ಮಂಗಳೂರು – ಕುವೈಟ್‌ ಎಐ ವಿಮಾನ ವೇಳಾಪಟ್ಟಿ ಬದಲು


Team Udayavani, Aug 12, 2018, 10:05 AM IST

air-india-express.jpg

ಮಂಗಳೂರು: ಮಂಗಳೂರು-ಕುವೈಟ್‌-ಮಂಗಳೂರು ಮಧ್ಯೆ ಸಂಚರಿಸುವ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನದ ವೇಳಾಪಟ್ಟಿ ಬದಲಾವಣೆ ಕರಾವಳಿ ಜಿಲ್ಲೆಗಳ ಪ್ರಯಾಣಿಕರಿಗೆ ಕಹಿ ಸುದ್ದಿಯಾಗಿ ಪರಿಣಮಿಸಿದೆ. ತುಳುಕೂಟ ಕುವೈಟ್‌, ಬಂಟರ ಸಂಘ ಕುವೈಟ್‌, ಮುಸ್ಲಿಂ ಅಸೋಸಿಯೇಶನ್‌, ಕರಾವಳಿಯ ವಿವಿಧ ಸಂಘ-ಸಂಸ್ಥೆಗಳು ಈ ಸಂಬಂಧ ಪದೇ ಪದೇ ಮನವಿ ಸಲ್ಲಿಸಿದರೂ ಕೇಂದ್ರ ನಾಗರಿಕ ವಿಮಾನ ಇಲಾಖೆ ಸ್ಪಂದಿಸದಿರುವುದು ಕರಾವಳಿಗರ ಅಸಮಾಧಾನಕ್ಕೆ ಕಾರಣ.

ಸಮಯದ್ದೇ ಸಮಸ್ಯೆ
ಮಂಗಳೂರು- ಕುವೈಟ್‌- ಮಂಗಳೂರು ನಡುವೆ ವಾರಕ್ಕೆ ಮೂರು ಬಾರಿ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ಸಂಚರಿಸುತ್ತದೆ. ಈ ಮೊದಲು ಮಂಗಳವಾರ, ಗುರುವಾರ, ಶನಿವಾರ ಮಂಗಳೂರಿನಿಂದ ರಾತ್ರಿ 8.45ಕ್ಕೆ ಹೊರಟು 11.45ಕ್ಕೆ ಕುವೈಟ್‌ ತಲುಪುತ್ತಿತ್ತು; ತಡರಾತ್ರಿ 12.30ಕ್ಕೆ ಅಲ್ಲಿಂದ ಹೊರಟು ಬೆಳಗ್ಗೆ 7.30ಕ್ಕೆ ಮಂಗಳೂರು ತಲುಪುತ್ತಿತ್ತು. ಆದರೆ ಈಗ ಬೆಳಗ್ಗೆ 7ಕ್ಕೆ ಮಂಗಳೂರಿನಿಂದ ಹೊರಟು ಬೆಳಗ್ಗೆ 11.15 ಕುವೈಟ್‌ಗೆ; ಕುವೈಟ್‌ನಿಂದ ಅಪರಾಹ್ನ 12.15ಕ್ಕೆ ಮಂಗಳೂರಿನತ್ತ ಹೊರಡುತ್ತಿದೆ. ಗಲ್ಫ್ ದೇಶಗಳಲ್ಲಿ ಶುಕ್ರವಾರ ಸಾರ್ವತ್ರಿಕ ರಜಾ. ಅಲ್ಲಿ ಉದ್ಯೋಗದಲ್ಲಿರುವ ಕರಾವಳಿಗರು ಈಗ ಗುರುವಾರ ರಾತ್ರಿ ಬದಲು ಶುಕ್ರವಾರ ಮಧ್ಯಾಹ್ನ
ಹೊರಡಬೇಕಿದೆ. ವಾರದ ಉಳಿದೆರಡು ದಿನ ಗುರುವಾರ- ಶುಕ್ರವಾರದಷ್ಟು ಅನುಕೂಲಕರವಲ್ಲ ಎಂಬುದು ಕರಾವಳಿಗರ ಅಭಿಪ್ರಾಯ. ಈಗಿನ ನಿಯಮಾವಳಿ ಪ್ರಕಾರ ಅಂತಾರಾಷ್ಟ್ರೀಯ ಪ್ರಯಾಣಿಕರು ಮೂರು ತಾಸುಗಳಷ್ಟು ಮುಂಚಿತವಾಗಿ ವಿಮಾನ ನಿಲ್ದಾಣದಲ್ಲಿರಬೇಕು. ನಿಲ್ದಾಣಕ್ಕೆ ಪ್ರಯಾಣಿಸಲೂ ಸಾಕಷ್ಟು ಸಮಯ ಬೇಕು. ಉದಾಹರಣೆಗೆ, ಬೆಳಗ್ಗೆ 7ಕ್ಕೆ ವಿಮಾನ ಏರುವವರು ವಿಮಾನ ನಿಲ್ದಾಣಕ್ಕೆ ತಡ ರಾತ್ರಿಯೇ ತಲುಪಬೇಕು. ಕುವೈಟ್‌ವಿಮಾನ ಬಹ್ರೈನ್‌ನ ಮೂಲಕವೂ ಪ್ರಯಾಣಿಸಬೇಕು.

ಪರಿಹಾರವೇನು?
ಸಮಯವನ್ನು ಹಿಂದಿನಂತೆಯೇ ನಿಗದಿಪಡಿಸಿದರೆ ಈ ಎಲ್ಲ ಸಮಸ್ಯೆಗಳೂ ಬಗೆಹರಿದು, ವಿಮಾನ ಸಂಚಾರ ವರದಾನವಾಗಲಿದೆ ಎಂದು ಸಂಘ ಸಂಸ್ಥೆಗಳು ತಮ್ಮ ಮನವಿಯಲ್ಲಿ ತಿಳಿಸಿವೆ. ದ.ಕ., ಉಡುಪಿ, ಉ.ಕ., ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು; ಸಮೀಪದ ಕಾಸರಗೋಡು, ಕಣ್ಣೂರು ಜಿಲ್ಲೆಗಳ ಲಕ್ಷಾಂತರ ಮಂದಿ ಕುವೈಟ್‌ನಲ್ಲಿ ಉದ್ಯೋಗದ ಲ್ಲಿದ್ದಾರೆ. ಹಿಂದಿನ ಸಮಯವನ್ನೇ ಜಾರಿಗೊಳಿಸು ವುದರಿಂದ ಇವರಿಗೆಲ್ಲ ಅನುಕೂಲವಾಗಲಿದೆ.

ವಿಮಾನ ವಲಯದ ಮೇಲೂ ಕೇರಳ ಲಾಬಿ?
ರೈಲ್ವೇ ಇಲಾಖೆಯಲ್ಲಿ ಕರಾವಳಿ ಭಾಗಕ್ಕೆ , ಅದರಲ್ಲೂ ಉಡುಪಿ ಹಾಗೂ ಮಂಗಳೂರು ಭಾಗಕ್ಕೆ ಸಾಕಷ್ಟು ಅನ್ಯಾಯವಾಗಿದೆ. ಮಂಗಳೂರು ಪ್ರತ್ಯೇಕ ರೈಲ್ವೇ ವಲಯವನ್ನಾಗಿ ಘೋಷಿಸುವಂತೆ ಮಾಡಿದ ಮನವಿಯನ್ನು ಕೇರಳದ ಅಧಿಕಾರಿಗಳು ಹಾಗೂ ರಾಜಕಾರಣಿಗಳ ಲಾಬಿಯಿಂದಾಗಿ ಕೇಂದ್ರ ರೈಲ್ವೆ à ಇಲಾಖೆ ಪುರಸ್ಕರಿಸಿಲ್ಲ ಎಂಬ ಆರೋಪವಿದೆ. ಈಗ ಅದೇ ಲಾಬಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೂ ವಿಸ್ತರಣೆಯಾಗಿರುವ ಅಭಿಪ್ರಾಯ ವ್ಯಕ್ತವಾಗಿದೆ. ಕೇರಳದ ಕಣ್ಣೂರಿನಲ್ಲಿ ಸೆಪ್ಟಂಬರ್‌ನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆಯಾಗಲಿದೆ. ಈ ನಿಲ್ದಾಣಕ್ಕೆ ಅನುಕೂಲವಾಗುವ ವೇಳಾಪಟ್ಟಿಯನ್ನು ಮಾಡಿಸಿಕೊಳ್ಳುವತ್ತ “ಕೇರಳ ಲಾಬಿ’ ಕ್ರಿಯಾಶೀಲವಾಗಿದೆ. ಕರಾವಳಿಯ ಬೇಡಿಕೆಯನ್ನು ಉಪೇಕ್ಷಿಸಲು ಅದೇ ಕಾರಣ. 

ಸಂಸದರು ಬಗೆಹರಿಸಲಿ
ಮಂಗಳೂರು – ಕುವೈಟ್‌- ಮಂಗಳೂರು ವಿಮಾನಯಾನ ಸದಾ ಅಡೆತಡೆಗಳನ್ನು ಎದುರಿಸುತ್ತಲೇ ಬಂದಿದೆ. ಸಮಯ ನಿಗದಿ ಅಸಮರ್ಪಕವಾಗಿದ್ದರಿಂದ ಪ್ರಯಾಣಿಕರು ತಮ್ಮ ಅನುಕೂಲಕ್ಕೆ ತಕ್ಕಂತೆ ಬೇರೆ ನಿಲ್ದಾಣಗಳಿಂದ ಬೇರೆ ವಿಮಾನಗಳನ್ನು ಆಯ್ದುಕೊಳ್ಳುತ್ತಿದ್ದರು. ಆದರೆ ವಿಮಾನ ಇಲಾಖೆ, ತನ್ನ ಅಸಮರ್ಪಕ ಸಮಯದ ಲೋಪವನ್ನು ಪ್ರಯಾಣಿಕರ ಕೊರತೆ ಎಂದು ಬಿಂಬಿಸಿ ಹಾರಾಟ ರದ್ದುಪಡಿಸಿತು. ಬಳಿಕ ಸಂಘಸಂಸ್ಥೆಗಳು ಹೋರಾಟ ನಡೆಸಿದ ಪರಿಣಾಮ ವಿಮಾನ ಯಾನ ಮತ್ತೆ ಆರಂಭವಾಯಿತು. ಈಗ ಸಮಯದ ಬದಲಾವಣೆ ಪ್ರಹಾರ. ಈ ಎಲ್ಲ ಅಂಶಗಳನ್ನು ಸಂಸದ ನಳಿನ್‌ ಕುಮಾರ್‌ ಕಟೀಲು ಗಮನಕ್ಕೆ ಕುವೈಟ್‌ನ ದ. ಕನ್ನಡ ಮೂಲಕ ಸಂಘ ಸಂಸ್ಥೆಗಳವರು ತಂದಿದ್ದಾರೆ. ಸಂಸದರು ಸಂಬಂಧಪಟ್ಟ ಕೇಂದ್ರ ಸಚಿವರಲ್ಲಿ ಮಾತನಾಡಿ ಸರಿಪಡಿಸಬೇಕೆಂಬುದು ಕರಾವಳಿ ಪ್ರಯಾಣಿಕರ ಆಗ್ರಹ.

*ಮನೋಹರ ಪ್ರಸಾದ್‌

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.