ಸಂತ್ರಸ್ತರ ಹೆಸರಿನಲ್ಲಿ  ಸಕ್ರಿಯ ವಸೂಲಿ ಗ್ಯಾಂಗ್‌!


Team Udayavani, Aug 21, 2018, 10:28 AM IST

kodagu.jpg

ಮಂಗಳೂರು: ಕೊಡಗು, ಕೇರಳದ ನೆರೆ ಸಂತ್ರಸ್ತರಿಗೆ ನೆರವು ಎಂಬ ನೆಪ ಹೇಳಿ ಅಮಾಯಕರಿಂದ ಹಣ ವಸೂಲಿ ಮಾಡುವ ದಂಧೆ ದ.ಕ. ಮತ್ತು ಕೊಡಗು ಜಿಲ್ಲೆಯಲ್ಲಿ ಹುಟ್ಟಿಕೊಂಡಿದೆ. ನೆರೆಗೆ ನಲುಗಿದ ಕೇರಳ, ದ. ಕನ್ನಡ, ಕೊಡಗಿನ ಜನರಿಗೆ ದೇಶವೇ ಸ್ಪಂದಿಸಿ ನೆರವಿನ ಮಹಾಪೂರ ಹರಿದು ಬರುತ್ತಿದೆ. ಆದರೆ ಜನರ ಅನುಕಂಪವನ್ನೇ ದುರ್ಬಳಕೆ ಮಾಡಿಕೊಂಡು ಕಿಡಿಗೇಡಿಗಳು ಎಲ್ಲೆಂದರಲ್ಲಿ ನಗದು ದೇಣಿಗೆ ಸಂಗ್ರಹಿಸುತ್ತಿದ್ದಾರೆ. ಇದು ಜಿಲ್ಲಾಡಳಿತಗಳಿಗೆ ತಲೆನೋವಾಗಿದೆ. 

ಮಳೆ ಮತ್ತು ಪ್ರವಾಹ ಕೇರಳ ಮತ್ತು ಕೊಡಗಿನ ಬದುಕನ್ನು ಕಸಿದುಕೊಂಡಿದೆ. ಆಸ್ತಿಪಾಸ್ತಿ ನಷ್ಟ, ಪ್ರಾಣಹಾನಿ ಆಗಿದೆ. ಪರಿಹಾರ ಕೇಂದ್ರಗಳಲ್ಲಿ ಹಂಚಿ ಹೋಗಿರುವ ಅನೇಕರಿಗೆ ತಮ್ಮವರ ಸುರಕ್ಷತೆಯ ಬಗ್ಗೆಯೂ ತಿಳಿದಿಲ್ಲ. ಸಂತ್ರಸ್ತರಿಗೆ ನೆರವಾಗಲೆಂದು ಸ್ವಯಂ ಸೇವಾ ಸಂಘಟನೆಗಳು, ಸಮಾಜಸೇವಾ ಸಂಘಟನೆಗಳು ನೆರವು ಸಂಗ್ರಹದಲ್ಲಿ ತೊಡಗಿದ್ದಾರೆ. ಈ ಸಂದರ್ಭದ ದುರ್ಲಾಭ ಪಡೆಯಲು ಯತ್ನಿಸುತ್ತಿರುವ ಕೆಲವರು ಜನರನ್ನು ನಂಬಿಸಿ ದೋಚುವ ಕೆಲಸದಲ್ಲಿ ತೊಡಗಿದ್ದಾರೆ. ವಾಹನ ಸವಾರರನ್ನು, ದಾರಿಹೋಕರನ್ನು ನಿಲ್ಲಿಸಿ, ಬೆದರಿಸಿ ಹಣ ಕೀಳುವ ಯುವಕರ ಗುಂಪುಗಳು ದ. ಕನ್ನಡ ಮತ್ತು ಕೊಡಗು ಜಿಲ್ಲೆಯಾದ್ಯಂತ ಕಾರ್ಯಾಚರಿಸುತ್ತಿವೆ. 

ಪೆಟ್ಟಿಗೆ ಹಿಡಿದು ತಿರುಗಾಟ
ಜಿಲ್ಲೆಯ ಕಲ್ಲಡ್ಕ, ಉಪ್ಪಿನಂಗಡಿ, ಮಂಗಳೂರು, ಕೊಡಗು ಜಿಲ್ಲೆಯ ಮಡಿಕೇರಿ ಮೊದಲಾದೆಡೆ ಇಂತಹ ಲೂಟಿ ತಂಡಗಳು ಸಕ್ರಿಯವಾಗಿದ್ದು, ಪರಿಹಾರ ನಿಧಿ ಹೆಸರಿನ ಪೆಟ್ಟಿಗೆ ಹಿಡಿದು ತಿರುಗಾಡುತ್ತಿದ್ದಾರೆ. ಕೊಡಗು  ಮಾದಾಪುರ ಸಮೀಪದ ಇಗ್ಗೊಡ್ಲುವಿನಲ್ಲಿ ಹಣ ಹಾಗೂ ಚಿನ್ನಾಭರಣವಿದ್ದ ಬ್ಯಾಗನ್ನೇ ಲಪಟಾಯಿಸಿದ ಘಟನೆ ನಡೆದಿದೆ. ಇಂತಹ ಯುವಕರ ಪಡೆ ಮಾದಕ ವ್ಯಸನಿಗಳಂತೆಯೂ ಕಂಡು ಬರುತ್ತಿದ್ದು, ತಲೆನೋವಾಗಿ ಪರಿಣಮಿಸಿದ್ದಾರೆ. 

ಅನುಕಂಪದ ದುರುಪಯೋಗ
ಇಂತಹ ತಂಡಗಳು ಮುಗ್ಧ ಜನತೆಯನ್ನೇ ಟಾರ್ಗೆಟ್‌ ಮಾಡುತ್ತಿವೆ. ಹೊಟೇಲು, ಬಸ್‌ ನಿಲ್ದಾಣಗಳಲ್ಲಿ ಸಿಕ್ಕವರಿಂದ ಹಣ ಪೀಕಿಸುವ ತಂಡಗಳು ಎರಡೂ ಜಿಲ್ಲೆಗಳಲ್ಲಿ ಕಂಡು ಬರುತ್ತಿವೆ. ಒತ್ತಾಯಿಸಿ ಹಣ ಕೀಳುತ್ತಿರುವ ಬಗ್ಗೆಯೂ ದೂರುಗಳು ಬಂದಿವೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ತಾಣಗಳಲ್ಲಿ ಹಲವರು ಅನುಭವಗಳನ್ನು ಬರೆದುಕೊಂಡಿದ್ದಾರೆ.

ಸಿಎಂ ವಿಕೋಪ ಪರಿಹಾರ ನಿಧಿಗೇ ಹಣ ನೀಡಿ
ಪ್ರವಾಹ ಸಂತ್ರಸ್ತರಿಗೆ ಆರ್ಥಿಕ ನೆರವನ್ನು ನೀಡಲಿಚ್ಛಿಸುವವರು ಮುಖ್ಯಮಂತ್ರಿಗಳ ವಿಕೋಪ ಪರಿಹಾರ ನಿಧಿಗೆ ಚೆಕ್‌ ಅಥವಾ ಡಿಡಿ ಮೂಲಕ ಆರ್ಥಿಕ ನೆರವು ನೀಡಬೇಕು. ಯಾವುದೇ ವ್ಯಕ್ತಿ ಅಥವಾ ಸಂಘಟನೆಗಳು ಅಥವಾ ಸ್ವಯಂ ಸೇವಕರು, ಸಂಘ-ಸಂಸ್ಥೆಗಳು ಸಾರ್ವಜನಿಕವಾಗಿ ನಗದು ವಂತಿಗೆ ಸಂಗ್ರಹಿಸಲು ಅವಕಾಶವಿಲ್ಲ. ಸಂಘಸಂಸ್ಥೆಗಳು ಕೂಡ ಮುಖ್ಯಮಂತ್ರಿಗಳ ವಿಕೋಪ ಪರಿಹಾರ ನಿಧಿಗೇ ಆರ್ಥಿಕ ನೆರವು ನೀಡಬಹುದು ಎಂದು ಎಲ್ಲ ಜಿಲ್ಲಾಡಳಿತಗಳು ಸೂಚನೆ ನೀಡಿವೆ. 

ಪೊಲೀಸ್‌ ದೂರು ನೀಡಿ
ಕೊಡಗಿನಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಸಂತ್ರಸ್ತ ರಾಗಿದ್ದಾರೆ. ಇಂತಹವರ ಹೆಸರಿನಲ್ಲಿ ಹಣ ಸಂಗ್ರಹಿಸಿ ದುರುಪಯೋಗ ಮಾಡುವುದು ಸಲ್ಲ. ಜನ ಮುಖ್ಯಮಂತ್ರಿ ನೆರೆ ಪರಿಹಾರ ನಿಧಿಗೇ ಹಣ ನೀಡಬೇಕು. ನೆರೆ ಸಂತ್ರಸ್ತರ ಹೆಸರಿನಲ್ಲಿ ಹಣ ಸಂಗ್ರಹಿಸುತ್ತಿರುವ ಬಗ್ಗೆ ಗಮನಕ್ಕೆ ಬಂದಲ್ಲಿ ತತ್‌ಕ್ಷಣಕ್ಕೆ ಹತ್ತಿರದ ಠಾಣೆಯಲ್ಲಿ ದೂರು ದಾಖಲಿಸಿ.
-ಶಶಿಕಾಂತ ಸೆಂಥಿಲ್‌, ದ.ಕ. ಜಿಲ್ಲಾಧಿಕಾರಿ

ಪರಿಹಾರ ನಿಧಿಗೆ ಹೀಗೆ ಕಳುಹಿಸಿ
* ಕೊಡಗು ಜಿಲ್ಲೆಯ ಪ್ರವಾಹ ಸಂತ್ರಸ್ತರಿಗೆ ಆರ್ಥಿಕ ನೆರವಾಗಿ ಚೆಕ್‌ ಅಥವಾ ಡಿಡಿಗಳನ್ನು ಕಳುಹಿಸಬೇಕಾದ್ದು: Chief Minister’s Calamity Relief Fund Karnataka State
* ನೇರವಾಗಿ ನಗದು ವರ್ಗಾವಣೆಗೆ No: 37887098605, IFSC Code: SBIN0040277
* ಕೇರಳ ಪ್ರವಾಹ ಸಂತ್ರಸ್ತರಿಗೆ ಆರ್ಥಿಕ ನೆರವಾಗಿ ಚೆಕ್‌ ಅಥವಾ ಡಿಡಿಗಳನ್ನು ಕಳುಹಿಸಬೇಕಾದ್ದು: Chief Minister’s Calamity Relief Fund Kerala State 
*  ನೇರವಾಗಿ ನಗದು ವರ್ಗಾವಣೆಗೆ A/c No: 67319948232 IFSC Code: SBIN0070028   

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.