ಈ ಸೇತುವೆ ದಾಟಲು ಬೇಕು ಅರ್ಧ ತಾಸು!


Team Udayavani, Jul 20, 2018, 2:40 AM IST

kulur-bridge-19-7.jpg

ಪಣಂಬೂರು: ರಾಷ್ಟ್ರೀಯ ಹೆದ್ದಾರಿ 66ರ ಕೂಳೂರಿನಲ್ಲಿ ಫ‌ಲ್ಗುಣಿ ನದಿಗೆ ಕಟ್ಟಿರುವ ಎರಡೂ ಸೇತುವೆಗಳು ಸಂಪೂರ್ಣ ಹದಗೆಟ್ಟಿವೆ. ಸುಮಾರು 30 ಮೀಟರ್‌ ಉದ್ದದ ಈ ಸೇತುವೆಯನ್ನು ದಾಟಲು ವಾಹನಗಳಿಗೆ ಕನಿಷ್ಠ 30 ನಿಮಿಷ ಬೇಕು! ಸೇತುವೆಗಳ ಮೇಲಿನ ಡಾಮರು ಕಿತ್ತು ಹೋಗಿ ದೊಡ್ಡ ಹೊಂಡಗಳು ಸೃಷ್ಟಿಯಾದ್ದರಿಂದ ವಾಹನಗಳು ಕುಂಟುತ್ತಾ ಸಾಗುತ್ತಿವೆ. ಹೊಂಡ ಮುಚ್ಚಲು ಜಲ್ಲಿ ಹುಡಿ ಹಾಕಿದ್ದರಿಂದ ಹೆದ್ದಾರಿ ಇಲಾಖೆಯ ಗುತ್ತಿಗೆದಾರರು ಸಮಸ್ಯೆಯನ್ನು ಮತ್ತಷ್ಟು ಕಗ್ಗಂಟಾಗಿಸಿದ್ದಾರೆ. ಮಳೆ ಮತ್ತು ಘನ ವಾಹನಗಳ ಓಡಾಟದ ಸಂದರ್ಭ ಜಲ್ಲಿ ಹುಡಿ ಒಂದೆಡೆ ಸೇರಿ ದಿಣ್ಣೆಗಳಾಗಿದ್ದು, ದ್ವಿಚಕ್ರಮ ಲಘು ವಾಹನಗಳಿಗೆ ತೀವ್ರ ಸಮಸ್ಯೆಯಾಗಿದೆ.

ಸರಕು ತುಂಬಿದ ವಾಹನಗಳು ಎಲ್ಲಿ ಆ್ಯಕ್ಸೆಲ್‌ ತುಂಡಾಗುವುದೋ ಎಂದು ಹೆದರಿ ತೆವಳುತ್ತಾ ಸಾಗಿ ದರೆ, ಐಷಾರಾಮಿ ವಾಹನಗಳು ದುರಸ್ತಿ ಬಂದರೆ ಕಷ್ಟ ಎಂದು ನಿಧಾನವಾಗಿ ಸೇತುವೆ ದಾಟುತ್ತಿವೆ. ಇದರಿಂದಾಗಿ ಎರಡೂ ಬದಿಗಳಲ್ಲಿ ಕನಿಷ್ಠ 2ರಿಂದ 3 ಕಿ.ಮೀ. ಉದ್ದ ಸಾಲು ಸೃಷ್ಟಿಯಾಗುತ್ತಿದ್ದು, ಸೇತುವೆ ದಾಟುವುದೇ ಹರಸಾಹಸವಾಗಿದೆ. ಪ್ರತಿ ಮಳೆಗಾಲದಲ್ಲಿ ಇದೇ ಪರಿಸ್ಥಿತಿ ಇದ್ದರೂ ಶಾಶ್ವತ ಪರಿಹಾರ ಇನ್ನೂ ಸಿಕ್ಕಿಲ್ಲ. ಸೇತುವೆಗಳ ಇಕ್ಕೆಲಗಳಲ್ಲಿ ಇರುವ ತಡೆಗೋಡೆ ನದಿ ಒಡಲು ಸೇರಿದರೂ ದುರಸ್ತಿಯಾಗಿಲ್ಲ.

ಬೈಕಂಪಾಡಿ ಬಳಿ ಹೆದ್ದಾರಿ ದುರವಸ್ಥೆ
ಬೈಕಂಪಾಡಿ ಕೈಗಾರಿಕಾ ಪ್ರದೇಶಕ್ಕೆ ಸಾಗುವಲ್ಲಿ ಹೆದ್ದಾರಿಯಲ್ಲಿರುವ ಬೃಹತ್‌ ಹೊಂಡವೊಂದು ಘನ ವಾಹನ ಮಾಲಕರಿಗೆ ನಷ್ಟ ತಂದೊಡ್ಡುತ್ತಿದೆ. ರಿಕ್ಷಾ ಮೊದಲಾದ ಸಣ್ಣ ವಾಹನಗಳು ಹೆದ್ದಾರಿಗಿಂತ ಒಳದಾರಿಯೇ ಸೂಕ್ತ ಎಂದು ಬದಲಿ ದಾರಿಯಲ್ಲಿ ಸಾಗುತ್ತಿವೆ. ಈ ಕುರಿತು ಸ್ಥಳೀಯ ಜನತೆ ಹಾಗೂ ರಿಕ್ಷಾ ಚಾಲಕರು ಹಲವು ಬಾರಿ ಇಲಾಖೆಯ ಗಮನಕ್ಕೆ ತಂದರೂ ರಸ್ತೆ ದುರಸ್ತಿಗೆ ಮನ ಮಾಡಿಲ್ಲ. ಆಗಾಗ ತೇಪೆ ಹಚ್ಚಿ ಹೋದರೂ ಪರಿಣಾಮ ಶೂನ್ಯ.

ತಲಪಾಡಿಯಿಂದ ಸುರತ್ಕಲ್‌ ವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವಿವಿಧ ಸಮಸ್ಯೆಗಳು ಗಮನಕ್ಕೆ ಬಂದಿವೆ. ಈ ಹಿನ್ನೆಲೆಯಲ್ಲಿ ಇಲಾಖಾಧಿಕಾರಿಗಳ ಸಭೆ ಮಾಡಿ ದುರಸ್ತಿ ಕಾಮಗಾರಿಯ ವೇಳಾಪಟ್ಟಿ ನೀಡಿ ಶೀಘ್ರ ದುರಸ್ತಿಗೆ ಮುಂದಾಗುವಂತೆ ಸ್ಪಷ್ಟ ಸೂಚನೆ ನೀಡಿದ್ದೇನೆ. ಕಾಮಗಾರಿ ವಿಳಂಬಕ್ಕೆ, ಅದರಿಂದಾಗುವ ಸಮಸ್ಯೆಗಳಿಗೆ ಅಧಿಕಾರಿಗಳೇ ಜವಾಬ್ದಾರಿ.
– ನಳಿನ್‌ ಕುಮಾರ್‌ ಕಟೀಲು, ಸಂಸದ

ಹೊಂಡಗಳನ್ನು ಮುಚ್ಚಲು ಹೆದ್ದಾರಿ ಇಲಾಖೆ ಕ್ರಮ ಕೈಗೊಳ್ಳಬೇಕು. ಬೈಕಂಪಾಡಿಯಲ್ಲಿ ಹಲವು ವರ್ಷಗಳಿಂದ ಹೊಂಡವಿದೆ. ಕೂಳೂರು ಸೇತುವೆ ಮೇಲೆ ಇತ್ತೀಚೆಗೆ ಡಾಮರೀಕರಣ ಮಾಡಿದ್ದರೂ ಒಂದೇ ಮಳೆಗೆ ಎದ್ದು ಹೋಗಿದೆ. ಪ್ರತಿ ವರ್ಷ ಇದೇ ಪರಿಸ್ಥಿತಿ ಇದ್ದರೂ ಇಲಾಖೆ ತೇಪೆ ಕಾರ್ಯವನ್ನಷ್ಟೇ ಮಾಡುತ್ತಿದೆ. ಶಾಶ್ವತ ದುರಸ್ತಿಗೆ ಕ್ರಮ ಕೈಗೊಳ್ಳಬೇಕಾಗಿದೆ.
– ಉಮೇಶ್‌ ದೇವಾಡಿಗ ಇಡ್ಯಾ, ರಿಕ್ಷಾ ಚಾಲಕ

ಟಾಪ್ ನ್ಯೂಸ್

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.