ಕಟೀಲು ಮೇಳ: 340 ಕಲಾವಿದರಿಗೆ 46 ಲಕ್ಷ ರೂ. ರಜೆಯ ಗೌರವ ಧನ
Team Udayavani, Sep 5, 2018, 11:27 AM IST
ಕಟೀಲು: ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ಆರೂ ಮೇಳಗಳ 340 ಮಂದಿ ಕಲಾವಿದರು ಹಾಗೂ ಸಹಾಯಕರಿಗೆ ಯಕ್ಷಧರ್ಮಬೋಧಿನೀ ಟ್ರಸ್ಟ್ನಿಂದ ರೂ. 36,50,000 ಹಾಗೂ ಕಲಾವಿದರ ಕ್ಷೇಮನಿಧಿಯಿಂದ 9,50,000 -ಹೀಗೆ ಒಟ್ಟು 46 ಲಕ್ಷ ರೂ.ಗಳನ್ನು ಮೇಳಗಳ ಸಂಚಾಲಕರಾದ ಕಲ್ಲಾಡಿ ದೇವೀಪ್ರಸಾದ ಶೆಟ್ಟರಿಗೆ ಕಟೀಲು ದೇವಸ್ಥಾನದಲ್ಲಿ ಶ್ರೀ ದೇವರ ಎದುರು ಹಸ್ತಾಂತರಿಸಲಾಯಿತು.
ಕನಿಷ್ಠ 10 ಸಾವಿರ ರೂ.ಗಳಿಂದ ಗರಿಷ್ಠ 20 ಸಾವಿರ ರೂ.ಗಳ ವರೆಗೆ 4 ಗ್ರೇಡ್ಗಳಲ್ಲಿ ಕಲಾವಿದರಿಗೆ ಈ ಗೌರವಧನವನ್ನು ನೀಡಲಾಗುತ್ತದೆ. ಯಕ್ಷಧರ್ಮ ಬೋಧಿನೀ ಟ್ರಸ್ಟ್ ರಂಗಸ್ಥಳ, ಬಸ್ಸು, ಧ್ವನಿವರ್ಧಕಗಳಿಂದ ಪಡೆಯುವ ನಿರ್ವಹಣ ವೆಚ್ಚದಲ್ಲಿ ಉಳಿಕೆಯಾದ ಹಣವನ್ನು ಕಲಾವಿದರಿಗೆ ರಜೆಯ ಗೌರವಧನಕ್ಕಾಗಿ ನೀಡುತ್ತಿದೆ. ಕಳೆದ ವರ್ಷ 43.50 ಲಕ್ಷ ರೂ.ಗಳನ್ನು ನೀಡಲಾಗಿತ್ತು.
ಟ್ರಸ್ಟ್ ಅಧ್ಯಕ್ಷರಾದ ಬಜಪೆ ರಾಘವೇಂದ್ರ ಆಚಾರ್ಯ ಹಾಗೂ ಸಹೋದರರು ಈ ವರುಷ 1 ಲಕ್ಷ ರೂ.ಗಳನ್ನು ವೈಯಕ್ತಿಕವಾಗಿ ಕಲಾವಿದರ ಗೌರವಧನಕ್ಕಾಗಿ ದೇಣಿಗೆ ನೀಡಿದ್ದು, 12 ವರುಷಗಳಿಂದ ಒಟ್ಟು ರೂ. 16 ಲಕ್ಷಗಳನ್ನು ನೀಡಿದ್ದಾರೆ. ಟ್ರಸ್ಟ್ ಅಧ್ಯಕ್ಷ ರಾಘವೇಂದ್ರ ಆಚಾರ್ಯ, ಟ್ರಸ್ಟಿ ಶಿವಾಜಿ ಶೆಟ್ಟಿ, ರವಿರಾಜ ಆಚಾರ್ಯ, ಶ್ರೀನಿವಾಸ ಭಟ್, ಮೊಕ್ತೇಸರರಾದ ವಾಸುದೇವ ಆಸ್ರಣ್ಣ, ಕೊಡೆತ್ತೂರುಗುತ್ತು ಸನತ್ ಕುಮಾರ ಶೆಟ್ಟಿ, ಅರ್ಚಕರಾದ ಲಕ್ಷ್ಮೀನಾರಾಯಣ ಆಸ್ರಣ್ಣ, ವೆಂಕಟರಮಣ ಆಸ್ರಣ್ಣ, ಅನಂತ ಆಸ್ರಣ್ಣ, ಪ್ರಸಾದ ಆಸ್ರಣ್ಣ, ಶ್ರೀಹರಿ ಆಸ್ರಣ್ಣ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ