ದ.ಕ., ಉಡುಪಿ ಮಳೆ ತಗ್ಗಿದರೂ ಅನಾಹುತ ತಗ್ಗಿಲ್ಲ
Team Udayavani, Aug 19, 2018, 10:25 AM IST
ಮಂಗಳೂರು/ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಶನಿವಾರ ಮಳೆ ಇಳಿಮುಖವಾಗಿದೆ. ಆದರೆ ದ.ಕ.ದ ಕೆಲವು ತಗ್ಗು ಪ್ರದೇಶಗಳಲ್ಲಿ ನೆರೆ ನಿಂತಿದ್ದು, ಕೆಲವೆಡೆ ಗುಡ್ಡ ಕುಸಿತ ಸಂಭವಿಸಿದೆ. ಮಂಗಳೂರು ನಗರದಲ್ಲಿ ಬೆಳಗ್ಗಿನಿಂದ ಸಂಜೆಯವರೆಗೆ ಬಿಸಿಲು ಮತ್ತು ಮೋಡ ಕವಿದ ವಾತಾವರಣವಿತ್ತು. ರಾತ್ರಿ ವೇಳೆ ಮಳೆ ಪ್ರಾರಂಭವಾಗಿದೆ. ವೇಣೂರು, ಸುಳ್ಯ, ಪುಂಜಾಲಕಟ್ಟೆ, ಪುತ್ತೂರು, ಉಪ್ಪಿನಂಗಡಿ, ಬಂಟ್ವಾಳ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸೇರಿದಂತೆ ಮತ್ತಿತರ ಪ್ರದೇಶಗಳಲ್ಲಿ ಮಳೆಯಾದ ವರದಿಯಾಗಿದೆ.
ಉಡುಪಿ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಶನಿವಾರ ಸಂಜೆ ವೇಳೆಗೆ ಉತ್ತಮ ಮಳೆಯಾಯಿತು. ಕಾರ್ಕಳ ಪರಿಸರದಲ್ಲಿಯೂ ಸಂಜೆ ಸಾಧಾರಣ ಪ್ರಮಾಣದ ಮಳೆಯಾಗಿದೆ. ತೆಕ್ಕಟ್ಟೆ, ಬ್ರಹ್ಮಾವರ ಪರಿಸರದಲ್ಲಿಯೂ ಸಾಧಾರಣ ಮಳೆಯಾಗಿದೆ.ಹೆಚ್ಚುವರಿ 50 ಲಕ್ಷ ರೂ. ಅನುದಾನ: ಪ್ರಾಕೃತಿಕ ವಿಕೋಪ ನಿರ್ವಹಣೆಗೆಂದು ದ.ಕ. ಜಿಲ್ಲೆಯ ತಾಲೂಕುಗಳಿಗೆ ತಲಾ 50 ಲ.ರೂ. ಅನುದಾನವನ್ನು ಹೆಚ್ಚುವರಿ ಯಾಗಿ ಜಿಲ್ಲಾಧಿಕಾರಿ ಶನಿವಾರ ಬಿಡುಗಡೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ