ಅವಿಭಜಿತ ದ.ಕ. ಜಿಲ್ಲೆ  ಜತೆಗೂ ಮುನಿಶ್ರೀಗಳಿಗೆ ನಂಟು


Team Udayavani, Sep 2, 2018, 11:17 AM IST

0109kkl2b.jpg

ಮಂಗಳೂರು/ಕಾರ್ಕಳ/ಧರ್ಮಸ್ಥಳ: ಕಾಂತ್ರಿಕಾರಿ ರಾಷ್ಟ್ರಸಂತ, “ಕಹಿಗುಳಿಗೆ’ ಪ್ರವಚನ ಖ್ಯಾತಿಯ ತರುಣ ಸಾಗರ ಮುನಿಮಹಾರಜ ಅವರಿಗೂ, ಅವಿಭಜಿತ ಜಿಲ್ಲೆಗೂ ಉತ್ತಮ ನಂಟಿತ್ತು. ಧರ್ಮಸ್ಥಳ, ಕಾರ್ಕಳ, ಮಂಗಳೂರಿಗೂ ಅವರು ಭೇಟಿ ನೀಡಿ ವಿವಿಧ ಕಾರ್ಯಕ್ರಮ, ಪ್ರವಚನಗಳಲ್ಲಿ ಭಾಗಿಯಾಗಿದ್ದರು. ಅಷ್ಟೇ ಅಲ್ಲದೆ, ಅಪಾರ ಸಂಖ್ಯೆಯ ಶಿಷ್ಯವರ್ಗ, ಅಭಿಮಾನಿಗಳನ್ನು ಹೊಂದಿದ್ದರು. 

2007ರಲ್ಲಿ ತರುಣ ಸಾಗರ ಮುನಿಗಳು ಧರ್ಮಸ್ಥಳದಲ್ಲಿ ನಡೆದಿದ್ದ ಭಗವಾನ್‌ ಶ್ರೀ ಬಾಹುಬಲಿ ಮಹಾಮಸ್ತಕಾಭಿಷೇಕದಲ್ಲಿ ಭಾಗವಹಿಸಿ ಪ್ರವಚನ ನೀಡಿದ್ದರು.  ಕ್ಷೇತ್ರದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಅವರನ್ನು ಅದ್ದೂರಿಯಾಗಿ ಸ್ವಾಗತಿಸಿ ಸತ್ಕರಿಸಲಾಗಿದ್ದು, ಲಕ್ಷಾಂತರ ಮಂದಿ ಆಶೀರ್ವಾದ ಪಡೆದಿದ್ದರು. 

ಅದೇ ವರ್ಷದಲ್ಲಿ ಅವರು ಕಾರ್ಕಳಕ್ಕೂ ಶಿಷ್ಯರೊಂದಿಗೆ ಆಗಮಿಸಿದ್ದರು. ಡೋಲಿಯಲ್ಲಿ ಮೂಡಬಿದಿರೆಯಿಂದ ಆಗಮಿಸಿದ್ದ ಅವರು ಎರಡು ದಿನ ತಂಗಿದ್ದರು. ಹಿರಿಯಂಗಡಿಯ ಶ್ರೀ ನೇಮಿನಾಥ ಬಸದಿಗೂ ಭೇಟಿ ನೀಡಿದ್ದರು. ಅಲ್ಲಿನ ಬಾಹುಬಲಿ ಮಂದಿರದಲ್ಲಿ ಪ್ರವಚನ ನೀಡಿದ್ದರು. ಬಳಿಕ ನಲ್ಲೂರು ಬಸದಿ ಸೇರಿದಂತೆ ಪ್ರಮುಖ ಬಸದಿಗಳಿಗೆ ಭೇಟಿ ನೀಡಿದ್ದು. ತರುಣ ಸಾಗರ ಮುನಿಗಳ ಅಂದಿನ ಪ್ರವಚನ ಅದ್ಭುತವಾಗಿತ್ತು ಎಂದು ಜೈನ ಸಮುದಾಯದ ಪ್ರಮುಖರು ನೆನಪಿಸಿಕೊಳ್ಳುತ್ತಾರೆ. 

ಇದೇ ಸಂದರ್ಭ ಮಂಗಳೂರಿಗೂ ಭೇಟಿ ನೀಡಿದ್ದ ಅವರು ಒಂದು ತಿಂಗಳ ಕಾಲ ಇದ್ದು, ಪ್ರವಚನ ನೀಡಿದ್ದರು. ನಗರದ ಬಜಿಲಕೇರಿ ಯಲ್ಲಿರುವ ಆದೀಶ್ವರ ಸ್ವಾಮಿ ಜೈನ ಬಸದಿ ಮತ್ತು ಉಳ್ಳಾಲದ ಪಾರ್ಶ್ವನಾಥ ಸ್ವಾಮಿ ಬಸದಿ ಸಂದರ್ಶಿಸಿ ಸಮಾಜ ಬಾಂಧವರನ್ನು ಉದ್ದೇಶಿಸಿ ಮಾತನಾಡಿದ್ದರು. ಬಲ್ಲಾಳ್‌ಬಾಗ್‌ನಲ್ಲಿರುವ ಧರ್ಮಸ್ಥಳದ ಡಾ| ವಿರೇಂದ್ರ ಹೆಗ್ಗಡೆ ಅವರ ಮನೆ “ವೀರ ಭವನ’ದಲ್ಲಿ ಒಂದು ತಿಂಗಳ ಕಾಲ ದಿನಂಪ್ರತಿ ಪ್ರವಚನ ನೀಡಿದ್ದರು.  ಒಂದು ದಿನ ಕರಾವಳಿ ಉತ್ಸವ ಮೈದಾನದಲ್ಲಿ ಸಾರ್ವಜನಿಕವಾಗಿ ಪ್ರವಚನ ನೀಡಿ ಲೋಕ ಕಲ್ಯಾಣಕ್ಕಾಗಿ ಶಾಂತಿ ಮಂತ್ರ ಬೋಧಿಸಿದ್ದರು. ಪ್ರವಚನವನ್ನು ಆಲಿಸಲು ಎಲ್ಲ ಧರ್ಮೀಯರು ಆಗಮಿಸಿದ್ದರು. 

ಭಾರತ ಸೇರಿದಂತೆ 122 ಕ್ಷೇತ್ರಗಳಲ್ಲಿ ಮಹಾವೀರರ ಸಂದೇಶವನ್ನು ಸಾರಿ ದ್ದಾರೆ. ಪ್ರತಿಯೊಬ್ಬರೂ ಓದಬಲ್ಲಂತಹ ವೈಚಾರಿಕ ಸಾಹಿತ್ಯವನ್ನು ಕಟ್ಟಿಕೊಟ್ಟಿದ್ದಾರೆ. ಅದ್ಭುತ ಪ್ರವಚನಕಾರರಾಗಿದ್ದ ಅವರು ಸರ್ವಶ್ರೇಷ್ಠ ಅಧ್ಯಾತ್ಮ ಗುರುಗಳು. ಪ್ರತಿಯೊಂದು ಧರ್ಮಗಳ ಬಗ್ಗೆ ತಿಳಿದಿದ್ದ ಅವರು ಎಲ್ಲರಿಗೂ ಗುರುಗಳಾಗಿದ್ದರು.
 -  ಶ್ರೀ ರಾಜಗುರು ಧ್ಯಾನಯೋಗಿ ಲಲಿತಕೀರ್ತ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ ಜೈನ ಮಠ ಕಾರ್ಕಳ

ಜಗತ್ತು ಒಗ್ಗೂಡಿಸಿದ್ದಾರೆ
ಮುನಿಶ್ರೀ ತರುಣ್‌ಸಾಗರ್‌ ಅವರು ಜೈನ ಧರ್ಮದ ಸಂದೇಶವನ್ನು ಇಡೀ ಜಗತ್ತಿಗೆ ಸಾರಿದ್ದಾರೆ. ಜಗತ್ತನ್ನು ಒಗ್ಗೂಡಿಸಿ ಮನುಕುಲದ ಉದ್ಧಾರಕ್ಕಾಗಿ ಶ್ರಮಿಸಿದ್ದಾರೆ.
ಮುನಿಶ್ರೀ ವೀರ್‌ಸಾಗರ್‌ ಮಹಾರಾಜ್‌

ಪೂಜ್ಯರಿಂದ ಸರ್ವ ಧರ್ಮೀ ಯರೂ ಪ್ರಭಾವಿತರಾಗಿದ್ದು, ವಾಸ್ತವಿಕವಾಗಿ ಜೀವನದಲ್ಲಿ ಧರ್ಮ ವನ್ನು ಅನುಷ್ಠಾನಗೊಳಿಸುವ ಕುರಿತು ಅವರು ಮಾರ್ಗದರ್ಶನ ನೀಡು ತ್ತಿದ್ದರು.  ಧರ್ಮ ಪ್ರಭಾವನೆ ಜತೆಗೆ ಸಾಂಸಾರಿಕ ಹಾಗೂ ಸಾಮಾಜಿಕ ಸಮಸ್ಯೆಗಳ ಪರಿಹಾರದ ಕುರಿತು ಕೂಡ ನಿರ್ಭಯವಾಗಿ ಪೂಜ್ಯರು ಸದಾ ಮಾರ್ಗದರ್ಶನ ನೀಡುತ್ತಿದ್ದರು.
ಡಾ| ಡಿ. ವೀರೇಂದ್ರ ಹೆಗ್ಗಡೆ, ಧರ್ಮಾಧಿಕಾರಿಗಳು, ಧರ್ಮಸ್ಥಳ

ಜೈನ ಮುನಿ ತರುಣ್‌ ಸಾಗರ್‌ ಸರಳ ಸ್ವಭಾವದವರು. ಆದರೆ ಪ್ರವಚನ ತೀಕ್ಷ್ಣವಾಗಿರುತ್ತಿದ್ದವು. ದೇಶಾದ್ಯಂತ ಪ್ರವಚನದ ಮೂಲಕ ಜೈನ ಸಮಾಜದಲ್ಲಿ ಕ್ರಾಂತಿ ಉಂಟು ಮಾಡಿದ್ದರು 
 ಸುರೇಶ್‌ ಬಲ್ಲಾಳ್‌, ಮುಡಾ ಅಧ್ಯಕ್ಷ

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.