ಖಗ್ರಾಸ ಚಂದ್ರಗ್ರಹಣ ದೇಗುಲಗಳಲ್ಲಿ ನಿಗದಿಗಿಂತ ಮುನ್ನ ಪೂಜೆ


Team Udayavani, Jul 28, 2018, 11:39 AM IST

sharavu.png

ಮಂಗಳೂರು/ಉಡುಪಿ: ಶತಮಾನದ ಖಗ್ರಾಸ ಚಂದ್ರ ಗ್ರಹಣದ ಹಿನ್ನೆಲೆಯಲ್ಲಿ ನಗರದ ವಿವಿಧ ದೇವಸ್ಥಾನಗಳಲ್ಲಿ ಶುಕ್ರ ವಾರ ಸುಮಾರು ಎರಡು ಗಂಟೆ ಮುಂಚಿತವಾಗಿಯೇ ರಾತ್ರಿ ಪೂಜೆಯನ್ನು ನೆರವೇರಿಸಲಾಯಿತು. ಆದರೆ ದೇವಸ್ಥಾನಗಳು ಪ್ರತಿದಿನದಂತೆ ರಾತ್ರಿ ಒಂಬತ್ತರವರೆಗೂ ತೆರೆದಿದ್ದವು.

ಈ ಶತಮಾನದ ಸುದೀರ್ಘ‌ ಅವಧಿಯ ಕೆಂಪು ರಕ್ತ ಚಂದ್ರಗ್ರಹಣ ಇದಾಗಿದೆ. ಭಾರತೀಯರ ನಂಬಿಕೆಯ ಪ್ರಕಾರ ಗ್ರಹಣ ಹಿಡಿಯುವ ಕೆಲವು ಗಂಟೆಗಳ ಮುಂಚಿತವಾಗಿಯೇ ಯಾವುದೇ ಶುಭ ಕಾರ್ಯ, ಪೂಜೆ ಪುನಸ್ಕಾರಾದಿಗಳನ್ನು ಮಾಡುವಂತಿಲ್ಲ. ಹಾಗಾಗಿ ನಗರದ ದೇವಸ್ಥಾನಗಳಲ್ಲಿನ ರಾತ್ರಿ ಪೂಜಾ ವಿಧಿ ವಿಧಾನಗಳಲ್ಲಿಯೂ ಶುಕ್ರವಾರ ಬದಲಾವಣೆ ಮಾಡಲಾಗಿತ್ತು. ಶ್ರೀಕೃಷ್ಣ ಮಠದಲ್ಲಿ ಚಾತುರ್ಮಾಸ್ಯ ಅವಧಿಯಾದ ಕಾರಣ ಎಂದಿನಂತೆ ರಾತ್ರಿ 7.30ಕ್ಕೆ ಪೂಜೆ ಆರಂಭ ವಾಗಿ 8.15ಕ್ಕೆ ಮುಕ್ತಾಯಗೊಂಡಿತು. ಗ್ರಹಣ ಕಾಲದಲ್ಲಿ ಏರ್ಪಡಿಸಿದ ಗ್ರಹಣ ಶಾಂತಿ ಯಲ್ಲಿ ಪರ್ಯಾಯ ಶ್ರೀ ಪಲಿಮಾರು ಶ್ರೀಪಾದರು ಸಹಿತ ನೂರಾರು ಭಕ್ತರು ಪಾಲ್ಗೊಂಡಿದ್ದರು. ಗ್ರಹಣ ಕಾಲದಲ್ಲಿ ಕೃಷ್ಣ ಮಠ ತೆರೆದಿದ್ದು ಮಧ್ವಸರೋವರದಲ್ಲಿ ವೈದಿಕರು ಜಪ, ಪಾರಾಯಣ ನಡೆಸಿದರು. 

ದೇಗುಲಗಳಲ್ಲಿ ಭಕ್ತರ ದಟ್ಟಣೆ ಕಡಿಮೆ
ಕುಂದಾಪುರ: ಚಂದ್ರಗ್ರಹಣ ಪ್ರಯುಕ್ತ ಶುಕ್ರವಾರ ಕೊಲ್ಲೂರು, ಆನೆ ಗುಡ್ಡೆ, ಮಾರಣಕಟ್ಟೆ, ಹಟ್ಟಿಯಂಗಡಿ, ಕಮಲ ಶಿಲೆ ದೇವಸ್ಥಾನಗಳಲ್ಲಿ ಮಧ್ಯಾಹ್ನ ಬಳಿಕ ಭಕ್ತರ ಸಂಖ್ಯೆ ಇಳಿ ಮುಖ ಗೊಂಡಿತ್ತು. 
ಕೊಲ್ಲೂರಿನಲ್ಲಿ ಎಂದಿನಂತೆ ಬೆಳಗ್ಗಿನಿಂದ ಸಂಜೆಯವರೆಗೂ ಪೂಜೆ, ಸೇವೆ ಗಳಿದ್ದರೂ, ಮಧ್ಯಾಹ್ನದ ಬಳಿಕ ದೇವರ ದರ್ಶನಕ್ಕೆ ಆಗಮಿಸಿದ ಭಕ್ತರ ಸಂಖ್ಯೆ ಕಡಿಮೆಯಿತ್ತು. ಆನೆಗುಡ್ಡೆ ಹಾಗೂ ಹಟ್ಟಿಯಂಗಡಿಯಲ್ಲಿ ದೇವ ಸ್ಥಾನ ತೆರೆದಿದ್ದರೂ, ಭಕ್ತರ ಸಂಖ್ಯೆ ವಿರಳವಾಗಿತ್ತು. ಮಾರಣಕಟ್ಟೆಯಲ್ಲಿ ಮಧ್ಯಾಹ್ನ 1.30ರ ಅನಂತರ ದೇವರ ದರ್ಶನ ವಿದ್ದರೂ, ಭಕ್ತರು ಹೆಚ್ಚಿನ ಪ್ರಮಾಣದಲ್ಲಿರಲಿಲ್ಲ. ಕದ್ರಿ ಶ್ರೀ ಮಂಜುನಾಥ ದೇವ ಸ್ಥಾನ ದಲ್ಲಿ ರಾತ್ರಿ 8 ಗಂಟೆಯ ಮಹಾ ಪೂಜೆಯನ್ನು 7 ಗಂಟೆಗೇ ನೆರವೇರಿಸಲಾಗಿತ್ತು. ಗ್ರಹಣ ದೋಷವಿರುವ ಭಕ್ತಾದಿಗಳು ಜು. 28 ರಂದು ಕೂಡ ಎಳ್ಳೆಣ್ಣೆ ಹಾಗೂ ಧಾನ್ಯ ಸಮರ್ಪಿಸಲು ಅವಕಾಶವಿದೆ.  

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ರಾತ್ರಿ ಪೂಜೆ ಸಂಜೆ 6.15ಕ್ಕೇ ಮುಗಿದಿದೆ. ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ದೈನಂದಿನ ಪೂಜೆ ಗಳು ಯಥಾ ಪ್ರಕಾರ ನಡೆದಿದೆ. ಗ್ರಹಣ ಆರಂಭ ಕಾಲವಾದ ರಾತ್ರಿ 11.54ರಿಂದ ಗ್ರಹಣಮೋಕ್ಷವಾದ ಮುಂಜಾನೆ 3.38ರ ವರೆಗೂ ದೇವಾಲಯ ತೆರೆದಿತ್ತು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.