ಉಳ್ಳಾಲ ಕಡಲ್ಕೊರೆತ ತಡೆಗೆ 29 ಕೋ.ರೂ. ಬಿಡುಗಡೆ’
Team Udayavani, May 3, 2019, 9:57 AM IST
ಉಳ್ಳಾಲ: ಉಳ್ಳಾಲ ಕೈಕೋದಿಂದ ಸೀಗ್ರೌಂಡ್ ವರೆಗೆ ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು 29 ಕೋಟಿ ರೂ. ಬಿಡುಗಡೆಯಾಗಿದ್ದು, ಮುಂದಿನ ಮಳೆಗಾಲದಲ್ಲಿ ಕಡಲ್ಕೊರೆತದಿಂದ ಹೆಚ್ಚು ಹಾನಿಯಾಗುವ ಪ್ರದೇಶಗಳಲ್ಲಿ ತಾತ್ಕಾಲಿಕ ತಡೆಗೋಡೆ ನಿರ್ಮಿಸಲು ಅಗತ್ಯವಿರುವ ಅನುದಾನ ಬಿಡುಗಡೆ ಮಾಡುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದೇನೆ ಎಂದು ಸಚಿವ ಯು.ಟಿ. ಖಾದರ್ ತಿಳಿಸಿದರು.
ಅವರು ಉಳ್ಳಾಲದ ಕಡಲ್ಕೊರೆತ ಪ್ರದೇಶಗಳಾದ ಕಿಲೇರಿಯಾನಗರ, ಸೀಗ್ರೌಂಡ್, ಕೈಕೋ ಪ್ರದೇಶಗಳಿಗೆ ಗುರುವಾರ ಭೇಟಿ ನೀಡಿ ಮಾತನಾಡಿದರು.
ಉಳ್ಳಾಲ ಕಡಲ್ಕೊರೆತಕ್ಕೆ ಸಂಬಂಧಿಸಿದಂತೆ ಮೊಗವೀರಪಟ್ಣ ವರೆಗೆ ಶಾಶ್ವತ ಪರಿಹಾರ ಕಾರ್ಯ ಈಗಾಗಲೇ ಮುಗಿದಿದ್ದು, ಕೈಕೋದಿಂದ ಸೀಗ್ರೌಂಡ್ವರೆಗೆ ಸಮುದ್ರ ತೀರ ವಿಭಿನ್ನವಾಗಿರುವುದರಿಂದ ತಡೆಗೋಡೆ ನಿರ್ಮಿಸಿ ಬಳಿಕ ಕಲ್ಲುಗಳನ್ನು ಹಾಕುವ ಕಾರ್ಯವನ್ನು ನಡೆಸಬೇಕಾಗಿದೆ. ಪರಿಣತರಿಂದ ಅಧ್ಯಯನ ನಡೆಸಿ ಬಳಿಕ ಕಾಮಗಾರಿ ನಡೆಯಲಿದೆ ಎಂದರು.
ಕೌನ್ಸಿಲರ್ಗಳಾದ ಮಹಮ್ಮದ್ ಮುಕ್ಕಚ್ಚೇರಿ, ಅಬ್ದುಲ್ ಬಶೀರ್, ರವಿಚಂದ್ರ ಗಟ್ಟಿ, ಜಬ್ಟಾರ್, ಕೆ.ಪಿ. ಅಬ್ದುಲ್ ಖಾದರ್, ತಾ.ಪಂ. ಸದಸ್ಯ ಜಬ್ಟಾರ್ ಬೋಳಿಯಾರ್, ಕಿನ್ಯ ಗ್ರಾ.ಪಂ. ಉಪಾಧ್ಯಕ್ಷ ಸಿರಾಜ್ ಕಿನ್ಯ, ರಾಮಾಚಾರಿ ಮೊಗವೀರಪಟ್ಣ, ಕಿಲೆರಿಯಾ ಮಸೀದಿ ಅಧ್ಯಕ್ಷ ಖಲೀಲ್, ಕೈಕೋ ಮಸೀದಿ ಅಧ್ಯಕ್ಷ ಅಬ್ದುಲ್ ಲತೀಫ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್ ವಶ: ಜಿಲ್ಲಾಧಿಕಾರಿ ಮಾಹಿತಿ
Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ
Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!
ಅಧಿಕಾರಕ್ಕಾಗಿ ಪಿಎಫ್ಐಯ ರಾಜಕೀಯ ಮುಖವಾದ ಎಸ್ಡಿಪಿಐ ಜತೆ ಕಾಂಗ್ರೆಸ್ ಹೊಂದಾಣಿಕೆ: ನಳಿನ್
Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ
MUST WATCH
ಹೊಸ ಸೇರ್ಪಡೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್