ಕಡಿಯಬೇಕಾಗಿದ್ದ ಮರ ಬುಡ ಸಮೇತ ಸ್ಥಳಾಂತರ
Team Udayavani, Aug 7, 2018, 2:44 PM IST
ಮಂಗಳೂರು: ನಗರದ ಲೇಡಿಹಿಲ್ನ ರಸ್ತೆ ತಿರುವಿನಲ್ಲಿದ್ದ ಮರವೊಂದನ್ನು ಬುಡಸಮೇತ ಬೇರೆಡೆಗೆ ಸ್ಥಳಾಂತರಗೊಳಿಸಿ ಪರಿಸರ ಪ್ರೀತಿ ಮೆರೆಯಲಾಗಿದೆ. ಲೇಡಿಹಿಲ್ ಬಳಿ ಚಿಲಿಂಬಿಗೆ ತಿರುಗುವ ರಸ್ತೆಯಲ್ಲಿ ಸಂಚಾರಕ್ಕೆ ಅಡ್ಡಿಯಾಗುತ್ತದೆ ಎಂಬ ಕಾರಣದಿಂದ “ಪೆಲ್ಟೋಫೋರಂ’ ಜಾತಿಗೆ ಸೇರಿದ ಮರವನ್ನು ಕಡಿಯಲು ಮಹಾನಗರ ಪಾಲಿಕೆ ನಿರ್ಧರಿಸಿತ್ತು.
ಆದರೆ ಇದಕ್ಕೆ ಸ್ಥಳೀಯರಿಂದ ಹಾಗೂ ಎನ್ಇಸಿಎಫ್ ಪರಿಸರ ಪರ ಸಂಘಟನೆ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯು ಮರ ಕಡಿಯುವ ನಿರ್ಧಾರವನ್ನು ಕೈಬಿಟ್ಟು ಅದನ್ನು ಬುಡಸಮೇತ ಜೀವಂತವಾಗಿ ಇನ್ನೊಂದಡೆಗೆ ಸ್ಥಳಾಂತರಿಸಲು ನಿರ್ಧರಿಸಿತು.
ಸೋಮವಾರ ಪಾಲಿಕೆ ಸಿಬಂದಿ ಕಾರ್ಯಾಚರಣೆ ನಡೆಸಿ ಕ್ರೇನ್ ಮೂಲಕ ಮರವನ್ನು ಪಕ್ಕದ ಖಾಲಿ ಜಾಗಕ್ಕೆ ಸ್ಥಳಾಂತರಿಸಿ ನೆಡಲಾಯಿತು. ಪಾಲಿಕೆಯ ಅಧಿಕಾರಿಗಳು, ಎನ್ಇಸಿಎಫ್ನ ಕಾರ್ಯಕರ್ತರಾದ ಶಶಿಧರ ಶೆಟ್ಟಿ , ಜೀತ್ ಮಿಲನ್, ರೋಹನ್ ಸಿರಿ ಮತ್ತಿತರರು ಈ ವೇಳೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್