ಟೋಲ್‌ ನವೀಕರಣಕ್ಕೆ ನಾಗರಿಕ ಆಕ್ರೋಶ: ಧರಣಿ


Team Udayavani, Aug 15, 2018, 12:54 PM IST

15-agust-9.jpg

ಸುರತ್ಕಲ್‌ : ಇಲ್ಲಿನ ಟೋಲ್‌ ಗೇಟನ್ನು ಹಿಂಬಾಗಿಲ ಮೂಲಕ ಆರಂಭಿಸುವ ಹುನ್ನಾರಕ್ಕೆ ಟೋಲ್‌ ಗೇಟ್‌ ಸಮೀಪ ಉಪಾಹಾರ ಮಂದಿರ, ಶೌಚಾಲಯ ನಿರ್ಮಿಸುತ್ತಿರುವುದು ಸಾಕ್ಷಿಯಾಗಿತ್ತು. ಆ ಸಂದರ್ಭ ಡಿವೈಎಫ್‌ಐ ಸಹಿತ ಸ್ಥಳೀಯ ನಾಗರಿಕ ಸಮಿತಿಗಳ ಹೋರಾಟದಿಂದಾಗಿ ಕಾಮಗಾರಿಗಳು ಸ್ಥಗಿತವಾಗಿದ್ದವು. ಆದರೆ ಈಗ ಸಂಸದರ ನೇರ ಹಸ್ತಕ್ಷೇಪದಿಂದ ಮತ್ತೆ ಟೋಲ್‌ ಸುಂಕ ವಸೂಲಿ ಆರಂಭಿಸಲಾಗಿದೆ ಎಂದು ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ ಆರೋಪಿಸಿದರು. ಸುರತ್ಕಲ್‌ ಟೋಲ್‌ಗೇಟ್‌ನ್ನು ಸ್ಥಗಿತಗೊಳಿಸಿ, ಹೆದ್ದಾರಿಯಲ್ಲಿರುವ ಅಪಾಯಕಾರಿ ಹೊಂಡ-ಗುಂಡಿಯನ್ನು ಮುಚ್ಚುವಂತೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಸಂಸದ ನಳಿನ್‌ ಕುಮಾರ್‌ ಕಟೀಲು ಅವರು ಟೋಲ್‌ಗೇಟ್‌ ಸಮೀಪ ಹೆಸರು ಸಹಿತ ಭಾವಚಿತ್ರ ಹಾಕಿ ದೇಶದ ನಂಬರ್‌ ವನ್‌ ಸಂಸದ ಎಂದು ಹೇಳಿಕೊಳ್ಳುತ್ತಿದ್ದಾರೆ. ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿ, ಕೇರಳ ಹಾಗೂ ಕರ್ನಾಟಕದ ನೆರೆ ಬಗ್ಗೆ ಮಾತನಾಡಿ, ಗಮನ ಸೆಳೆದಿರುವುದು ಅಭಿನಂದನಾರ್ಹ. ಆದರೆ ಜಿಲ್ಲೆಯ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸದೆ ಇರುವುದು ಖೇಧಕರ. ಹೆದ್ದಾರಿಗಳು ಹೊಂಡಗಳಿಂದ ತುಂಬಿದ್ದು, ದುರಸ್ತಿ ಕಾರ್ಯ ನಡೆಸುವುದು ಹಾಗೂ ಹತ್ತು ಕಿ.ಮೀ. ಅಂತರದಲ್ಲಿರುವ ಮೂರ್‍ನಾಲ್ಕು ಟೋಲ್‌ ಸುಂಕ ಹಾಕುವುದನ್ನು ತಡೆಯಲು ಇಂದಿಗೂ ಅವರಿಂದ ಸಾಧ್ಯವಾಗಿಲ್ಲ ಎಂದರು.

ಕಾರ್ಪೋರೇಟರ್‌ ರೇವತಿ ಪುತ್ರನ್‌ ಮಾತನಾಡಿ, ಪ್ರಧಾನಿ ಮೋದಿ ಹೆಸರಿನಲ್ಲಿ ಮತ ಪಡೆಯುವ ಸಂಸದರು, ಸ್ವಯಂ ವರ್ಚಸ್ಸಿನಿಂದ ಮತ ಪಡೆಯಲು ಸಾಧ್ಯವಾಗುತ್ತಿಲ್ಲ. ಅಭಿವೃದ್ಧಿ ಕೇವಲ ಬಾಯಿಮಾತಿನಲ್ಲಿ ಮಾಡಿದರೆ ಸಾಲದು ಜನತೆಗೆ ಪ್ರಯೋಜನ ಲಭಿಸುವಂತಿರಬೇಕು. ಸಂಸದರು ಮತ್ತೆ ಜಯಗಳಿಸಿದರೆ ಮತ್ತಷ್ಟು ಟೋಲ್‌ ವಸೂಲಾತಿ ಕೇಂದ್ರಗಳು ಆರಂಭವಾಗಬಹುದು ಎಂದರು.

ಬಲಿಷ್ಠ ರಸ್ತೆ ನಿರ್ಮಿಸಲು ಸಾಧ್ಯವಾಗಿಲ್ಲ
ದಯಾನಂದ ಶೆಟ್ಟಿ ಪಂಜಿಮೊಗರು ಮಾತನಾಡಿ, ಸಂಸದ ನಳಿನ್‌ ಕುಮಾರ್‌ ಕಟೀಲು ಪಾಲಿಕೆ ಸಭೆಯ ಚರ್ಚಿಗೆ ಇಂದಿಗೂ ಬಂದಿಲ್ಲ. ಮಾತೆತ್ತಿದರೆ ಬಲಿಷ್ಠ ದೇಶ ನಿರ್ಮಾಣ ಮಾಡುತ್ತೇವೆ ಎನ್ನುತ್ತಾರೆ. ಹತ್ತು ವರ್ಷಗಳಲ್ಲಿ ಬಲಿಷ್ಠ ರಸ್ತೆ ನಿರ್ಮಿಸಲೂ ಅವರಿಗೆ ಸಾಧ್ಯವಾಗಲಿಲ್ಲ ಎಂದು ಟೀಕಿಸಿದರು.

ಜಯಕರ್ನಾಟಕ ಮುಖಂಡ ವೈ. ರಾಘವೇಂದ್ರ ರಾವ್‌, ಡಿವೈಎಫ್‌ಐ ಮುಖಂಡ ಇಮ್ತಿಯಾಝ್, ಸಂತೋಷ್‌ ಬಜಾಲ್‌, ಅಜ್ಮಲ್‌ ಕಾನಾ, ನವೀನ್‌ ಕೊಂಚಾಡಿ, ಮುಸ್ತಫಾ ಬೈಕಂಪಾಡಿ, ಮೂಸಬ್ಬ ಪಕ್ಷಿಕೆರೆ, ರಹೀಂ ಪಕ್ಷಿಕೆರೆ, ದಿನೇಶ್‌ ಆರ್‌. ಕೆ., ಸಂದೀಪ್‌ ಕಿನ್ನಿಗೋಳಿ, ಮುನಾವರ್‌ ಕುತ್ತಾರ್‌, ಕಮಲಾಕ್ಷ ಸಾಲ್ಯಾನ್‌, ಶಿವ ಪಂಜಿಮೊಗರು, ಉಮರ್‌ ಫಾರೂಕ್‌, ಜಾನ್‌ ಡಿ’ಸೋಜಾ, ಅಬೂಬಕರ್‌ ಬಾವಾ, ನಾಗರಿಕ ಸಮಿತಿಯ ಗಂಗಾಧರ ಬಂಜನ್‌ ಮೊದಲಾದವರು ಉಪಸ್ಥಿತರಿದ್ದರು. ಬಿ.ಕೆ. ಇಮ್ತಿಯಾಝ್ ಪ್ರಾಸ್ತಾವಿಸಿದರು. ಶ್ರೀನಾಥ್‌ ಕುಲಾಲ್‌ ಅವರು ಕಾರ್ಯಕ್ರಮ ಸ್ವಾಗತಿಸಿದರು.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.