ಚಿನ್ನದ ಯುವತಿಗೆ ಅದ್ದೂರಿ ಸ್ವಾಗತ


Team Udayavani, Sep 7, 2018, 9:43 AM IST

povamma.jpg

ಮಂಗಳೂರು: ಏಶ್ಯನ್‌ ಗೇಮ್ಸ್‌ನ ರಿಲೇಯಲ್ಲಿ ದೇಶಕ್ಕೆ ಬಂಗಾರದ ಪದಕ ತಂದುಕೊಟ್ಟ ಕರಾವಳಿ ಮೂಲದ ಪೂವಮ್ಮ ಗುರುವಾರ ಮಂಗಳೂರಿಗೆ ಆಗಮಿಸಿದಾಗ ಭವ್ಯ ಸ್ವಾಗತ ನೀಡಲಾಯಿತು.

ಗುರುವಾರ ಮಧ್ಯಾಹ್ನ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ತಂದೆ, ತಾಯಿ, ಕುಟುಂಬ ವರ್ಗದವರು, ವಿದ್ಯಾರ್ಥಿಗಳು, ಸ್ಥಳೀಯ ಜನಪ್ರತಿನಿಧಿಗಳು, ಗಣ್ಯರು ಬರಮಾಡಿಕೊಂಡರು. ಪೂವಮ್ಮ ತನ್ನ ತಾಯಿ ಜಾಜಿ ಅವರಿಗೆ ಮುತ್ತಿಕ್ಕುವ ಮೂಲಕ ಪದಕ ಸಂಭ್ರಮವನ್ನು ಹಂಚಿಕೊಂಡರು. ತಂದೆ ರಾಜು, ಸಹೋದರ ಮಂಜು, ಸಹೋದರಿ ಲಿಖೀತಾ ಸಾಕ್ಷಿಯಾಗಿದ್ದರು. ಬಳಿಕ ನಗರದ ಉರ್ವಾಸ್ಟೋರ್‌ ಬಳಿಯಿರುವ ತಮ್ಮ ಮನೆಗೆ ಬಂದ ಪೂವಮ್ಮ ಅವರಿಗೆ ಸ್ನೇಹಿತರು, ನೆರೆಹೊರೆಯವರು, ಅಪಾರ ಸಂಖ್ಯೆಯ ಜನರು ಭವ್ಯ ಸ್ವಾಗತ ಕೋರಿದರು.

ಪೂವಮ್ಮ ಮನೆಗೆ ನಳಿನ್‌ 
ಸಂಸದ ನಳಿನ್‌ ಕುಮಾರ್‌ ಕಟೀಲು ಅವರು ಪೂವಮ್ಮ ಅವರ ಮನೆಗೆ ಭೇಟಿ ನೀಡಿ ಶುಭ ಹಾರೈಸಿದರು.
ಶಾಸಕ ಡಿ. ವೇದವ್ಯಾಸ ಕಾಮತ್‌ ಕೂಡ ಪೂವಮ್ಮ ಮನೆಗೆ ತೆರಳಿ ಅಭಿನಂದಿಸಿದರು. ಪೂವಮ್ಮ ಸಾಧನೆಯ ಹಿಂದೆ ಕಠಿನ ಶ್ರಮ ಅಡಗಿದೆ. ಅದನ್ನು ಪರಿಗಣಿಸಿ ಅವರಿಗೆ ರಾಜ್ಯ ಸರಕಾರವು ಕನಿಷ್ಠ 1 ಕೋಟಿ ರೂ. ನಗದು ಬಹುಮಾನ‌ ನೀಡಬೇಕು. ನಗರದಲ್ಲಿ ಸರಕಾರಿ ನಿವೇಶನ ನೀಡಿ ಪ್ರೋತ್ಸಾಹಿಸಬೇಕು ಎಂದರಲ್ಲದೆ, ಈ ಬಗ್ಗೆ ಸಿಎಂ ಅವರಲ್ಲಿ  ಮನವಿ ಮಾಡಲಾಗುವುದು ಎಂದರು.

ಮಾಜಿ ಸಚಿವ ಅಭಯಚಂದ್ರ ಜೈನ್‌, ಆಳ್ವಾಸ್‌ ಶಿಕ್ಷಣ ಸಂಸ್ಥೆ ಮುಖ್ಯಸ್ಥ ಮೋಹನ ಆಳ್ವ, ಸಹ್ಯಾದ್ರಿ ಕಾಲೇಜು ಅಧ್ಯಕ್ಷ ಮಂಜುನಾಥ ಭಂಡಾರಿ, ಬಿಜೆಪಿಯ ರವಿಶಂಕರ್‌ ಮಿಜಾರ್‌, ನಿತಿನ್‌ ಕುಮಾರ್‌, ಸಂಜಯ ಪ್ರಭು, ಪ್ರಭಾ ಮಾಲಿನಿ, ರಮೇಶ್‌ ಕಂಡೆಟ್ಟು, ಭಾಸ್ಕರಚಂದ್ರ ಶೆಟ್ಟಿ, ವಸಂತ ಜೆ. ಪೂಜಾರಿ, ಪ್ರೇಮಾನಂದ ಶೆಟ್ಟಿ, ಪೂರ್ಣಿಮಾ, ರೂಪಾ ಡಿ. ಬಂಗೇರ ಸಹಿತ ಪ್ರಮುಖರು ವಿಮಾನನಿಲ್ದಾಣದಲ್ಲಿ ಹಾಜರಿದ್ದರು.

ಪ್ರಧಾನಿಗೂ ಕ್ರೀಡೆ ಬಗ್ಗೆ ಇದೆ ಆಸಕ್ತಿ
ಚಿನ್ನದ ಪದಕ ಗೆದ್ದಿರುವುದು ತುಂಬಾ ಖುಷಿ ತಂದಿದೆ. ಬುಧವಾರ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದೆ. ಎರಡನೇ ಬಾರಿ ಅವರ ಭೇಟಿಗೆ ಅವಕಾಶ ಸಿಕ್ಕಿತ್ತು. ಅವರಿಗೂ ಕ್ರೀಡಾ ಕ್ಷೇತ್ರದ ಬಗ್ಗೆ ಒಲವಿದೆ. ವರ್ಲ್ಡ್ ಏಶ್ಯನ್‌ ಸಹಿತ ಒಲಿಂಪಿಕ್ಸ್‌ ಕ್ರೀಡಾಕೂಟದ ಅಭ್ಯಾಸಕ್ಕೆ ಪ್ರೋತ್ಸಾಹ ನೀಡುವುದಾಗಿ ಹೇಳಿದ್ದಾರೆ. ಮನೆಗೆ ಬಾರದೆ ಸುಮಾರು 8 ತಿಂಗಳು ಆಗಿತ್ತು. ಇಲ್ಲಿನ ನನ್ನ ಫೇವರಿಟ್‌ ಆಹಾರ ಮಿಸ್‌ ಮಾಡಿಕೊಳ್ಳುತ್ತಿದ್ದೆ. ಈಗ ಚಿನ್ನ ಗೆದ್ದು ಮನೆಗೆ ಮರಳುತ್ತಿರುವುದಕ್ಕೆ ಬಹಳ ಹೆಮ್ಮೆ ಆಗುತ್ತಿದೆ. ಒಂದು ತಿಂಗಳು ವಿಶ್ರಾಂತಿ ಪಡೆದು ಬಳಿಕ ಮಂಗಳಾ ಕ್ರೀಡಾಂಗಣದಲ್ಲಿ ಕ್ರೀಡಾಭ್ಯಾಸ ಮುಂದುವರಿಸುತ್ತೇನೆ ಎಂದು ಪೂವಮ್ಮ ಅವರು “ಉದಯವಾಣಿ’ ಜತೆ ಸಂತಸ ಹಂಚಿಕೊಂಡರು.

ಪೂವಮ್ಮ ಅವರಿಗೆ ರಾಜ್ಯ ಸರಕಾರದ ವತಿಯಿಂದ ನಿವೇಶನ‌ ಸಿಗದ ವಿಚಾರ ತಿಳಿದಿದೆ. ಈ ಬಗ್ಗೆ ಸ್ಥಳೀಯ ಶಾಸಕರ ಬಳಿ ಮಾತನಾಡಿ, ರಾಜ್ಯ ಸರಕಾರದ ಗಮನಕ್ಕೆ ತರಲು ಪ್ರಯತ್ನಿಸುತ್ತೇನೆ.

 ನಳಿನ್‌ ಕುಮಾರ್‌ ಕಟೀಲು, ಸಂಸದ

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.