ಕನ್ಯಾಕುಮಾರಿ ಟು ಕಾಶ್ಮೀರ ವಾಕಥಾನ್‌


Team Udayavani, Aug 9, 2018, 3:55 AM IST

walkathon-8-8.jpg

ಮಂಗಳೂರು: ರಸ್ತೆ ಸುರಕ್ಷತಾ ನಿಯಮ ಪಾಲನೆಯ ಜಾಗೃತಿ ಜತೆಗೆ ದೇಶಾದ್ಯಂತ ಹದಗೆಟ್ಟ ರಸ್ತೆಗಳ ಬಗ್ಗೆ ಕೇಂದ್ರ ಸರಕಾರಕ್ಕೆ ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ಕೇರಳ ಪಾಲಕ್ಕಾಡ್‌ ಮೂಲದ ವ್ಯಕ್ತಿಯೊಬ್ಬರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಡಿಗೆ ಹಮ್ಮಿಕೊಂಡಿದ್ದಾರೆ. 60ಕ್ಕೂ ಹೆಚ್ಚಿನ ದಿನ ದೇಶದ 20 ನಗರಗಳಲ್ಲಿ ನಡೆದಾಡುವ ಮೂಲಕ ಒಟ್ಟು 3,600 ಕಿ.ಮೀ. ದೂರವನ್ನು ನಡೆದೇ ಕ್ರಮಿಸಲಿದ್ದಾರೆ. ಹೀಗೆ ನಡೆಯುತ್ತ ಹದಗೆಟ್ಟ ರಸ್ತೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿ, ವೀಡಿಯೋ ಮತ್ತು ಫೋಟೋ ತೆಗೆದು ಕೇಂದ್ರ ಸರಕಾರದಡಿ ಬರುವ ಸಂಬಂಧಪಟ್ಟ ಇಲಾಖೆಗೆ ನೀಡಲಿದ್ದಾರೆ. ಸುಗಮ ಸಂಚಾರಕ್ಕೆ ಪೂರಕವಾಗಿ ಹೇಗೆ ರಸ್ತೆ ವಿನ್ಯಾಸಗಳನ್ನು ಬದಲಾಯಿಸಬಹುದು ಎಂಬ ಸಲಹೆಯನ್ನೂ ನೀಡಲಿದ್ದಾರೆ.

ಮೆಕ್ಯಾನಿಕಲ್‌ ಎಂಜಿನಿಯರ್‌
ಪಾಲಕ್ಕಾಡ್‌ನ‌ 41 ವರ್ಷದ ಸುಬ್ರಹ್ಮಣ್ಯನ್‌ ನಾರಾಯಣನ್‌ ಕಾಶ್ಮೀರದಿಂದ ಕನ್ಯಾಕುಮಾರಿಗೆ ವಾಕಥಾನ್‌ಗೆ ಹೊರಟ ಯುವಕ. ಜು.28ರಂದು ಕನ್ಯಾಕುಮಾರಿಯಿಂದ ನಡಿಗೆ ಆರಂಭಿಸಿದ್ದು, ಅ. 3ರಂದು ಕಾಶ್ಮೀರ ತಲುಪುವ ಗುರಿ ಹೊಂದಿದ್ದಾರೆ. ಮೆಕ್ಯಾನಿಕಲ್‌ ಎಂಜಿನಿಯರ್‌ ಆಗಿರುವ ಅವರು, ಹೆಲ್ಲಾ ಇಂಡಿಯಾ ಸಂಸ್ಥೆಯ ಉದ್ಯೋಗಿ. ರಸ್ತೆ ಸುರಕ್ಷತೆಯ ಉದ್ದೇಶದಿಂದ ಹೊರಟ ಸುಬ್ರಹ್ಮಣ್ಯನ್‌ ಅವರಿಗೆ ತಾವು ಕೆಲಸ ಮಾಡುತ್ತಿರುವ ಸಂಸ್ಥೆ ಪ್ರೋತ್ಸಾಹಿಸಿ ಗುರಿ ಸಾಧನೆಗಾಗಿ ಕಳುಹಿಸಿಕೊಟ್ಟಿದೆ.


400 ಮನೆಗಳಲ್ಲಿ ನಿತ್ಯ ಅಪಘಾತ ಸಾವು

ರಸ್ತೆ ಅವ್ಯವಸ್ಥೆ, ರಸ್ತೆ ನಿಯಮಗಳನ್ನು ಪಾಲಿಸದಿರುವುದು, ಹೆಲ್ಮೆಟ್‌ ಹಾಕದೇ ವಾಹನ ಚಲಾಯಿಸುವುದು ಮುಂತಾದ ಕಾರಣಗಳಿಂದ ದೇಶದಲ್ಲಿ ಪ್ರತಿವರ್ಷ ಸರಾಸರಿ ಐದು ಲಕ್ಷ ಅಪಘಾತಗಳು ಸಂಭವಿಸುತ್ತಿವೆ. ಹೀಗೆ ಉಂಟಾದ ಅಪಘಾತಗಳಲ್ಲಿ ಕಡಿಮೆ ಎಂದರೂ 1.5 ಲಕ್ಷದಷ್ಟು ಮಂದಿ ಸಾವನ್ನಪ್ಪುತ್ತಿದ್ದಾರೆ. ಸರಾಸರಿ ತೆಗೆದರೆ ರಸ್ತೆ ಅಪಘಾತಗಳಿಂದಾಗಿ ಮರಣವಪ್ಪುತ್ತಿರುವವರ ಸಂಖ್ಯೆ ದಿನಕ್ಕೆ 400! ಅಂದರೆ ದೇಶದ 400 ಮನೆಗಳಲ್ಲಿ ಅಪಘಾತ ಮರಣದ ಸೂತಕದ ಛಾಯೆ ಇರುತ್ತದೆ. ಈ ಸಂಖ್ಯೆಗಳನ್ನು ಗಮನಿಸಿದಾಗ ವೇದನೆಯಾಯಿತು. ರಸ್ತೆ ನಿಯಮ ಪಾಲನೆಯ ಜಾಗೃತಿ ಮೂಡಿಸುವ ಉದ್ದೇಶದಿಂದ ನಡಿಗೆಯ ನಿರ್ಧಾರ ಕೈಗೊಂಡೆ ಎನ್ನುತ್ತಾರೆ.

ಪ್ರತಿದಿನ ಸುಮಾರು 70 ಕಿ.ಮೀ. ಕ್ರಮಿಸುವ ಅವರು, ಬೆಳಗ್ಗೆ 3.30ಕ್ಕೆ ತಮ್ಮ ನಡಿಗೆ ಆರಂಭಿಸುತ್ತಾರೆ. ಸಂಜೆ 6 ಗಂಟೆಗೆ ಕೊನೆಗೊಳಿಸಿ ಯಾವುದಾದರೂ ಹೊಟೇಲ್‌ನಲ್ಲಿ ತಂಗುತ್ತಾರೆ. ಆ. 8ರಂದು ಮಂಗಳೂರಿಗೆ ಆಗಮಿಸಿದ್ದ ಅವರು, ಬಳಿಕ ಸುರತ್ಕಲ್‌ಗೆ ತೆರಳಿದ್ದಾರೆ. ಆ. 9ರಂದು ಉಡುಪಿಯತ್ತ ತನ್ನ ನಡಿಗೆ ಮುಂದುವರಿಸಲಿದ್ದಾರೆ.

ಒಂದೇ ತಿಂಗಳಲ್ಲಿ 35 ಕೆಜಿ ತೂಕ ಇಳಿಕೆ!
ವಿಶೇಷವೆಂದರೆ ಸುಬ್ರಹ್ಮಣಿಯನ್‌ ಅವರು ಕಳೆದ ಒಂದೇ ತಿಂಗಳಲ್ಲಿ 35 ಕೆಜಿ ತೂಕ ಕಳೆದುಕೊಂಡಿದ್ದು, ಪ್ರಸ್ತುತ 70 ಕೆಜಿ ಇದ್ದಾರೆ. ಈವರೆಗೆ ನಡೆದ 12 ದಿನಗಳಲ್ಲಿ ಅತಿ ಹೆಚ್ಚು ತೂಕ ಕಳೆದುಕೊಂಡಿದ್ದು, ಆರೋಗ್ಯಕ್ಕೂ ಇದರಿಂದ ಉತ್ತಮ ಪರಿಣಾಮವಿದೆ ಎನ್ನುತ್ತಾರೆ ಅವರು. ಈ ವಾಕಥಾನ್‌ಗೆ ಮುನ್ನವೂ ನಡೆಯುವುದನ್ನು ರೂಢಿಸಿಕೊಂಡಿದ್ದರಿಂದ ಇದು ಸಾಧ್ಯವಾಯಿತು ಎನ್ನುತ್ತಾರೆ ಅವರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.