ಕರಾವಳಿಯಲ್ಲೂ  ಶೀಘ್ರ ಅಂಚೆ ಬ್ಯಾಂಕ್‌ ಕಾರ್ಯಾರಂಭ


Team Udayavani, Aug 7, 2018, 2:38 PM IST

post.jpg

ಮಂಗಳೂರು: ಅಂಚೆ ಕಚೇರಿಯಲ್ಲಿ ಬ್ಯಾಂಕಿಂಗ್‌ ಸೇವೆ ಸಿಗುವ “ಅಂಚೆ ಬ್ಯಾಂಕ್‌’ ಕರಾವಳಿಯಲ್ಲೂ ಆರಂಭವಾಗಲಿದೆ. ಮೊದಲ ಹಂತದಲ್ಲಿ ನಗರದ ಬಲ್ಮಠ ಹಾಗೂ ಉಡುಪಿ ಪ್ರಧಾನ ಅಂಚೆ ಕಚೇರಿಗಳು ಪ್ರಧಾನ ಶಾಖೆಗಳಾಗಿ  ಕಾರ್ಯ ನಿರ್ವಹಿಸಲಿವೆ. ಎರಡೂ ಕೇಂದ್ರಗಳಿಗೆ ಮ್ಯಾನೇಜರ್‌ ಸಹಿತಹಲವು ಹುದ್ದೆಗಳ ನೇಮಕವಾಗಿದೆ. ಪ್ರತ್ಯೇಕ ಕೊಠಡಿ ಜತೆಗೆ ಕಂಪ್ಯೂಟರ್‌ ಅಳವಡಿಸಲಾಗಿದೆ. ವರ್ಷಾಂತ್ಯದೊಳಗೆ ಎರಡೂ ಜಿಲ್ಲೆಯ ಒಟ್ಟು 803 ಅಂಚೆ ಕಚೇರಿಗಳಲ್ಲಿ ಬ್ಯಾಂಕಿಂಗ್‌ ಸೇವೆ ಲಭ್ಯವಾಗುವ ನಿರೀಕ್ಷೆಯಿದೆ. 

ಪ್ರಧಾನಿ ಮೋದಿ ಆ. 21ರಂದು “ಅಂಚೆ ಬ್ಯಾಂಕ್‌’ಗೆ ಚಾಲನೆ ನೀಡುವ ಸಾಧ್ಯತೆಯಿದೆ. ದೇಶದ ಪ್ರತೀ ಜಿಲ್ಲೆಯಲ್ಲಿ ಕನಿಷ್ಠ ಒಂದು ಐಪಿಪಿಬಿ ಶಾಖೆ ಆರಂಭವಾಗಲಿದೆ. ಜತೆಗೆ ತಲಾ ಐದರಂತೆ ಒಟ್ಟು 10 ಅಂಚೆ ಕೇಂದ್ರಗಳಲ್ಲಿಯೂ “ಅಂಚೆ ಬ್ಯಾಂಕ್‌’ ಅದೇ ದಿನ ಚಾಲನೆ ಪಡೆಯಲಿದೆ.  ಜಿಲ್ಲಾ ಕೇಂದ್ರ ಐಪಿಪಿಬಿ ಶಾಖೆ ಮುಂದೆ ಇತರ ಅಂಚೆ ಕಚೇರಿಗಳ ಜತೆಗೆ ಲಿಂಕ್‌ ಆಗಲಿದೆ. ಆ.21ರ ಬಳಿಕ ನಾಲ್ಕು ತಿಂಗಳವರೆಗೆ ಎರಡೂ ಜಿಲ್ಲೆಯ ಎಲ್ಲ ಅಂಚೆ ಕಚೇರಿಗಳಲ್ಲಿ ಬ್ಯಾಂಕಿಂಗ್‌ ಸೇವೆ ಒದಗಿಸಲು ಅಗತ್ಯ ತಾಂತ್ರಿಕ ಸಿದ್ಧತೆಗಳನ್ನು ಈ ಪ್ರಧಾನ ಐಪಿಪಿಬಿ ಶಾಖೆ ನಿರ್ವಹಿಸಲಿದೆ. ಇದಕ್ಕಾಗಿ ಸಿಬಂದಿಗೆ ತರಬೇತಿ ನೀಡಲಾಗಿದೆ. 

ಅಂಚೆ ಬ್ಯಾಂಕ್‌: ಲಾಭವೇನು ?
ಸಾಮಾನ್ಯ ಬ್ಯಾಂಕ್‌ಗಳಂತೆ ಅಂಚೆ ಬ್ಯಾಂಕ್‌ನಲ್ಲೂ ಒಬ್ಬ ಗ್ರಾಹಕ 1 ಲಕ್ಷ ರೂ. ವರೆಗೆ ಮಾತ್ರ ಠೇವಣಿ ಇಡಬಹುದು. ಸಾಲ ಹಾಗೂ ಕ್ರೆಡಿಟ್‌ ಕಾರ್ಡ್‌ ಸಿಗುವುದಿಲ್ಲ. ಆದರೆ ಚಾಲ್ತಿ ಖಾತೆ, ಉಳಿತಾಯ ಖಾತೆ ತೆರೆಯಲು ಅವಕಾಶವಿದೆ. ನೆಟ್‌ ಬ್ಯಾಂಕಿಂಗ್‌, ಮೊಬೈಲ್‌ ಬ್ಯಾಂಕಿಂಗ್‌, ಎಸ್‌ಎಸ್‌ ಬ್ಯಾಂಕಿಂಗ್‌ ದೊರೆಯಲಿದೆ. ಅಂಚೆ ಉಳಿತಾಯ ಖಾತೆಗಳು ಐಪಿಪಿಬಿ ಖಾತೆಯೊಂದಿಗೆ ವಿಲೀನವಾಗಲಿವೆ. ಆಗ ಗ್ರಾಮೀಣ ಜನರು ಮೊಬೈಲ್‌ ಆ್ಯಪ್‌ ಮೂಲಕ ಅಥವಾ ಅಂಚೆ ಕಚೇರಿಯಿಂದ ಯಾವುದೇ ಬ್ಯಾಂಕ್‌ ಖಾತೆಗೆ ಹಣ ವರ್ಗಾಯಿಸಬಹುದು. ಗ್ರಾಮೀಣ ಭಾಗದಲ್ಲಿ ಡಿಜಿಟಲ್‌ ಬ್ಯಾಂಕಿಂಗ್‌ ಪ್ರಗತಿಗೆ ಇದು ವೇಗೋತ್ಕರ್ಷ ನೀಡಬಲ್ಲುದು. ಐಪಿಪಿಬಿ ಆ್ಯಪ್‌ ಕೂಡ ಇರಲಿದೆ. ಅದರ ಮೂಲಕ ಮೊಬೈಲ್‌ನಿಂದಲೇ ರಿಚಾರ್ಜ್‌, ವಿದ್ಯುತ್ಛಕ್ತಿ ಬಿಲ್‌, ಡಿಟಿಎಚ್‌ ಪಾವತಿ ಇತ್ಯಾದಿ ಹಲವು ಸೌಲಭ್ಯಗಳು ಸಿಗುತ್ತವೆ. ನರೇಗಾ ಹಣ, ಸಬ್ಸಿಡಿ, ಪಿಂಚಣಿ ಪಾವತಿ ಇತ್ಯಾದಿಯೂ ಈ ಮೂಲಕವೇ ಕಾರ್ಯಾಚರಿಸಲಿವೆ.

ದ.ಕ. 540; ಉಡುಪಿ 263 
ಉಭಯ ಜಿಲ್ಲೆಯಲ್ಲಿ ಮಂಗಳೂರು, ಪುತ್ತೂರು ಹಾಗೂ ಉಡುಪಿ ವಿಭಾಗಗಳಿವೆ. ಈ ಪೈಕಿ ಮಂಗಳೂರು ಹಾಗೂ ಪುತ್ತೂರು ವಿಭಾಗದಲ್ಲಿ ಮುಖ್ಯ ಅಂಚೆ ಕಚೇರಿ, ಉಪ ವಿಭಾಗದ ಅಂಚೆ ಕಚೇರಿ ಹಾಗೂ ಗ್ರಾಮೀಣ ಅಂಚೆ ಕಚೇರಿ ಸೇರಿ ಒಟ್ಟು 540 ಹಾಗೂ ಉಡುಪಿಯಲ್ಲಿ 263 ಕಚೇರಿಗಳು ಸೇರಿ ಒಟ್ಟು 803 ಅಂಚೆ ಸೇವೆ ಲಭ್ಯ. 

ಆ. 21: 10 ಕಡೆ ಚಾಲನೆ
ಮಂಗಳೂರಿನ ಬಲ್ಮಠದ ಅಂಚೆ ಭವನ ಹಾಗೂ ಉಡುಪಿ ಪ್ರಧಾನ ಅಂಚೆ ಕಚೇರಿಯ ಜತೆಗೆ ಮಂಗಳೂರು ಸ್ಟೇಟ್‌ಬ್ಯಾಂಕ್‌ ಪ್ರಧಾನ ಕಚೇರಿ, ಬಲ್ಮಠ, ಕಾಟಿಪಳ್ಳದ ಉಪವಿಭಾಗ ಹಾಗೂ ಕುತ್ತೆತ್ತೂರು ಹಾಗೂ ಸೂರಿಂಜೆ ಶಾಖಾ ಕಚೇರಿಯಲ್ಲಿಯೂ ಮೊದಲ ಹಂತದಲ್ಲಿ ಜಾರಿಗೆ ಬರಲಿದೆ. ಉಡುಪಿಯಲ್ಲಿ ಪ್ರಧಾನ ಅಂಚೆ ಕಚೇರಿ, ಬನ್ನಂಜೆ, ಉಚ್ಚಿಲದ ಉಪ ವಿಭಾಗ, ಬೆಳಪು ಹಾಗೂ ಪಣಿಯೂರು ಶಾಖಾ ಕಚೇರಿಯಲ್ಲಿ ಸಿದ್ಧತೆ ನಡೆಸಲಾಗಿದೆ ಎಂದು ಅಂಚೆ ಇಲಾಖೆಯ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.