“ಚಿನ್ನ ಕೊಡಗಿನ ನಿರಾಶ್ರಿತರಿಗೆ ಅರ್ಪಣೆ’


Team Udayavani, Sep 1, 2018, 9:45 AM IST

poovamma.jpg

ಮಂಗಳೂರು: “ಕೊಡಗಿನಲ್ಲಿ ಸಂಭವಿಸಿದ ಮಹಾಮಳೆಯಿಂದ ನೂರಾರು ಕುಟುಂಬಗಳು ಬೀದಿಗೆ ಬಿದ್ದಿವೆ. ನೆರೆಯಿಂದ ತತ್ತರಿಸಿರುವ ನನ್ನ ಊರಿನ ಜನರು ಈಗ ದುಃಖದಲ್ಲಿದ್ದಾರೆ. ಹೀಗಾಗಿ ಏಶ್ಯನ್‌ ಗೇಮ್ಸ್‌ನಲ್ಲಿ ನಾನು ಗೆದ್ದಿ ರುವ ಈ ಚಿನ್ನದ ಪದಕವನ್ನು ಈ ನನ್ನ ಕೊಡಗಿನ ನಿರಾಶ್ರಿತರಿಗಾಗಿ ಸಮರ್ಪಿಸುತ್ತಿದ್ದೇನೆ’. 

ಇದು ಗೇಮ್ಸ್‌ನ ವನಿತೆಯರ 4ಗಿ400 ಮೀ. ರಿಲೇಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿ ಚಿನ್ನದ ಪದಕ ಗೆದ್ದಿರುವ ಕರ್ನಾಟಕದ ಕ್ರೀಡಾಪಟು ಪೂವಮ್ಮ ಅವರ ಮಾತು. ಪೂವಮ್ಮ ಜಕಾರ್ತಾದಿಂದ ದೂರವಾಣಿ ಮೂಲಕ “ಉದಯವಾಣಿ’ ಜತೆ ಮಾತನಾಡಿ ಚಿನ್ನದ ಓಟದ ಬಗ್ಗೆ ಅನುಭವ ಹಂಚಿಕೊಂಡರು. 

ಪದಕ ಗೆದ್ದ ಸಂಭ್ರಮ ಹೇಗಿತ್ತು?
ತುಂಬಾನೇ ಖುಷಿಯಾಗುತ್ತಿದೆ. ಈ ಪ್ರಶಸ್ತಿಯನ್ನು ಕೊಡಗಿನಲ್ಲಿ ಮನೆ ಕಳೆದುಕೊಂಡ ನಿರಾಶ್ರಿತರಿಗೆ ಅರ್ಪಿಸುತ್ತೇನೆ. ನನ್ನ ಸಾಧನೆಗೆ ತಂದೆ ರಾಜು, ತಾಯಿ ಜಾಜಿ, ಸಹೋದರ ಮಂಜು, ಸಹೋದರಿ ಲಿಖೀತಾ ಸಹಿತ ಕೋಚ್‌ ಅವರ ಬೆಂಬಲವೂ ಕಾರಣವಾಗಿದೆ.  

ಚಿನ್ನ ಗೆಲ್ಲುವ ನಿರೀಕ್ಷೆ ಇತ್ತಾ?
ಖಂಡಿತಾ ಇತ್ತು. ತಂಡ ಚಿನ್ನ ಗೆಲ್ಲುವುದರ ಹಿಂದೆ ಹಿಮಾ ದಾಸ್‌, ಸರಿತಾ ಬೆನ್‌ ಮತ್ತು ವಿಸ್ಮಯಾ ಕೊರೋತ್‌ ಅವರ ಪಾತ್ರವೂ ಹಿರಿದು.

ಅಭ್ಯಾಸ ಯಾವ ರೀತಿ ಇತ್ತು?
ದಿನಂಪ್ರತಿ ಬೆಳಗ್ಗೆ ಮತ್ತು ಸಂಜೆ 3 ಗಂಟೆ ಅಭ್ಯಾಸ ಮಾಡು ತ್ತಿದ್ದೆವು. ನನ್ನ ತರಬೇತುದಾರರು ವಿಶ್ವಾಸ ತುಂಬುತ್ತಿದ್ದರು.

ಕೊಡಗಿನ ಪರಿಸ್ಥಿತಿಯ ಬಗ್ಗೆ ?
ಮನಸ್ಸಿಗೆ ತುಂಬಾ ಬೇಸರವಾಗುತ್ತದೆ. ಮೊನ್ನೆಯ ಅನಾಹುತಕ್ಕೆ ನಮ್ಮ ಕೆಲವು ಸಂಬಂಧಿಕರ ಮನೆಗಳು ನೆಲ ಸಮವಾಗಿದೆ. ನನ್ನ ಕೈಲಾದಷ್ಟು ಮಟ್ಟಿಗೆ ಸಹಾಯ ಮಾಡುತ್ತೇನೆ.

ಕ್ರೀಡಾಪಟುಗಳಿಗೆ ನಿಮ್ಮ ಸಲಹೆ? 
ಇತ್ತೀಚೆಗಿನ ದಿನಗಳಲ್ಲಿ ಹೆಚ್ಚಿನ ಅವಕಾಶಗಳಿವೆ. ಜೀವನದಲ್ಲಿ ಗುರಿ, ಶಿಸ್ತು ಇದ್ದರೆ ಸಾಧನೆ ಮಾಡಬಹುದು ಎಂಬುದಕ್ಕೆ ಮಂಗಳೂರಿನಲ್ಲಿ ಬೆಳೆದ ನಾನೇ ಸಾಕ್ಷಿ. ಕರಾವಳಿ ನನಗಿಷ್ಟವಾದ ಊರು. ಇಲ್ಲಿನ ಕೋರಿ-ರೊಟ್ಟಿ ಎಂದರೆ ಪಂಚಪ್ರಾಣ.

4 ವರ್ಷವಾದರೂ ಸೈಟ್‌ ಸಿಕ್ಕಿಲ್ಲ
ಮಗಳು ಚಿನ್ನ ಜಯಿಸಿದ್ದಕ್ಕೆ ಪ್ರತಿ ಕ್ರಿಯಿಸಿರುವ ಪೂವಮ್ಮ ಅವರ ತಂದೆ ರಾಜು “2014ರಲ್ಲಿ ಕಾಮನ್‌ವೆಲ್ತ್‌ ಮತ್ತು ಏಶ್ಯಾಡ್‌ನ‌ಲ್ಲಿ ಪದಕ ಗಳಿಸಿದ ಎಲ್ಲ ಆ್ಯತ್ಲೀಟ್‌ಗಳಿಗೆ 2 ತಿಂಗಳೊಳಗೆ ಸರಕಾರದಿಂದ ನಿವೇಶನ ನೀಡುವ ಕುರಿತು ಅಂದಿನ ಸಿಎಂ ಸಿದ್ದರಾಮಯ್ಯ, ಕ್ರೀಡಾ ಸಚಿವ ಅಭಯಚಂದ್ರ ಜೈನ್‌ ಭರವಸೆ ನೀಡಿದ್ದರು. ಆದರೆ 4 ವರ್ಷ ಕಳೆದರೂ ಸರಕಾರದಿಂದ ನಿವೇಶನ ಸಿಕ್ಕಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. 

ಕಾಲು ನೋವಿದ್ದರೂ ಓಡಿದ್ದೆ..!
“ಕೆಲವು ದಿನಗಳ ಹಿಂದೆ ನಾನು ಅಭ್ಯಾಸ ನಡೆಸುತ್ತಿರುವ ಸಮಯದಲ್ಲಿ ಕಾಲು ನೋವಾಗಿತ್ತು. ಏಶ್ಯನ್‌ ಗೇಮ್ಸ್‌ನಲ್ಲಿ ಭಾಗವಹಿಸುವಾಗಲೂ ಕಾಲು ನೋವು ಹಾಗೆಯೇ ಇತ್ತು. ಆದರೆ ಭಾರತಕ್ಕೆ ಪದಕ ತಂದು ಕೊಡ ಬೇಕೆಂಬ ಛಲದ ಮುಂದೆ ನೋವು ದೊಡ್ಡದಲ್ಲ. ಕೊನೆಗೂ ಆ ಛಲದಲ್ಲಿ ಯಶಸ್ವಿಯಾಗಿರುವುದಕ್ಕೆ ತುಂಬಾ ಖುಷಿಯಿದೆ’ ಎನ್ನುತ್ತಾರೆ ಪೂವಮ್ಮ.

ಮುಂದಿನ ಗುರಿ ?
ಮುಂದಿನ ವರ್ಷ ವಿಶ್ವ ಚಾಂಪಿಯನ್‌ಶಿಪ್‌ ಹಾಗೂ 2020ರಲ್ಲಿ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿ ಪದಕ ಗೆಲ್ಲುವ ಗುರಿ ಹೊಂದಿದ್ದೇನೆ.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.