ಶಿರಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಮೀನಮೇಷ


Team Udayavani, Sep 22, 2018, 10:06 AM IST

shiradi.jpg

ಸುಬ್ರಹ್ಮಣ್ಯ: ಅತಿವೃಷ್ಟಿ ಸಂದರ್ಭ ಭೂಕುಸಿತದಿಂದಾಗಿ ಹಾನಿಗೀಡಾಗಿರುವ ಶಿರಾಡಿ ಘಾಟಿ ರಾಷ್ಟ್ರೀಯ ಹೆದ್ದಾರಿಯ ದುರಸ್ತಿ ಕಾರ್ಯಕ್ಕೆ ಇನ್ನೂ ಚಾಲನೆಯೇ ಸಿಕ್ಕಿಲ್ಲ. ಇಲ್ಲಿ ಘನ ವಾಹನಗಳ ಸಂಚಾರಕ್ಕೆ ಅವಕಾಶ ಇಲ್ಲವಾದ್ದರಿಂದ ಸರಕು ಸಾಗಾಟ ಲಾರಿಗಳ ಚಾಲಕರು, ವ್ಯಾಪಾರಸ್ಥರು, ಶ್ರಮಿಕ ವರ್ಗದವರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಜನರ ಸಹನೆಯ ಕಟ್ಟೆಯೂ ಒಡೆಯುತ್ತಿದೆ. ಗುಂಡ್ಯದಿಂದ ಹೆಗ್ಗದ್ದೆ ತನಕ ಕಾಂಕ್ರೀಟ್‌ ರಸ್ತೆ 12 ಕಡೆ ಭೂಕುಸಿದಿದೆ. ಹಲವು ಕಡೆ ಹೊಳೆ ಬದಿಯ ರಸ್ತೆಯ ಮಣ್ಣು ಜರಿದಿದೆ. ಅಲ್ಲೆಲ್ಲ ಮರಳಿನ ಚೀಲ ಜೋಡಿಸಿ ಟರ್ಪಾಲು ಮುಚ್ಚಿ ಎಚ್ಚರಿಕೆ ಫಲಕ ಅಳವಡಿಸಲಾಗಿದೆ. ಇದರ ಹೊರತು ಈ ಮಾರ್ಗದಲ್ಲಿ ಯಾವುದೇ ತುರ್ತು ಕಾಮಗಾರಿಗೆ ಗಮನ ಹರಿಸಿಲ್ಲ.

ಇಂದು ಗುಂಡ್ಯದಲ್ಲಿ  ಪ್ರತಿಭಟನೆ
ಶಿರಾಡಿ ಘಾಟಿ ರಸ್ತೆ ಬಂದ್‌ ಮಾಡಿ ದ.ಕ. ಜಿಲ್ಲೆಯ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ವ್ಯವಸ್ಥೆಗೆ ಧಕ್ಕೆ ಮಾಡಿರುವ ಆಡಳಿತ ವ್ಯವಸ್ಥೆಯ ಕ್ರಮ ಖಂಡಿಸಿ, ಸಾರಿಗೆ ಬಸ್‌ ಸಹಿತ ಅಗತ್ಯ ಘನವಾಹನಗಳಿಗೆ ಸಂಚಾರಕ್ಕೆ ರಸ್ತೆಯನ್ನು ಮುಕ್ತಗೊಳಿಸುವಂತೆ ಆಗ್ರಹಿಸಿ ಮಲೆ ನಾಡು ಜನಹಿತ ರಕ್ಷಣಾ ವೇದಿಕೆ ಸೆ. 22ರಂದು ಗುಂಡ್ಯ ಜಂಕ್ಷನ್‌ನಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ ಎಂದು ಮಲೆ ನಾಡು ಜನಹಿತ ರಕ್ಷಣಾ ವೇದಿಕೆ ಸಂಚಾಲಕ ಕಿಶೋರ್‌ ಶಿರಾಡಿ ತಿಳಿಸಿದ್ದಾರೆ.

9 ತಿಂಗಳು ಬಂದ್‌
ಈ ರಾ.ಹೆ.ಯನ್ನು 2ನೇ ಹಂತದಲ್ಲಿ ಕಾಂಕ್ರೀಟ್‌ ಹಾಸಲು ಜನವರಿ 19ರಿಂದ ಬಂದ್‌ ಮಾಡಲಾಗಿತ್ತು. ಬಳಿಕ ಜೂನ್‌ 15ರಿಂದ ಲಘು ವಾಹನಗಳಿಗೆ ಸಂಚರಿಸಲು ಅವಕಾಶ ಮಾಡಲಾಗಿತ್ತು. ಈ ಅವಧಿಯಲ್ಲಿ ಮಳೆ ಬಂದು ಅಲ್ಲಲ್ಲಿ ಭೂಕುಸಿತವಾದ ಕಾರಣ ಪುನಃ ವಾಹನ ಸಂಚಾರ ನಿಷೇಧಿಸಲಾಗಿತ್ತು. ಕೇವಲ 10 ದಿನ ಮಾತ್ರ ಲಘು ವಾಹನ ಸಂಚಾರಕ್ಕೆ ರಸ್ತೆ ಮುಕ್ತವಾಗಿತ್ತು. 

ಕಳೆದ 9 ತಿಂಗಳಿಂದ ಈ ಮಾರ್ಗದಲ್ಲಿ ವಾಹನ ಓಡಾಟವಿಲ್ಲದೆ ಲಾರಿ ಚಾಲಕ-ಮಾಲಕರು, ಗುಂಡ್ಯ, ನೆಲ್ಯಾಡಿ, ಮಾರನಹಳ್ಳಿಯ ವ್ಯಾಪಾರಸ್ಥರು ವ್ಯಾಪಾರ ವಿಲ್ಲದೆ ಭಾರೀ ನಷ್ಟಕ್ಕೆ ಒಳಗಾಗಿದ್ದಾರೆ. ವಿದ್ಯಾರ್ಥಿಗಳು ಶಾಲೆ, ಕಾಲೇಜಿಗೆ ತೆರಳಲೂ ಅಸಾಧ್ಯವಾಗಿದೆ. ಸಾಲ ಮಾಡಿ ವಾಹನ ಖರೀದಿಸಿದ ಕೆಲವರು ಕಂತು ಕಟ್ಟಲು ಸಾಧ್ಯವಾಗದೆ ವಾಹನ ಮಾರಿದ್ದಾರೆ. ಕಷ್ಟ ಕೇಳಲು ಯಾರೂ ಬಂದಿಲ್ಲ ಎಂದು ಗುಂಡ್ಯದ ಗ್ಯಾರೇಜ್‌ ಮೆಕ್ಯಾನಿಕ್‌ ಸುರೇಶ್‌ ಅಳಲು ತೋಡಿಕೊಂಡರು.

ಒಂದೇ ದಿನ 9 ಅಪಘಾತ !
ರಸ್ತೆ ಕುಸಿತದ ಸ್ಥಳಗಳಲ್ಲಿ ಲಘು ವಾಹನಗಳು ಏಕಮುಖವಾಗಿ ಸಂಚರಿಸುತ್ತಿವೆ. ಬುಧವಾರ ಒಂದೇ ದಿನ ಈ ಮಾರ್ಗದಲ್ಲಿ 9 ಕಡೆ ಅಪಘಾತ ಸಂಭವಿಸಿದೆ. ದೊಡ್ಡತಪ್ಪಲು ಮತ್ತು ದೋಣಿಗಲ್‌ನಲ್ಲಿ ದೊಡ್ಡ ಮಟ್ಟದ ಸಮಸ್ಯೆ ಕಂಡುಬರುತ್ತಿದೆ. ಹೆದ್ದಾರಿ ಮೇಲೆ ಬಿದ್ದ ಮಣ್ಣನ್ನು ತೆರವುಗೊಳಿಸುವ ಕಾರ್ಯ ಕೂಡ ಅರ್ಧಕ್ಕೆ ನಿಂತಿದೆ. ಮಣ್ಣನ್ನು ತೆರವುಗೊಳಿಸಿದರೆ ವಾಹನಗಳ ಸಂಚಾರಕ್ಕೆ ಮತ್ತಷ್ಟು ಅನುಕೂಲ ವಾಗುತ್ತಿತ್ತು. 

ಟಾಪ್ ನ್ಯೂಸ್

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.