ಕರಾವಳಿಯಲ್ಲೂ  ಶೀಘ್ರ ಅಂಚೆ ಬ್ಯಾಂಕ್‌ ಕಾರ್ಯಾರಂಭ


Team Udayavani, Aug 7, 2018, 2:38 PM IST

post.jpg

ಮಂಗಳೂರು: ಅಂಚೆ ಕಚೇರಿಯಲ್ಲಿ ಬ್ಯಾಂಕಿಂಗ್‌ ಸೇವೆ ಸಿಗುವ “ಅಂಚೆ ಬ್ಯಾಂಕ್‌’ ಕರಾವಳಿಯಲ್ಲೂ ಆರಂಭವಾಗಲಿದೆ. ಮೊದಲ ಹಂತದಲ್ಲಿ ನಗರದ ಬಲ್ಮಠ ಹಾಗೂ ಉಡುಪಿ ಪ್ರಧಾನ ಅಂಚೆ ಕಚೇರಿಗಳು ಪ್ರಧಾನ ಶಾಖೆಗಳಾಗಿ  ಕಾರ್ಯ ನಿರ್ವಹಿಸಲಿವೆ. ಎರಡೂ ಕೇಂದ್ರಗಳಿಗೆ ಮ್ಯಾನೇಜರ್‌ ಸಹಿತಹಲವು ಹುದ್ದೆಗಳ ನೇಮಕವಾಗಿದೆ. ಪ್ರತ್ಯೇಕ ಕೊಠಡಿ ಜತೆಗೆ ಕಂಪ್ಯೂಟರ್‌ ಅಳವಡಿಸಲಾಗಿದೆ. ವರ್ಷಾಂತ್ಯದೊಳಗೆ ಎರಡೂ ಜಿಲ್ಲೆಯ ಒಟ್ಟು 803 ಅಂಚೆ ಕಚೇರಿಗಳಲ್ಲಿ ಬ್ಯಾಂಕಿಂಗ್‌ ಸೇವೆ ಲಭ್ಯವಾಗುವ ನಿರೀಕ್ಷೆಯಿದೆ. 

ಪ್ರಧಾನಿ ಮೋದಿ ಆ. 21ರಂದು “ಅಂಚೆ ಬ್ಯಾಂಕ್‌’ಗೆ ಚಾಲನೆ ನೀಡುವ ಸಾಧ್ಯತೆಯಿದೆ. ದೇಶದ ಪ್ರತೀ ಜಿಲ್ಲೆಯಲ್ಲಿ ಕನಿಷ್ಠ ಒಂದು ಐಪಿಪಿಬಿ ಶಾಖೆ ಆರಂಭವಾಗಲಿದೆ. ಜತೆಗೆ ತಲಾ ಐದರಂತೆ ಒಟ್ಟು 10 ಅಂಚೆ ಕೇಂದ್ರಗಳಲ್ಲಿಯೂ “ಅಂಚೆ ಬ್ಯಾಂಕ್‌’ ಅದೇ ದಿನ ಚಾಲನೆ ಪಡೆಯಲಿದೆ.  ಜಿಲ್ಲಾ ಕೇಂದ್ರ ಐಪಿಪಿಬಿ ಶಾಖೆ ಮುಂದೆ ಇತರ ಅಂಚೆ ಕಚೇರಿಗಳ ಜತೆಗೆ ಲಿಂಕ್‌ ಆಗಲಿದೆ. ಆ.21ರ ಬಳಿಕ ನಾಲ್ಕು ತಿಂಗಳವರೆಗೆ ಎರಡೂ ಜಿಲ್ಲೆಯ ಎಲ್ಲ ಅಂಚೆ ಕಚೇರಿಗಳಲ್ಲಿ ಬ್ಯಾಂಕಿಂಗ್‌ ಸೇವೆ ಒದಗಿಸಲು ಅಗತ್ಯ ತಾಂತ್ರಿಕ ಸಿದ್ಧತೆಗಳನ್ನು ಈ ಪ್ರಧಾನ ಐಪಿಪಿಬಿ ಶಾಖೆ ನಿರ್ವಹಿಸಲಿದೆ. ಇದಕ್ಕಾಗಿ ಸಿಬಂದಿಗೆ ತರಬೇತಿ ನೀಡಲಾಗಿದೆ. 

ಅಂಚೆ ಬ್ಯಾಂಕ್‌: ಲಾಭವೇನು ?
ಸಾಮಾನ್ಯ ಬ್ಯಾಂಕ್‌ಗಳಂತೆ ಅಂಚೆ ಬ್ಯಾಂಕ್‌ನಲ್ಲೂ ಒಬ್ಬ ಗ್ರಾಹಕ 1 ಲಕ್ಷ ರೂ. ವರೆಗೆ ಮಾತ್ರ ಠೇವಣಿ ಇಡಬಹುದು. ಸಾಲ ಹಾಗೂ ಕ್ರೆಡಿಟ್‌ ಕಾರ್ಡ್‌ ಸಿಗುವುದಿಲ್ಲ. ಆದರೆ ಚಾಲ್ತಿ ಖಾತೆ, ಉಳಿತಾಯ ಖಾತೆ ತೆರೆಯಲು ಅವಕಾಶವಿದೆ. ನೆಟ್‌ ಬ್ಯಾಂಕಿಂಗ್‌, ಮೊಬೈಲ್‌ ಬ್ಯಾಂಕಿಂಗ್‌, ಎಸ್‌ಎಸ್‌ ಬ್ಯಾಂಕಿಂಗ್‌ ದೊರೆಯಲಿದೆ. ಅಂಚೆ ಉಳಿತಾಯ ಖಾತೆಗಳು ಐಪಿಪಿಬಿ ಖಾತೆಯೊಂದಿಗೆ ವಿಲೀನವಾಗಲಿವೆ. ಆಗ ಗ್ರಾಮೀಣ ಜನರು ಮೊಬೈಲ್‌ ಆ್ಯಪ್‌ ಮೂಲಕ ಅಥವಾ ಅಂಚೆ ಕಚೇರಿಯಿಂದ ಯಾವುದೇ ಬ್ಯಾಂಕ್‌ ಖಾತೆಗೆ ಹಣ ವರ್ಗಾಯಿಸಬಹುದು. ಗ್ರಾಮೀಣ ಭಾಗದಲ್ಲಿ ಡಿಜಿಟಲ್‌ ಬ್ಯಾಂಕಿಂಗ್‌ ಪ್ರಗತಿಗೆ ಇದು ವೇಗೋತ್ಕರ್ಷ ನೀಡಬಲ್ಲುದು. ಐಪಿಪಿಬಿ ಆ್ಯಪ್‌ ಕೂಡ ಇರಲಿದೆ. ಅದರ ಮೂಲಕ ಮೊಬೈಲ್‌ನಿಂದಲೇ ರಿಚಾರ್ಜ್‌, ವಿದ್ಯುತ್ಛಕ್ತಿ ಬಿಲ್‌, ಡಿಟಿಎಚ್‌ ಪಾವತಿ ಇತ್ಯಾದಿ ಹಲವು ಸೌಲಭ್ಯಗಳು ಸಿಗುತ್ತವೆ. ನರೇಗಾ ಹಣ, ಸಬ್ಸಿಡಿ, ಪಿಂಚಣಿ ಪಾವತಿ ಇತ್ಯಾದಿಯೂ ಈ ಮೂಲಕವೇ ಕಾರ್ಯಾಚರಿಸಲಿವೆ.

ದ.ಕ. 540; ಉಡುಪಿ 263 
ಉಭಯ ಜಿಲ್ಲೆಯಲ್ಲಿ ಮಂಗಳೂರು, ಪುತ್ತೂರು ಹಾಗೂ ಉಡುಪಿ ವಿಭಾಗಗಳಿವೆ. ಈ ಪೈಕಿ ಮಂಗಳೂರು ಹಾಗೂ ಪುತ್ತೂರು ವಿಭಾಗದಲ್ಲಿ ಮುಖ್ಯ ಅಂಚೆ ಕಚೇರಿ, ಉಪ ವಿಭಾಗದ ಅಂಚೆ ಕಚೇರಿ ಹಾಗೂ ಗ್ರಾಮೀಣ ಅಂಚೆ ಕಚೇರಿ ಸೇರಿ ಒಟ್ಟು 540 ಹಾಗೂ ಉಡುಪಿಯಲ್ಲಿ 263 ಕಚೇರಿಗಳು ಸೇರಿ ಒಟ್ಟು 803 ಅಂಚೆ ಸೇವೆ ಲಭ್ಯ. 

ಆ. 21: 10 ಕಡೆ ಚಾಲನೆ
ಮಂಗಳೂರಿನ ಬಲ್ಮಠದ ಅಂಚೆ ಭವನ ಹಾಗೂ ಉಡುಪಿ ಪ್ರಧಾನ ಅಂಚೆ ಕಚೇರಿಯ ಜತೆಗೆ ಮಂಗಳೂರು ಸ್ಟೇಟ್‌ಬ್ಯಾಂಕ್‌ ಪ್ರಧಾನ ಕಚೇರಿ, ಬಲ್ಮಠ, ಕಾಟಿಪಳ್ಳದ ಉಪವಿಭಾಗ ಹಾಗೂ ಕುತ್ತೆತ್ತೂರು ಹಾಗೂ ಸೂರಿಂಜೆ ಶಾಖಾ ಕಚೇರಿಯಲ್ಲಿಯೂ ಮೊದಲ ಹಂತದಲ್ಲಿ ಜಾರಿಗೆ ಬರಲಿದೆ. ಉಡುಪಿಯಲ್ಲಿ ಪ್ರಧಾನ ಅಂಚೆ ಕಚೇರಿ, ಬನ್ನಂಜೆ, ಉಚ್ಚಿಲದ ಉಪ ವಿಭಾಗ, ಬೆಳಪು ಹಾಗೂ ಪಣಿಯೂರು ಶಾಖಾ ಕಚೇರಿಯಲ್ಲಿ ಸಿದ್ಧತೆ ನಡೆಸಲಾಗಿದೆ ಎಂದು ಅಂಚೆ ಇಲಾಖೆಯ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.