವೆ ಎಂದರು. ಶಾಸಕ ಡಿ. ವೇದವ್ಯಾಸ ಕಾಮತ್‌, ಬಿಜೆಪಿ ಮುಖಂಡರಾದ ರವಿಶಂಕರ್‌ ಮಿಜಾರ್‌, ಉದಯಕುಮಾರ್‌ ಶೆಟ್ಟಿ, ಪ್ರತಾಪ್‌ ಸಿಂಹ ನಾಯಕ್‌, ಕಿಶೋರ್‌ ರೈ ಉಪಸ್ಥಿತರಿದ್ದರು.

ಸಾಲ ಮನ್ನಾ: ರೈತರಿಗೆ ವಂಚನೆ 
ಸಾಲ ಮನ್ನಾ ವಿಚಾರದಲ್ಲಿ ಸಿಎಂ ಕುಮಾರಸ್ವಾಮಿಯವರು ರೈತರಿಗೆ ವಂಚನೆ ಮಾಡಿದ್ದಾರೆ. 34 ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡುವುದಾಗಿ ಘೋಷಿಸಿರುವ ಅವರು ಬಿಡುಗಡೆಗೊಳಿಸಿದ್ದು ಕೇವಲ 6,500 ಕೋಟಿ ರೂ. ಇದರಿಂದಾಗಿ ಗೊಂದಲ ಸೃಷ್ಟಿಯಾಗಿದ್ದು, ಸಿಎಂ ಸಾಲಮನ್ನಾ ವಿಚಾರವನ್ನು ಸಮರ್ಪಕಗೊಳಿಸಬೇಕು.  ಬಜೆಟ್‌ನಲ್ಲಿ ಏರಿಕೆ ಮಾಡಿರುವ ವಿದ್ಯುತ್‌ ದರ, ಪೆಟ್ರೋಲ್‌, ಡೀಸೆಲ್‌ ದರವನ್ನು ತತ್‌ಕ್ಷಣ ವಾಪಸ್‌ ಪಡೆಯಬೇಕು ಎಂದು ಕೋಟ ಶ್ರೀನಿವಾಸ ಪೂಜಾರಿ ಆಗ್ರಹಿಸಿದರು. 

ಹುಟ್ಟೂರಲ್ಲಿ  ಭವ್ಯ ಸ್ವಾಗತ
ಕೋಟ: ಬಜೆಟ್‌ನಲ್ಲಿ ಕರಾವಳಿ ಜಿಲ್ಲೆಗಳನ್ನು ನಿರ್ಲಕ್ಷಿಸಿದ ಕುರಿತು ವಿಧಾನ ಸೌಧದ ಗಾಂಧೀ ಪ್ರತಿಮೆ ಎದುರು  ಕರಾವಳಿ ಜಿಲ್ಲೆಗಳ ಬಿಜೆಪಿ ಶಾಸಕರು ಒಗ್ಗೂಡಿ ಹೋರಾಟ ನಡೆಸಿದ್ದು  ಐತಿಹಾಸಿಕ ಬೆಳವಣಿಗೆ. ಮುಂದೆ ಎಲ್ಲ ಶಾಸಕರು ಒಟ್ಟಾಗಿ ಕರಾವಳಿ ಸಮಸ್ಯೆಗಳ ಕುರಿತು ಸದನದಲ್ಲಿ ಹೋರಾಡುವುದಾಗಿ ವಿಧಾನ ಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ವಿಪಕ್ಷ ನಾಯಕರಾದ ಬಳಿಕ ಮೊದಲ ಬಾರಿಗೆ ಹುಟ್ಟೂರಿಗೆ ಆಗಮಿಸಿ, ಅಭಿಮಾನಿಗಳ ಅಭಿನಂದನೆ ಸ್ವೀಕರಿಸಿ ಪತ್ರಕರ್ತರೊಂದಿಗೆ ಮಾತನಾಡಿದರು.

ಉಸ್ತುವಾರಿ ಸಚಿವರ ನೇಮಕವಾಗಿಲ್ಲ: ಉಡುಪಿ ಜಿಲ್ಲೆಯಲ್ಲಿ ನೆರೆ ಹಾವಳಿ, ಕಡಲ್ಕೊರೆತ, ಮೀನುಗಾರರ ಸಮಸ್ಯೆಗಳಿವೆ. ಆದರೆ ಸರಕಾರ ಇದುವರೆಗೆ ನಮ್ಮ  ಜಿಲ್ಲೆಗೆ ಉಸ್ತುವಾರಿ ಸಚಿವರನ್ನು ನೇಮಿಸದಿರುವುದು ದುರಂತ ಎಂದರು.

ಹುಟ್ಟೂರ ಸ್ವಾಗತ: ಮಾಬುಕಳದಲ್ಲಿ ಪುಷ್ಪಗುತ್ಛ, ಹೂವಿನ ಹಾರ ಹಾಕಿ ಬರಮಾಡಿಕೊಂಡ ಬಳಿಕ ಸಾಲಿಗ್ರಾಮ ತಲುಪಿದಾಗ ಅಭಿಮಾನಿಗಳು ಶುಭ ಕೋರಿದ‌ರು. ಆಂಜನೇಯ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಕೋಟದಲ್ಲಿ ಮುಸ್ಲಿಂ ಬಾಂಧವರು ಸ್ವಾಗತಿಸಿದರು. ಅಮೃತೇಶ್ವರೀ ದೇವಸ್ಥಾನದ ಬಳಿ ಹುಟ್ಟೂರ ಜನತೆ ವಾದ್ಯಘೋಷದೊಂದಿಗೆ ಬರಮಾಡಿಕೊಂಡರು. ಅನಂತರ ದೇವರಿಗೆ ಪೂಜೆ ಸಲ್ಲಿಸಲಾಯಿತು.

ಟಾಪ್ ನ್ಯೂಸ್

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.