ಸೌಹಾರ್ದಕ್ಕಾಗಿ ಪ್ರಾರ್ಥಿಸಿ: ಜಮೀರ್ ಅಹ್ಮದ್
Team Udayavani, Jul 22, 2018, 12:45 PM IST
ಬಜಪೆ: ಜೀವನದಲ್ಲಿ ಒಮ್ಮೆಯಾದರೂ ಹಜ್ ಯಾತ್ರೆ ನಡೆಸಬೇಕು ಎಂದು ಪ್ರತಿಯೊಬ್ಬ ಮುಸಲ್ಮಾನ ಬಯಸುತ್ತಾನೆ. ಎಲ್ಲರಿಗೂ ಆ ಅವಕಾಶ ಸಿಗುವುದಿಲ್ಲ. ಶ್ರೀಮಂತರು ಇತರರನ್ನು ಹಜ್ಗೆ ಕಳುಹಿಸಬೇಕು, ಆಗ ಪುಣ್ಯ ಸಿಗುತ್ತದೆ. ಯಾತ್ರಿಗಳು ಒಗ್ಗಟ್ಟು, ಸೌಹಾರ್ದ ಬಾಳುವಂತೆ, ದೇಶ, ರಾಜ್ಯಕ್ಕೆ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಬೇಕು ಎಂದು ರಾಜ್ಯ ಹಜ್, ವಕ್ಫ್ ಮತ್ತು
ಅಲ್ಪಸಂಖ್ಯಾಕ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು.
ಬಜಪೆ ಅನ್ಸಾರ್ ಆಂಗ್ಲ ಮಾಧ್ಯಮ ಶಾಲೆಯ ಸಭಾಭವನದಲ್ಲಿ ಭಾರತೀಯ ಹಜ್ ಸಮಿತಿ ಮೂಲಕ ಮಂಗಳೂರು ವಿಮಾನ ನಿಲ್ದಾಣದಿಂದ ಹೊರಡುವ ಪವಿತ್ರ ಹಜ್ ಯಾತ್ರೆಯ ಪ್ರಥಮ ತಂಡಕ್ಕೆ ಶನಿವಾರ ಚಾಲನೆ ನೀಡಿದರು. ಅಡ್ಯಾರ್ನಲ್ಲಿ ಹಜ್ ಭವನ ಹಜ್ ಭವನಕ್ಕೆ ಬಜಪೆ ಸಮೀಪ ಮಂಜೂರಾದ ಸ್ಥಳ ಕೈಬಿಟ್ಟು ಅಡ್ಯಾರ್ನಲ್ಲಿ ಖಾಸಗಿ ಜಾಗ ಪರಿಶೀಲನೆ ಮಾಡ
ಲಾಗಿದೆ. ಅಲ್ಲಿ ಹಜ್ ಭವನ ನಿರ್ಮಿಸುವ ಯೋಜನೆ ಇದೆ ಎಂದರು.ಉಡುಪಿ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಯ ಖಾಜಿ ಪಿ.ಎಂ.ಇಬ್ರಾಹಿಂ ಮುಸ್ಲಿಯಾರ್ ಬೇಕಲ್, ಮಂಗಳೂರು ಹಜ್ ಕ್ಯಾಂಪ್ನ ನಿರ್ವಹಣ ಸಮಿತಿ ಅಧ್ಯಕ್ಷ ವೈ. ಮಹಮದ್ ಕುಂಞಿ, ಪ್ರ. ಕಾರ್ಯದರ್ಶಿ ಎಸ್.ಎಂ.ರಶೀದ್, ಪರಿಷತ್ ಸದಸ್ಯ ಬಿ.ಎಂ. ಫಾರೂಕ್, ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಯು.ಕೆ. ಮೋನು, ಕೆ.ಪಿ. ಇಬ್ರಾಹಿಂ, ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಕೆ.ಎಸ್.ಎಂ. ಮಸೂದ್ ಇದ್ದರು. ಹಜ್ ಸಮಿತಿ ಇಒ ಸಫ್ìರಾಜ್ ಖಾನ್ ಸರ್ದಾರ್ ಸ್ವಾಗತಿಸಿದರು.
6,624 ಮಂದಿ
ರಾಜ್ಯದ 6,624 ಸಹಿತ ಭಾರತದಿಂದ ಈ ಬಾರಿ 1.73 ಲಕ್ಷ ಮಂದಿ ಹಜ್ ಯಾತ್ರೆ ಮಾಡಲಿದ್ದಾರೆ. ಒಟ್ಟು 18,427 ಅರ್ಜಿಗಳು ಬಂದಿದ್ದವು. ದ.ಕ., ಉಡುಪಿ, ಕೊಡಗು, ಹಾಸನ, ಚಿಕ್ಕಮಗಳೂರಿನ 432 ಮಂದಿ 42 ದಿನಗಳ ಯಾತ್ರೆ ಕೈಗೊಳ್ಳಲಿದ್ದಾರೆ.
ಸೆ. 1-3ರಂದು ವಾಪಸಾಗುವರು ಎಂದು ಕೆ.ಎಂ. ಅಬೂಬಕರ್ ಮೋಂಟುಗೋಳಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ