ಎನ್‌ಎಂಪಿಟಿಯಲ್ಲಿ  150ರಷ್ಟು ಮೀನುಗಾರಿಕಾ ಬೋಟು


Team Udayavani, Aug 18, 2018, 10:33 AM IST

18-agust-3.jpg

ಮಹಾನಗರ: ಭಾರೀ ಗಾಳಿ- ಮಳೆಯಿಂದ ಸಮುದ್ರ ಪ್ರಕ್ಷುಬ್ಧಗೊಂಡ ಹಿನ್ನೆಲೆಯಲ್ಲಿ ಮಂಗಳೂರಿನ ಹಳೆಬಂದರಿಗೆ ಆಗಮಿಸಲು ಸಾಧ್ಯವಾಗದ ಸುಮಾರು 150ರಷ್ಟು ಮೀನುಗಾರಿಕಾ ಬೋಟುಗಳು ಎನ್‌ಎಂಪಿಟಿ ಬಂದರಿನಲ್ಲಿ ಲಂಗರು ಹಾಕಿದ್ದು, ಶುಕ್ರವಾರವೂ ಹಳೆಬಂದರಿಗೆ ಬರಲು ಸಾಧ್ಯವಾಗಲಿಲ್ಲ.

ಎನ್‌ಎಂಪಿಟಿಯಲ್ಲಿ ನಿಂತಿರುವ ಬೋಟುಗಳಲ್ಲಿರುವ ಮೀನುಗಾರರಿಗೆ ನವಮಂಗಳೂರು ಬಂದರಿನ ಮೂಲಕ ಹೊರಭಾಗಕ್ಕೆ ಬರಲು ಅನುಮತಿ ಇಲ್ಲದ ಕಾರಣ ಮೀನುಗಾರರು ಬೋಟುನಲ್ಲಿಯೇ ಉಳಿದುಕೊಳ್ಳುವಂತಾಗಿದೆ. ಮೀನುಗಾರಿಕಾ ರಜೆ ಮುಗಿಸಿ ಆಗಸ್ಟ್‌ ಮೊದಲ ವಾರದಲ್ಲಿ ಸುಮಾರು 500ರಷ್ಟು ಬೋಟುಗಳು ಮೀನುಗಾರಿಕೆಗೆ ತೆರಳಿದ್ದವು. ಈ ಪೈಕಿ ಸುಮಾರು 350ರಷ್ಟು ಬೋಟುಗಳು ಈಗಾಗಲೇ ಹಳೆಬಂದರಿಗೆ ಆಗಮಿಸಿವೆ. ಉಳಿದ ಬೋಟುಗಳಿಗೆ ಸಮುದ್ರ ಪ್ರಕ್ಷುಬ್ಧಗೊಂಡು ಆತಂಕ ಎದುರಾಗಿದ್ದು, ಅಳಿವೆಬಾಗಿಲಿನಿಂದ ಹಳೆಬಂದರಿಗೆ ಆಗಮಿಸಲು ಸಾಧ್ಯವಾಗಿರಲಿಲ್ಲ.

ಅಳಿವೆಬಾಗಿಲಿನ ಮೂಲಕ ಹಳೆಬಂದರಿಗೆ ಆಗಮಿಸುವಲ್ಲಿ ಸಮು ದ್ರದ ಆಳ ಅತ್ಯಂತ ಕಡಿಮೆ ಇರುವುದರಿಂದ (ಸುಮಾರು 3 ಮೀಟರ್‌) ಬೋಟುಗಳ ಸಮತೋಲನ ತಪ್ಪುತ್ತವೆ. ಭಾರೀ ಗಾಳಿ- ಮಳೆಯಿಂದ ನೇತ್ರಾವತಿ- ಫಲ್ಗುಣಿ ನದಿ ನೀರು ಅಳಿವೆ ಬಾಗಿಲಿನ ಮೂಲಕ ಸಮುದ್ರ ಸೇರುವ ಭಾಗದಲ್ಲಿ ಅಲೆ ಜೋರಾಗಿದ್ದು, ಬೋಟುಗಳ ಪ್ರವೇಶಕ್ಕೆ ಅನುಕೂಲಕರವಾಗಿಲ್ಲ.

ಹಾಗಾಗಿ ಸಮುದ್ರ ಮಧ್ಯೆ ಆತಂಕಕ್ಕೆ ತುತ್ತಾದ ಮೀನುಗಾರಿಕಾ ದೋಣಿಗಳು ದಡಕ್ಕೆ ಬರಲು ಸಾಧ್ಯವಾಗದ ಕಾರಣ ರಕ್ಷಣೆ ಹಿನ್ನೆಲೆಯಲ್ಲಿ ಮೀನುಗಾರಿಕಾ ಇಲಾಖೆಯ ಮೂಲಕ ಎನ್‌ಎಂಪಿಟಿಗೆ ಮನವಿ ಸಲ್ಲಿಸಿ ಮೀನುಗಾರಿಕಾ ಬೋಟುಗಳ ನಿಲುಗಡೆಗೆ ಅವಕಾಶ ಕೇಳಲಾಯಿತು. ಇದರಂತೆ ಗುರುವಾರ ಬೋಟುಗಳು ಎನ್‌ಎಂಪಿಟಿಯಲ್ಲಿ (14 ಮೀಟರ್‌ ಆಳ) ಆಶ್ರಯ ಪಡೆದಿವೆ ಎಂದು ಇಲಾಖೆಯ ಉಪನಿರ್ದೇಶಕ ಮಹೇಶ್‌ ಕುಮಾರ್‌ ತಿಳಿಸಿದ್ದಾರೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆಯಿಂದ ಸೂಚನೆ ಬಂದಿರುವುದರಿಂದ ಯಾರೂ ಮೀನುಗಾರಿಕೆ ನಡೆಸುತ್ತಿಲ್ಲ. 

ಎನ್‌ಎಂಪಿಟಿಗೆ ಎಂಟ್ರಿ ಇಲ್ಲ !
ವಾಣಿಜ್ಯ ವಹಿವಾಟು ಹಾಗೂ ಭದ್ರತೆ ದೃಷ್ಟಿಯಿಂದ ಮೀನುಗಾರಿಕಾ ಬೋಟುಗಳಿಗೆ ಎನ್‌ ಎಂಪಿಟಿಗೆ ಪ್ರವೇಶ ನೀಡುತ್ತಿರಲಿಲ್ಲ. ಆದರೆ, ತುರ್ತು ಸಂದರ್ಭದಲ್ಲಿ ಮಾತ್ರ ಅನುಮತಿ ಮೇರೆಗೆ ಎನ್‌ಎಂಪಿಟಿ ಪ್ರವೇಶಕ್ಕೆ ಅವಕಾಶವಿದೆ. ಸುಮಾರು 20 ವರ್ಷಗಳಲ್ಲಿ ಬೆರಳೆಣಿಕೆ ಬೋಟುಗಳು ಮಾತ್ರ ಎನ್‌ಎಂಪಿಟಿಯಲ್ಲಿ ತುರ್ತು ಕಾಲದಲ್ಲಿ ಆಶ್ರಯ ಪಡೆದಿತ್ತು. ಆದರೆ ಬೃಹತ್‌ ಪ್ರಮಾಣದಲ್ಲಿ ಬೋಟುಗಳು ಎನ್‌ಎಂಪಿಟಿಗೆ ಬಂದಿರುವುದು ಇದೇ ಮೊದಲು. ಸಮುದ್ರ ಸಹಜಸ್ಥಿತಿಗೆ ಬಂದ ಅನಂತರ ಬೋಟುಗಳು ಮತ್ತೆ ಹಳೆಬಂದರಿಗೆ ಆಗಮಿಸುವ ನಿರೀಕ್ಷೆ ಇದೆ. 

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.