ನಾಡದೋಣಿ ಮೀನುಗಾರರಿಗೆ ನಿರೀಕ್ಷಿತ ಲಾಭ ಸಿಕ್ಕಿಲ್ಲ


Team Udayavani, Jul 27, 2018, 10:16 AM IST

27-july-2.jpg

ಮಹಾನಗರ: ಕರಾವಳಿಯಲ್ಲಿ ನಾಡದೋಣಿ ಮೀನುಗಾರಿಕೆ ಕಾಲಾವಧಿ ಪೂರ್ಣಗೊಳ್ಳುತ್ತ ಬಂದಿದ್ದು, ಇನ್ನೇನು ವಾರದೊಳಗೆ ಯಾಂತ್ರೀಕೃತ ಮೀನುಗಾರಿಕೆಗೆ ಸಿದ್ಧತೆಗಳು ಪ್ರಾರಂಭಗೊಳ್ಳಲಿದೆ. ವಿಷಾದನೀಯ ಸಂಗತಿ ಅಂದರೆ, ಈ ಋತುವಿನಲ್ಲಿ ಹವಾಮಾನ ವೈಪರೀತ್ಯದಿಂದಾಗಿ ನಾಡದೋಣಿ ಮೀನುಗಾರರಿಗೆ ಮೀನುಗಾರಿಕೆ ಮಾಡಲು ಸಾಧ್ಯವಾಗದೆ ನಿರಾಸೆ ಉಂಟಾಗಿದೆ.

ಪ್ರತಿಕೂಲ ಹವಾಮಾನದಿಂದಾಗಿ ಮೀನುಗಾರಿಕೆಗೆ ತೊಡಕಾಗಿದೆ. ಈ ಬಾರಿ ನಾಡದೋಣಿ ಮೀನುಗಾರರಿಗೆ ನಿರೀಕ್ಷಿದಷ್ಟು ಲಾಭ ಸಿಕ್ಕಿಲ್ಲ. ನಾಡದೋಣಿ ಮೀನುಗಾರಿಕೆ ಆರಂಭ ಈ ಬಾರಿ ನಿಗದಿತ ಸಮಯಕ್ಕಿಂತ ತಡವಾಗಿತ್ತು. ಆದಾದ ಬಳಿಕ ಕಡಲಿಗಿಳಿದ ಬಹುತೇಕ ದೋಣಿಗಳು ಮೀನು ಸಿಗದೆ ಹಿಂದೆ ಬಂದಿದ್ದವು. ಕಡಲಬ್ಬರದಿಂದಾಗಿ ಹೆಚ್ಚಿನ ನಾಡದೋಣಿಗಳು ಮೀನುಗಾರಿಕೆಗೆ ತೆರಳದ ಹಾಗೇ ಇವೆ. ತೆರಳಿದ ದೋಣಿಗಳು ಕೈ ಸುಟ್ಟು ಕೊಂಡಿವೆ ಎಂದು ಮೀನುಗಾರರು ಬೇಸರ ವ್ಯಕ್ತಪಡಿಸುತ್ತಾರೆ.

ಮೇ ಅಂತ್ಯದಿಂದಲೇ ಆರಂಭಗೊಂಡ ಭಾರೀ ಮಳೆಗೆ ಸಮುದ್ರ ಪ್ರಕ್ಷುಬ್ಧಗೊಂಡು ಮೀನುಗಾರಿಕೆಗೆ ಹೊಡೆತ ಬಿದ್ದಿತ್ತು. ಕೆಲವು ಮೀನುಗಾರರು ಧೈರ್ಯ ಮಾಡಿಕೊಂಡು ಮೀನುಗಾರಿಕೆಗೆ ತೆರಳಿದರೂ ಮೀನು ಸಿಗದೆ ವಾಪಾಸ್ಸಾಗಿದ್ದಾರೆ. ಇನ್ನೂ ಕೆಲವರು ಕಡಲಿಗಿಳಿಯುವ ಸಾಹಸವನ್ನೇ ಮಾಡಿಲ್ಲ. ಮಳೆಗಾಲದ ಎರಡು ತಿಂಗಳಲ್ಲಿ ಮೀನಿನ ಸಂತಾನ ಉತ್ಪತ್ತಿಯಾಗಬೇಕು ಎನ್ನುವ ನಿಟ್ಟಿನಲ್ಲಿ ಮೀನುಗಾರಿಕೆಗೆ ನಿಷೇಧ ಹೇರಲಾಗಿದ್ದು, ಈ ನಿಷೇಧ ಅವಧಿ ಜು. 31ಕ್ಕೆ ಅಂತ್ಯಗೊಳ್ಳಲಿದೆ. ಆ.10ರ ಸುಮಾರಿಗೆ ಯಾಂತ್ರೀಕೃತ ಬೋಟ್‌ಗಳಲ್ಲಿ ಮೀನುಗಾರಿಕೆಗೆ ಆರಂಭವಾಗುತ್ತದೆ. ಈ ಅವಧಿಯೊಳಗೆ ನಾಡದೋಣಿ ಮೀನುಗಾರರು ಮೀನುಗಾರಿಕೆ ಮಾಡಬೇಕಾಗುತ್ತದೆ.

ಕಳೆದ ಬಾರಿಯ ಅರ್ಥದಷ್ಟಿಲ್ಲ
ಕಳೆದ ಬಾರಿ ಜುಲೈ ಅಂತ್ಯದ ವೇಳಗೆ ಒಂದು ನಾಡದೋಣಿ ಮೀನುಗಾರರು ಸುಮಾರು 3ರಿಂದ 5 ಲಕ್ಷರೂ.ಗಳವರೆಗೆ ಲಾಭ ಪಡೆದುಕೊಂಡಿದ್ದರು. ಆದರೆ ಈ ಬಾರಿ ಅದೇ ಮೀನುಗಾರರು ಸುಮಾರು 50 ಸಾವಿರ ರೂ.ಗಳಷ್ಟೇ ಲಾಭ ಗಳಿಸಿದ್ದಾರೆ. ಕಳೆದ ಬಾರಿಯ ಲಾಭದ ಅರ್ಧ ಪಾಲು ಈ ಬಾರಿ ಪಡೆದುಕೊಂಡಿಲ್ಲ ಎಂಬುದು ಮೀನುಗಾರರ ಅಳಲು.

ಅವಧಿ ವಿಸ್ತರಣೆಗೆ ಮನವಿ
ಕಳೆದ ಬಾರಿಯೂ ಸಮುದ್ರ ಕೊಂಚ ಪ್ರಕ್ಷುಬ್ದಗೊಂಡಿದ್ದರಿಂದ ಸೆಪ್ಟಂಬರ್‌ ವರೆಗೆ ನಾಡದೋಣಿ ಮೀನುಗಾರಿಕೆಗೆ ಅನುಮತಿ ನೀಡಲಾಗಿತ್ತು. ಈ ಬಾರಿಯೂ ಇನ್ನಷ್ಟು ದಿನ ವಿಸ್ತರಣೆಗೆ ಮನವಿ ಮಾಡಲಾಗುವುದು ಎಂದು ನಾಡ ದೋಣಿ ಮೀನುಗಾರರ ಸಂಘದ ಅಧ್ಯಕ್ಷ ಅವರು ಉದಯವಾಣಿ ಸುದಿನಕ್ಕೆ ತಿಳಿಸಿದ್ದಾರೆ.

ಅಪಾರ ನಷ್ಟ
ಸಮುದ್ರ ಪ್ರಕ್ಷುಬ್ದಗೊಂಡಿರುವುದರಿಂದ ಈ ಬಾರಿ ನಾಡ ದೋಣಿ ಮೀನುಗಾರರಿಗೆ ನಷ್ಟ ಉಂಟಾಗಿದೆ. ಕೆಲವು ದೋಣಿಗಳು ಇನ್ನೂ ಸಮುದ್ರಕ್ಕೆ ಇಳಿದೆ ಇಲ್ಲ. ಇನ್ನೂ ಕೆಲವೇ ದಿನಗಳಲ್ಲಿ ಯಾಂತ್ರೀಕೃತ ಮೀನುಗಾರಿಕೆ ಆರಂಭವಾಗಲಿದೆ.
– ವಾಸುದೇವ ಬಿ.ಕೆ.,
ಮಂಗಳೂರು ನಾಡದೋಣಿ
ಮೀನುಗಾರರ ಸಂಘದ ಅಧ್ಯಕ್ಷ

‡ ಪ್ರಜ್ಞಾ ಶೆಟ್ಟಿ

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.