ಬಲವಂತದ ಡಿಸ್ಚಾರ್ಜ್ : ಹಸುಳೆ ಸಾವು


Team Udayavani, Aug 6, 2018, 3:00 PM IST

baby.jpg

ಕಡಬ: ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆ ತಲುಪುವಷ್ಟರಲ್ಲಿ 6 ದಿನಗಳ ಹಸುಗೂಸು ಮೃತಪಟ್ಟ ಘಟನೆ ಕಡಬ ತಾಲೂಕಿನ ಕುಟ್ರಾಪ್ಪಾಡಿ ಗ್ರಾಮದ ಕಾಯರಡ್ಕದಲ್ಲಿ ರವಿವಾರ ಸಂಭವಿಸಿದ್ದು, ಮಂಗಳೂರಿನ ಲೇಡಿ ಗೋಶನ್‌ ಆಸ್ಪತ್ರೆಯ ವೈದ್ಯರ ಬೇಜವಾಬ್ದಾರಿಯಿಂದ ಸಾವು ಸಂಭವಿಸಿದೆ ಎಂದು ಮಗುವಿನ ಹೆತ್ತವರು ಆರೋಪಿಸಿದ್ದಾರೆ. ದಲಿತ ಕೂಲಿ ಕಾರ್ಮಿಕ ಕಾಯರಡ್ಕ ನಿವಾಸಿ ಶೇಖರ ಅವರ ಪತ್ನಿ ವಸಂತಿ 2ನೇ ಹೆರಿಗೆಗಾಗಿ ಜು. 30ರಂದು ಕಡಬದ ಸಮುದಾಯ ಆಸ್ಪತ್ರೆಗೆ ಹೋಗಿದ್ದರು. 

ಆದರೆ ಹೆರಿಗೆ ಕಷ್ಟಕರವಾಗುವ ಸಾಧ್ಯತೆ ಇದೆ ಎಂದು ಅಲ್ಲಿನ ವೈದ್ಯರು ಮುಂಜಾಗ್ರತೆ ಕಾರಣ ಲೇಡಿಗೋಶನ್‌ ಆಸ್ಪತ್ರೆಗೆ ಕಳುಹಿಸಿ ಕೊಟ್ಟಿದ್ದರು. ಅದೇ ದಿನ ಸಿಸೇರಿಯನ್‌ ಮೂಲಕ ಹೆರಿಗೆ ನಡೆದು ವಸಂತಿ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದರು.

ಸಮಸ್ಯೆ ಇದ್ದರೂ ಡಿಸ್ಚಾರ್ಜ್
2.65 ಕೆ.ಜಿ. ತೂಕವಿದ್ದ ಮಗು ಆರಂಭದಲ್ಲಿ ಆರೋಗ್ಯವಾಗಿತ್ತು. ಆದರೆ ಆ ಬಳಿಕ ಸರಿಯಾಗಿ ಎದೆ ಹಾಲು ಉಣ್ಣು
ತ್ತಿರಲ್ಲಿ. ಈ ಬಗ್ಗೆ ವೈದ್ಯರಿಗೆ ತಿಳಿಸಿದ್ದೆವು. ಆದರೂ ಆ. 4ರಂದು ತಾಯಿ – ಮಗುವನ್ನು ಡಿಸ್ಚಾರ್ಜ್ ಮಾಡಲಾಯಿತು. ಮಗು ಆರೋಗ್ಯ ವಾಗಿಲ್ಲ ಎನ್ನುವ ಕಾರಣದಿಂದ ನಾವು ಆಸ್ಪತ್ರೆಯಲ್ಲೇ ಉಳಿದೆವು.  ಆದರೆ ರವಿವಾರ ಬೆಳಗ್ಗೆ ಮಗುವಿನ ಬೆಡ್‌ನ‌ಲ್ಲಿ ಬೇರೆ ರೋಗಿಯನ್ನು ಮಲಗಿಸಿದರು. ನಮ್ಮನ್ನು ಬಲವಂತ ದಿಂದ 108 ಆ್ಯಂಬುಲೆನ್ಸ್‌ನಲ್ಲಿ ಕಡಬಕ್ಕೆ ಕಳುಹಿಸಿದ್ದಾರೆ ಎಂದು ಪೋಷಕರು ಹೇಳಿದ್ದಾರೆ. ಕಡಬ ಸಮುದಾಯ ಆಸ್ಪತ್ರೆಯ ವೈದ್ಯಾಧಿಕಾರಿ ಡಾ| ಸುಚಿತ್ರಾ ರಾವ್‌ ಅವರು  ಸ್ಥಳಕ್ಕೆ ತೆರಳಿ ಮಾಹಿತಿ ಪಡೆದುಕೊಂಡಿದ್ದಾರೆ. 

ಮಗುವಿನ ಆರೋಗ್ಯ ಸರಿಯಿಲ್ಲ ಚಿಕಿತ್ಸೆ ನೀಡಿ ಎಂದು ವೈದ್ಯರಲ್ಲಿ ಅಂಗಲಾಚಿದರೂ ನಿಮ್ಮ ಮಗು ಆರೋಗ್ಯವಾಗಿದೆ, ಆಸ್ಪತ್ರೆಯಲ್ಲಿಯೇ ಉಳಿದುಕೊಳ್ಳಲು ಈ ರೀತಿ ನಾಟಕ ಮಾಡುತ್ತೀರಿ ಎಂದು ದಬಾಯಿಸಿ 108 ಆ್ಯಂಬುಲೆನ್ಸ್‌ನಲ್ಲಿ ಕಡಬಕ್ಕೆ ಕಳುಹಿಸಿದ್ದಾರೆ. ನಾವು ಕಡಬ ತಲುಪಿ ಅರ್ಧತಾಸು ಆಗುವಷ್ಟರಲ್ಲಿ ಮಗು ಮೃತಪಟ್ಟಿದೆ. ವೈದ್ಯರ ನಿರ್ಲಕ್ಷ್ಯವೇ ಇದಕ್ಕೆ ಕಾರಣ. ನಮಗೆ ನ್ಯಾಯ ಒದಗಿಸ‌ಬೇಕು.   
 – ವಸಂತಿ, ಮಗುವಿನ ಅಜ್ಜಿ

ನಾನು ಈ ಬಗ್ಗೆ ಲೇಡಿಗೋಷನ್‌ ಆಸ್ಪತ್ರೆ ಅಧೀಕ್ಷಕಿಯನ್ನು ಸಂಪರ್ಕಿಸಿದ್ದೇನೆ. ಅವರ ಪ್ರಕಾರ ಡಿಸ್ಚಾರ್ಜ್ ವೇಳೆ ಮಗು ಆರೋಗ್ಯವಾಗಿತ್ತು. ಸಾವಿನ ಕಾರಣ ಸ್ಪಷ್ಟವಾಗಬೇಕಾದರೆ ಪೊಲೀಸರಿಗೆ ದೂರು ನೀಡಿ ಮರಣೋತ್ತರ ಪರೀಕ್ಷೆ ನಡೆಸಬೇಕು ಎಂದು ಕುಟುಂಬದವರಿಗೆ ತಿಳಿಸಿದ್ದೇನೆ.
-ಡಾ| ರಾಮಕೃಷ್ಣ ರಾವ್‌, ಡಿಎಚ್‌ಒ

ವೈದ್ಯರ ಬೇಜವಾಬ್ದಾರಿಯಿಂದ  ಬಡಕುಟುಂಬ ಮಗುವನ್ನು ಕಳೆದುಕೊಂಡಿದೆ. ಈ ಅನ್ಯಾಯದ ವಿರುದ್ಧ ಕಾನೂನು ಹೋರಾಟ ಮಾಡಲಾಗುವುದು. ಸಂಬಂಧಪಟ್ಟ ಅಧಿಕಾರಿಗಳಿಗೆ ಹಾಗೂ ರಾಜ್ಯ ಆರೋಗ್ಯ ಸಚಿವರಿಗೂ ದೂರು ನೀಡಲಾಗುವುದು.    
ಗುರವಪ್ಪ  ಕಲ್ಲುಗುಡ್ಡೆ, ದಸಂಸ ಮುಖಂಡರು

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.