ಖಾಸಗಿ ಸಿಟಿ ಬಸ್‌ಗಳಿಗೂ ಬೇಕಿದೆ ಸಿಸಿ ಕೆಮರಾ ಕಣ್ಗಾವಲು


Team Udayavani, Jul 31, 2018, 12:52 PM IST

bus2.jpg

ಮಹಾನಗರ: ಸರ್‌… ನಗರದಲ್ಲಿ ಓಡಾಡುವ ಅನೇಕ ಖಾಸಗಿ ಸಿಟಿ ಬಸ್‌ಗಳಲ್ಲಿ ನಿರ್ವಾಹಕರು ಟಿಕೆಟ್‌ ನೀಡುವುದಿಲ್ಲ. ಫುಟ್‌ಬೋರ್ಡ್‌ನಲ್ಲಿ ವಿದ್ಯಾರ್ಥಿಗಳು ನೇತಾಡುತ್ತಿರುತ್ತಾರೆ. ಇದು ಗೊತ್ತಿದ್ದರೂ, ನಿರ್ವಾಹಕರು ಚಕಾರ ಎತ್ತುವುದಿಲ್ಲ’ ಎಂದು ಟ್ರಾಫಿಕ್‌ ಪೊಲೀಸ್‌, ಸಾರಿಗೆ ಇಲಾಖೆಗೆ ಬರುವ ದೂರುಗಳ ಸಂಖ್ಯೆ ಹೆಚ್ಚಾಗಿದೆ. ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಖಾಸಗಿ ಸಿಟಿ ಬಸ್‌ ಮಾಲಕರ ಸಂಘ ಈಗ ಚಿಂತಿಸಿದೆ.
ಖಾಸಗಿ ಸಿಟಿ ಬಸ್‌ಗಳಲ್ಲಿ ನಡೆಯುವ ಅಕ್ರಮ ಗಳಿಗೆ ಕಡಿವಾಣ ಹಾಕುವ ಸಲುವಾಗಿ ಬಸ್‌ಗಳಲ್ಲಿ ಸಿಸಿ ಕೆಮರಾ ಕಣ್ಗಾವಲನ್ನಿಡಬೇಕು ಎಂದು ಪ್ರಯಾಣಿಕರ ಒತ್ತಾಯ ಈಗ ಜೋರಾಗಿ ಕೇಳಿಬರುತ್ತಿದೆ. 

ನಗರದಲ್ಲಿ ಒಟ್ಟು 360 ಖಾಸಗಿ ಸಿಟಿ ಬಸ್‌ಗಳಿವೆ. ಸ್ಟೇಟ್‌ಬ್ಯಾಂಕ್‌ನಿಂದ ಕೊನೆಯ ಬಸ್‌ ಸುಮಾರು 10.20ಕ್ಕೆ ಹೊರಡುತ್ತದೆ. ರಾತ್ರಿ ಹತ್ತು ಗಂಟೆ ಬಳಿಕವೂ ನಗರದ ಸ್ಟೇಟ್‌ಬ್ಯಾಂಕ್‌ನಿಂದ ಪಾವೂರು, ತಲಪಾಡಿ ಸಹಿತ ಇನ್ನಿತರ ಪ್ರದೇಶಗಳಿಗೆ ಸಿಟಿ ಬಸ್‌ ತೆರಳುತ್ತಿವೆ. ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಅನೇಕ ಕಂಪೆನಿ, ಮಾಲ್‌ಗ‌ಳಲ್ಲಿ ದುಡಿಯುವ ಮಹಿಳೆಯರು ರಾತ್ರಿ 9 ಗಂಟೆ ಅನಂತರವೂ ಸಿಟಿ ಬಸ್‌ಗಳಲ್ಲಿ  ಸಂಚರಿಸುತ್ತಾರೆ. ಅವರ ಭದ್ರತೆ ಕೂಡ ಸಂಘದ ಮುಖ್ಯ ಉದ್ದೇಶಗಳ‌ಲ್ಲೊಂದು. ಪ್ರತೀ ಬಸ್‌ ದಿನದಲ್ಲಿ ಸರಾಸರಿ 8 ಟ್ರಿಪ್‌ ಓಡುತ್ತವೆ. ಈ ದೃಷ್ಟಿಯಿಂದ ಸಿಟಿ ಬಸ್‌ಗಳಲ್ಲಿ ಸಿಸಿ ಕೆಮರಾ ಅಳವಡಿಸುವ ಆವಶ್ಯಕತೆ ಇದೆ ಎನ್ನುತ್ತಾರೆ ಪ್ರಯಾಣಿಕರು.

ಕಡಿಮೆಯಾಗುತ್ತಿಲ್ಲ  ಪ್ರಕರಣ
ಖಾಸಗಿ ಸಿಟಿ ಬಸ್‌ಗಳಲ್ಲಿ ಹಣ ಕೊಟ್ಟರೂ, ಟಿಕೆಟ್‌ ನೀಡುತ್ತಿಲ್ಲ ಎಂಬ ದೂರು ಹೊಸದಲ್ಲ. ಪೊಲೀಸ್‌ ಫೋನ್‌ ಇನ್‌ ಕಾರ್ಯಕ್ರಮ ಗಳಲ್ಲಿಯೂ ಹತ್ತಾರು ಕರೆಗಳು ಬಂದಿದ್ದವು.  ಈ ಬಗ್ಗೆ “ಸುದಿನ’ ಕೂಡ ವಿಸ್ತೃತ ವಿಶೇಷ ವರದಿ ಪ್ರಕಟಿಸಿತ್ತು. ಕೆಲವು ದಿನಗಳ ಹಿಂದೆ ಟ್ರಾಫಿಕ್‌ ಪೊಲೀಸರು ಮತ್ತು ಸಾರಿಗೆ ಇಲಾಖೆ ಕೆಲವು ಕಡೆಗಳಲ್ಲಿ ಕಾರ್ಯಾಚರಣೆ ನಡೆಸಿ ದಂಡ ವಿಧಿಸಲಾಗಿತ್ತು. ಆದರೂ ಮತ್ತದೇ ಅಕ್ರಮಗಳು ಮುಂದುವರಿಯುತ್ತಿವೆ. 
ರಾತ್ರಿ ವೇಳೆ ಬಸ್‌ಗಳಲ್ಲಿ ಕುಡುಕರ ಸಂಖ್ಯೆ ಹೆಚ್ಚಾಗುತ್ತಿದ್ದು, ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ಒಂದು ವೇಳೆ ಬಸ್‌ಗಳಲ್ಲಿ ಸಿಸಿ ಕೆಮರಾ ಅಳವಡಿಸಿದರೆ ಇದನ್ನು ಕೊಂಚ ಮಟ್ಟಿಗಾದರೂ ತಡೆಯಲು ಸಾಧ್ಯವಾದೀತು.

 ಇಲ್ಲಿಯೂ ಅಗತ್ಯ
ಬೆಂಗಳೂರಿನಲ್ಲಿನ ಹೆಚ್ಚಿನ ಬಿಎಂಟಿಸಿ ಸಿಟಿ ಬಸ್‌ಗಳಲ್ಲಿ  ಸಿಸಿ ಕೆಮರಾ ಅಳವಡಿಸಲಾಗಿದೆ. ಇದರಿಂದ ಅಪಘಾತ ಪ್ರಮಾಣ, ಚಾಲಕ- ನಿರ್ವಾಹಕನ ನಿರ್ಲಕ್ಷ್ಯ ಕಡಿಮೆಯಾಗಿದೆ. ಜತೆಗೆ ಪ್ರಯಾಣಿಕರ ಜತೆ ನಿರ್ವಾಹಕರ ನಡವಳಿಕೆ ಕೂಡ ಸುಧಾರಿಸಿದೆ. ಈ ನಿಟ್ಟಿನಲ್ಲಿ ನಗರದಲ್ಲೂ  ಸಿಟಿ ಬಸ್‌ಗಳಿಗೂ ಹಂತ ಹಂತವಾಗಿ ಸಿಸಿ ಕೆಮರಾ ಅಳವಡಿಸಬೇಕು ಎನ್ನುತ್ತಾರೆ ಸಾರ್ವಜನಿಕರು.

 ಪರಿಶೀಲಿಸಿ ಕ್ರಮ
ಖಾಸಗಿ ಸಿಟಿ ಬಸ್‌ಗಳಲ್ಲಿ ಸಿಸಿ ಕೆಮರಾಗಳಲ್ಲಿ ಅಳವಡಿಸುವ ನಿರ್ಧಾರ ಒಳ್ಳೆಯದು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸುತ್ತೇವೆ. ಮಾಲಕರ ಸಂಘದ ಮುಂದಿನ ಸಭೆಯಲ್ಲಿ ಪ್ರಸ್ತಾವಿಸಿ, ಹಂತ ಹತವಾಗಿ ಬಸ್‌ಗಳಲ್ಲಿ ಸಿಸಿ ಕೆಮರಾ ಅಳವಡಿಸಲು ಪರಿಶೀಲನೆ ನಡೆಸುತ್ತೇವೆ.
 - ಅಜೀಜ್‌ ಪರ್ತಿಪಾಡಿ,
ಅಧ್ಯಕ್ಷ, ಖಾಸಗಿ ಸಿಟಿ ಬಸ್‌ ಮಾಲಕರ ಸಂಘ

  ಸುರಕ್ಷತೆ ಅಗತ್ಯ
ಸುರಕ್ಷತೆಯ ದೃಷ್ಟಿಯಿಂದ ನಗರದ ಖಾಸಗಿ ಸಿಟಿ ಬಸ್‌ಗಳಲ್ಲಿ ಸಿಸಿ ಕೆಮರಾ ಅಳವಡಿಸಬೇಕು. ಏಕೆಂದರೆ ಕೆಲವು ಬಾರಿ ನಿರ್ವಾಹಕರು ಪ್ರಯಾಣಿಕರ ಜತೆ ಸಂಯಮದಿಂದ ವರ್ತಿಸುವುದಿಲ್ಲ. ಅಲ್ಲದೆ, ಸುರಕ್ಷತೆ ಮತ್ತು ಭದ್ರತೆಯ ದೃಷ್ಟಿಯಿಂದಲೂ ಅಳವಡಿಸುವುದು ಒಳ್ಳೆಯದು.
 - ನಿಶಾಂತ್‌ ರೈ, ಪ್ರಯಾಣಿಕ

 *ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.