ಕಂದಾಯ ಸಚಿವರು  ತತ್‌ಕ್ಷಣ ಸುತ್ತೋಲೆ ಹಿಂದೆಗೆದುಕೊಳ್ಳಲಿ


Team Udayavani, Aug 10, 2018, 11:15 AM IST

kota.jpg

ಮಂಗಳೂರು: ಸರಕಾರಿ ಜಾಗದಲ್ಲಿ ಮನೆ ನಿರ್ಮಿಸಿಕೊಂಡು ವಾಸಿಸುತ್ತಿರುವ ಬಡವರು ಸಲ್ಲಿಸಿರುವ ಅರ್ಜಿಗಳು ಕುಮ್ಕಿ, ಗೋಮಾಳ, ಡೀಮ್ಡ್ ಅರಣ್ಯ, ಸಿಆರ್‌ ಝಡ್‌ ಪ್ರದೇಶ ವ್ಯಾಪ್ತಿಗೆ ಸಂಬಂಧ ಪಟ್ಟಿದ್ದರೆ ಅವುಗಳನ್ನು ತಿರಸ್ಕರಿಸುವಂತೆ ಕಂದಾಯ ಸಚಿವರು ಹೊರಡಿಸಿರುವ ಸುತ್ತೋಲೆಯನ್ನು ತತ್‌ಕ್ಷಣ ಹಿಂದೆಗೆದುಕೊಳ್ಳಬೇಕು ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಆಗ್ರ ಹಿಸಿದ್ದಾರೆ. ಪೂರಕವಾಗಿ ಸ್ಪಂದಿಸದ್ದರೆ ಬಿಜೆಪಿ ರಾಜ್ಯವ್ಯಾಪಿ ಹೋರಾಟ ಆರಂಭಿಸಲಿದೆ ಎಂದರು.
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗುರುವಾರ ಪತ್ರಿಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಂದಾಯ ಸಚಿವ ಆರ್‌.ವಿ. ದೇಶಪಾಂಡೆ ಅವರು ಅರ್ಜಿಗಳನ್ನು ತಿರಸ್ಕರಿಸುವಂತೆ ಸುತ್ತೋಲೆ ಹೊರಡಿಸುವ ಮೂಲಕ ಬಡವರ ವಿರೋಧಿ ನೀತಿಯನ್ನು ಅನುಸರಿಸುತ್ತಿದ್ದಾರೆ ಎಂದು ಟೀಕಿಸಿದರು.

ಡೀಮ್ಡ್ ಅರಣ್ಯದಿಂದ ಹೊರಗಿರುವ ಪ್ರದೇಶಗಳ ಬಗ್ಗೆ ಜಿಲ್ಲಾಧಿಕಾರಿಗಳು ಸರಕಾರಕ್ಕೆ ವರದಿ ಸಲ್ಲಿಸಿದ್ದರೂ ಈವರೆಗೆ ಇದನ್ನು ಅನುಮೋದಿಸಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 34,850 ಹೆಕ್ಟೇರ್‌, ಉಡುಪಿಯಲ್ಲಿ 34,000 ಹೆಕ್ಟೇರ್‌, ಶಿವಮೊಗ್ಗದಲ್ಲಿ 1 ಲಕ್ಷ ಹೆಕ್ಟೇರ್‌ ಪ್ರದೇಶ ಡೀಮ್ಡ್ ಅರಣ್ಯ ಗುಣಲಕ್ಷಣಗಳನ್ನು ಹೊಂದಿಲ್ಲ ಎಂದು ಆಯಾಯ ಜಿಲ್ಲೆಗಳ ಜಿಲ್ಲಾಧಿಕಾರಿಗಳು ವರದಿ ಸಲ್ಲಿಸಿದ್ದರು. ಆದರೆ ಸರಕಾರ ಇದರ ಬಗ್ಗೆ ಪೂರಕ ಕ್ರಮಗಳನ್ನು ಕೈಗೊಳ್ಳಲು ಮೀನಮೇಷ ಎಣಿಸುತ್ತಿರುವುದರಿಂದ ಈ ಪ್ರದೇಶದಲ್ಲಿ ವಾಸಿಸುತ್ತಿರುವ ಲಕ್ಷಾಂತರ ಮಂದಿ ಅತಂತ್ರ ಸ್ಥಿತಿಯನ್ನು ಎದುರಿಸುತ್ತಿದ್ದಾರೆ ಎಂದರು.
ಕೇಂದ್ರ ಸರಕಾರದ ನಗರ ವಸತಿ ಯೋಜನೆ ಅನುಷ್ಠಾನದಲ್ಲೂ ರಾಜ್ಯ ಸರಕಾರ ನಿರ್ಲಕ್ಷ  ವಹಿಸಿದೆ. ಮಂಗಳೂರು ನಗರದಲ್ಲಿ 2016-17 ರಲ್ಲಿ 1,285 ಗುರಿಯಲ್ಲಿ ಇದರಲ್ಲಿ ಕೇವಲ 273 ಮನೆಗಳನ್ನು ಮಂಜೂರು ಮಾಡಿದ್ದು 173 ಮನೆಗಳು ಮಾತ್ರ ಪೂರ್ಣಗೊಂಡಿವೆ. 2017-18ನೇ ಸಾಲಿನಲ್ಲಿ 1,407 ಗುರಿಯಲ್ಲಿ 573 ಮನೆಗಳನ್ನು ಮಾತ್ರ ಮಂಜೂರು ಮಾಡಿದೆ ಎಂದವರು ವಿವರಿಸಿದರು. 

ಸ್ಮಾರ್ಟ್‌ಸಿಟಿ ನಿರ್ಲಕ್ಷ್ಯ 
ರಾಜ್ಯದಲ್ಲಿ ಮಂಗಳೂರು ಸಹಿತ 7 ನಗರಗಳಿಗೆ ಕೇಂದ್ರ ಸರ ಕಾರದ ಸ್ಮಾರ್ಟ್‌ಸಿಟಿ ಯೋಜನೆ ಮಂಜೂ ರಾಗಿದ್ದು ಈವರೆಗೆ ಇದರಲ್ಲಿ ಹೇಳಿಕೊಳ್ಳುವಂತಹ ಪ್ರಗತಿ ಆಗಿಲ್ಲ. ಮಂಗಳೂರು ನಗರಕ್ಕೆ ಕೇಂದ್ರ ಹಾಗೂ ರಾಜ್ಯ ಸರಕಾರದ ಪಾಲು 220 ಕೋ.ರೂ. ಬಿಡುಗಡೆಯಾಗಿದ್ದರೂ ಇದರಲ್ಲಿ ಈವರೆಗೆ ಯಾವುದೇ ಯೋಜನೆಗಳಿಗೆ ಟೆಂಡರ್‌ ಆಗಿಲ್ಲ. ಸ್ಮಾರ್ಟ್‌ಸಿಟಿ ಅನುಷ್ಠಾನಕ್ಕೆ ಪೂರ್ಣ ಕಾಲಿಕ ವ್ಯವಸ್ಥಾಪಕ ನಿರ್ದೇಶಕರ ನೇಮಕವಾಗಿಲ್ಲ ಎಂದು ಹೇಳಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.