‘ಗೇರು ಬೆಳೆಯಿಂದ ಆರ್ಥಿಕ ಲಾಭ’


Team Udayavani, Sep 7, 2018, 11:25 AM IST

7-september-9.jpg

ಮೂಡಬಿದಿರೆ: ‘ಗೇರು ಬೆಳೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಮುತುವರ್ಜಿ ವಹಿಸಿ ಬೆಳೆಸಿದಲ್ಲಿ ಆರ್ಥಿಕ ಮಟ್ಟವನ್ನು ಹೆಚ್ಚಿಸಲು ಸಾಧ್ಯ. ನಿಗಮದ ನರ್ಸರಿಗಳಲ್ಲಿ ಉತ್ತಮ ತಳಿಯ ಕಸಿ ಗೇರು ಗಿಡಬೆಳೆಸಿ, ಆಸಕ್ತ ಬೆಳೆಗಾರರಿಗೆ ನೀಡಲಾಗುವುದು ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರನ್‌ ಅವರು ಹೇಳಿದರು. 

ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ವತಿಯಿಂದ ಮೂಡಬಿದಿರೆಯ ಅರಣ್ಯ ಸಂಕೀರ್ಣದಲ್ಲಿರುವ ಅರಣ್ಯ ಇಲಾಖೆಯ ಪ್ರಕೃತಿ ಚಿಕಿತ್ಸಾ ತರಬೇತಿ ಕೇಂದ್ರದಲ್ಲಿ ರೈತರಿಗೆ ಹಾಗೂ ಗ್ರಾಮ ಅರಣ್ಯ ಸಮಿತಿ ಸದಸ್ಯರಿಗೆ ನಡೆದ ಗೇರು ಕೃಷಿ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ನಿಗಮದ ವ್ಯವಸ್ಥಾಪಕ ನಿರ್ದೇಶಕ ಪ್ರಕಾಶ್‌ ಎಸ್‌. ನೆಟಾಲ್ಕರ್‌ ಅಧ್ಯಕ್ಷತೆ ವಹಿಸಿ ಸಾಂಕೇತಿಕವಾಗಿ ಪ್ರಗತಿಪರ ರೈತರಿಗೆ ಕಸಿಗೇರು ಗಿಡಗಳನ್ನು ವಿತರಿಸಿದರು.

ಸಮ್ಮಾನ
ಪ್ರಗತಿಪರ ಗೇರು ಕೃಷಿಕ ಹಾಗೂ ಮಾಜಿ ಸೈನಿಕ ಜಯ ಶೆಟ್ಟಿ ಬೆಳುವಾಯಿ ಅವರನ್ನು ನಿಗಮದ ವತಿಯಿಂದ ಸಮ್ಮಾನಿಸಲಾಯಿತು. ಪುತ್ತೂರು ವಿಭಾಗದ ನೆಡುತೋಪು ಅಧೀಕ್ಷಕ ಸುರೇಶ್‌ ಸಮ್ಮಾನ ಪತ್ರವಾಚಿಸಿದರು. ಕುಂದಾಪುರ ವಿಭಾಗದ ನೆಡುತೋಪು ಅಧಿಧೀಕ್ಷಕ ರವಿರಾಜ್‌ ಸ್ವಾಗತಿಸಿದರು. ಕುಮಟಾ ವಿಭಾಗದ ನೆಡುತೋಪು ಅಧೀಕ್ಷಕ ಮಲ್ಲಪ್ಪ ನಿರೂಪಿಸಿದರು. ಪುತ್ತೂರು ಗೇರು ಸಂಶೋಧನ ನಿರ್ದೇಶಕ ಡಾ| ಎಂ. ಗಂಗಾಧರ ನಾಯಕ್‌ ಪ್ರಸ್ತಾವನೆಗೈದರು. ಮೂಡಬಿದಿರೆ ನೆಡುತೋಪು ವಿಭಾಗದ ಅಧೀಕ್ಷಕ ಮುರಳೀಧರನ್‌ ಉಪಸ್ಥಿತರಿದ್ದರು.

ಮಾಹಿತಿ, ಸಂವಾದ
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಪುತ್ತೂರು ಗೇರು ಸಂಶೋಧನ ನಿರ್ದೇಶನಾಲಯದ ನಿರ್ದೇಶಕ ಡಾ| ಎಂ. ಗಂಗಾಧರ ನಾಯಕ್‌, ಗೇರು ಕೃಷಿಯ ಬಗ್ಗೆ ಮಾಹಿತಿ ನೀಡಿ, ಗೇರು ತಳಿಗಳ ಬಗ್ಗೆ ಮತ್ತು ಯಾವ ಮಣ್ಣಿಗೆ ಯಾವ ತಳಿ ಸೂಕ್ತ ಎಂದು ವಿವರಿಸಿದರು. ಪುತ್ತೂರು ಗೇರು ಸಂಶೋಧನ ನಿರ್ದೇಶನಾಲಯದ ವಿಜ್ಞಾನಿ ಮುರಳೀಧರ್‌ ಅವರು ಗೇರು ಮರಗಳಿಗೆ ಬರುವ ವಿವಿಧ ಕೀಟಗಳ ಹಾವಳಿ ಮತ್ತು ಅವುಗಳ ನಿಯಂತ್ರಣದ ಬಗ್ಗೆ ಮಾಹಿತಿ ನೀಡಿದರು. ಗೇರು ಕೃಷಿಕರೊಂದಿಗೆ ಸಂವಾದ ನಡೆಯಿತು.150 ಮಂದಿ ಗ್ರಾಮ ಅರಣ್ಯ ಸಮಿತಿ ಸದಸ್ಯರು, ಕೃಷಿಕರಿಗೆ ಕಸಿ ಗೇರು ಸಸಿಗಳನ್ನು ಉಚಿತವಾಗಿ ವಿತರಿಸಲಾಯಿತು.

ಟಾಪ್ ನ್ಯೂಸ್

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.