ಗ್ರಾ.ಪಂ. ತೆರಿಗೆ ಸಂಗ್ರಹ: ದ.ಕ. ರಾಜ್ಯಕ್ಕೆ ಪ್ರಥಮ


Team Udayavani, Jul 30, 2018, 11:43 AM IST

tax1.jpg

ಮಂಗಳೂರು: ವಿದ್ಯುತ್‌ ಬಿಲ್‌ ಪಾವತಿಯಲ್ಲಿ ಮುಂಚೂಣಿಯಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆ ಗ್ರಾ. ಪಂ. ತೆರಿಗೆ ಸಂಗ್ರಹಣೆಯಲ್ಲಿಯೂ ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿದೆ. ಜಿಲ್ಲಾ ವ್ಯಾಪ್ತಿಯ ಗ್ರಾ. ಪಂ.ಗಳು ತೆರಿಗೆ ಸಂಗ್ರಹದಲ್ಲಿ ಶೇ.68.34ರಷ್ಟು ಗುರಿ ಸಾಧಿಸಿ ರಾಜ್ಯಕ್ಕೆ ಮಾದರಿ ಎನಿಸಿವೆ. ಶೇ.65.44ರಷ್ಟು ತೆರಿಗೆ ಸಂಗ್ರಹಿಸಿ ಉತ್ತರ ಕನ್ನಡ ಜಿಲ್ಲೆ ದ್ವಿತೀಯ ಹಾಗೂ ಶೇ.51.04ರಷ್ಟು ತೆರಿಗೆ ಸಂಗ್ರಹಿಸಿ ಉಡುಪಿ ಜಿಲ್ಲೆ ತೃತೀಯ ಸ್ಥಾನದಲ್ಲಿವೆ. ರಾಜ್ಯದಲ್ಲಿ ತೆರಿಗೆ ವಸೂಲಿ ಮಾಡಿ ಆರ್ಥಿಕ ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ ಗ್ರಾ. ಪಂ.ಗಳು ಅಸಡ್ಡೆ ತೋರುತ್ತಿರುವ ಆರೋಪ ಕೇಳಿ ಬರುತ್ತಿರುವಾಗಲೇ ಕರಾವಳಿ ಭಾಗದಲ್ಲಿ ಗ್ರಾ.ಪಂ. ತೆರಿಗೆ ಸಂಗ್ರಹ ದಾಖಲೆ ಮಟ್ಟದಲ್ಲಿ ಸಂಗ್ರಹವಾಗಿರುವುದು ವಿಶೇಷ. 

ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ರಾಜ್‌ ಕಾಯ್ದೆ 1993 ಯ‌ನ್ವಯ ಗ್ರಾ. ಪಂ.ಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಕೃಷಿಯೇತರ ಆಸ್ತಿಗಳ ಮೇಲೆ ತೆರಿಗೆ ವಿಧಿಸಲು ಅವಕಾಶ ಕಲ್ಪಿಸಲಾಗಿದೆ. ಗ್ರಾ.ಪಂ.ಗಳು ತಮ್ಮ ಸ್ವಂತ ಸಂಪನ್ಮೂಲಗಳನ್ನು ಕ್ರೋಡೀಕರಿಸಿ  ಸ್ವಾವಲಂಬಿಗಳಾಗಬೇಕು ಎಂಬುದು ಸರಕಾರದ ಆಶಯ. ಆದರೆ ಹೆಚ್ಚಿನ ಗ್ರಾ.ಪಂ.ಗಳು ತಮಗೆ ನೀಡಲಾದ ಅಧಿಕಾರವನ್ನು ಸಮರ್ಪಕವಾಗಿ ಬಳಸಿಕೊಳ್ಳದೆ ತೆರಿಗೆ ನಿರ್ಧರಣೆ, ಪರಿಷ್ಕರಣೆ ಹಾಗೂ ವಸೂಲಾತಿಯಲ್ಲಿ ನಿರ್ಲಕ್ಷ್ಯವಹಿಸಿದ್ದವು. 

ದ. ಕನ್ನಡ ಜಿಲ್ಲೆಯ ಒಟ್ಟು 230 ಗ್ರಾ. ಪಂ.ಗಳಿಂದ 2017-18ರಲ್ಲಿ 26.59 ಕೋ.ರೂ ತೆರಿಗೆ ಸಂಗ್ರಹವಾಗಿದ್ದು 12.31 ಕೋ.ರೂ ಸಂಗ್ರಹಕ್ಕೆ ಬಾಕಿ ಇದೆ. ಉಡುಪಿಯಲ್ಲಿ 15.36 ಕೋ.ರೂ. ಸಂಗ್ರಹವಾಗಿದ್ದು, 14.73 ಕೋ. ರೂ. ಬಾಕಿ ಇದೆ. ಇದು ಉಳಿದ ಜಿಲ್ಲೆಗಳಿಗಿಂತ ಹೆಚ್ಚು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್‌ ಇಲಾಖೆ ತಿಳಿಸಿದೆ. 

ಕಲಬುರಗಿಗೆ ಕೊನೆಯ ಸ್ಥಾನ 
ಕಲಬುರಗಿ ಜಿಲ್ಲೆಯ 264 ಗ್ರಾ.ಪಂ. ಗಳಿಂದ 9.17 ಕೋ.ರೂ. ನಿರೀಕ್ಷೆ ಇರಿಸಲಾಗಿದ್ದು, ಸಂಗ್ರಹವಾಗಿರುವುದು 12.89 ಲಕ್ಷ ರೂ. ಮಾತ್ರ. ಬೀದರ್‌ ಜಿಲ್ಲೆಯ 185 ಗ್ರಾ.ಪಂ.ಗಳಿಂದ 5.94 ಕೋ.ರೂ ಸಂಗ್ರಹವಾಗಬೇಕಿದ್ದರೂ ಕೇವಲ 55.96 ಲಕ್ಷ ರೂ. ಸಂಗ್ರಹವಾಗಿದೆ. ಯಾದಗಿರಿಯಲ್ಲಿ 123 ಗ್ರಾ.ಪಂ.ಗಳಿಂದ 3.55 ಕೋ.ರೂ. ನಿರೀಕ್ಷೆಯಲ್ಲಿ 76.93 ಲಕ್ಷ ರೂ. ಮಾತ್ರ ಸಂಗ್ರಹವಾಗಿದೆ. 

ತೆರಿಗೆ ಪರಿಷ್ಕರಣೆ ಕುಸಿತ 
ರಾಜ್ಯದಲ್ಲಿ ಒಟ್ಟು 6,024 ಗ್ರಾ. ಪಂ.ಗಳು ಕಾರ್ಯನಿರ್ವಹಿಸುತ್ತಿವೆ. ತೆರಿಗೆ ಸಂಗ್ರಹಣೆಗೆ ವಿಶೇಷ ಒತ್ತು ನೀಡುವುದಕ್ಕಾಗಿ ತೆರಿಗೆ ಪರಿಷ್ಕರಣೆಗೆ ಗ್ರಾ.ಪಂ.ಗಳಿಗೆ ಅಧಿಕಾರ ನೀಡಲಾಗಿತ್ತು. ಆದರೆ ಬಹುತೇಕ ಗ್ರಾ.ಪಂ.ಗಳು ಈ ಅಧಿಕಾರವನ್ನೂ ಬಳಸಿಕೊಂಡಿಲ್ಲ ಎಂಬ ಆರೋಪವಿದೆ. 2015ನೇ ಸಾಲಿನಲ್ಲಿ ತಿದ್ದುಪಡಿ ತಂದಿದ್ದರೂ 1,421 ಗ್ರಾ.ಪಂ.ಗಳು ಮಾತ್ರ ತೆರಿಗೆ ಪರಿಷ್ಕರಣೆ ಮಾಡಿವೆ. ದ.ಕ. ಜಿಲ್ಲೆಯ 96, ಉ.ಕ. ಜಿಲ್ಲೆಯ 128, ಉಡುಪಿ ಜಿಲ್ಲೆಯ 88, ಬೆಂಗಳೂರು ನಗರದ 71, ಕೊಡಗು ಜಿಲ್ಲೆಯ 37 ಗ್ರಾ.ಪಂ.ಗಳು ತೆರಿಗೆ ಪರಿಷ್ಕರಣೆಯನ್ನು ಕಳೆದ 4 ವರ್ಷಗಳಲ್ಲಿ ಮಾಡಲೇ ಇಲ್ಲ. ಬೆಳಗಾವಿಯ 417, ತುಮಕೂರಿನ 273, ಮಂಡ್ಯದ 216, ಕಲಬುರಗಿಯ 211 ಗ್ರಾ.ಪಂ.ಗಳು ಕೂಡ ತೆರಿಗೆ ಪರಿಷ್ಕರಣೆ ಮಾಡಿಲ್ಲ.

*ದಿನೇಶ್‌ ಇರಾ

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.