‘ಗೇರು ಬೆಳೆಯಿಂದ ಆರ್ಥಿಕ ಲಾಭ’


Team Udayavani, Sep 7, 2018, 11:25 AM IST

7-september-9.jpg

ಮೂಡಬಿದಿರೆ: ‘ಗೇರು ಬೆಳೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಮುತುವರ್ಜಿ ವಹಿಸಿ ಬೆಳೆಸಿದಲ್ಲಿ ಆರ್ಥಿಕ ಮಟ್ಟವನ್ನು ಹೆಚ್ಚಿಸಲು ಸಾಧ್ಯ. ನಿಗಮದ ನರ್ಸರಿಗಳಲ್ಲಿ ಉತ್ತಮ ತಳಿಯ ಕಸಿ ಗೇರು ಗಿಡಬೆಳೆಸಿ, ಆಸಕ್ತ ಬೆಳೆಗಾರರಿಗೆ ನೀಡಲಾಗುವುದು ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರನ್‌ ಅವರು ಹೇಳಿದರು. 

ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ವತಿಯಿಂದ ಮೂಡಬಿದಿರೆಯ ಅರಣ್ಯ ಸಂಕೀರ್ಣದಲ್ಲಿರುವ ಅರಣ್ಯ ಇಲಾಖೆಯ ಪ್ರಕೃತಿ ಚಿಕಿತ್ಸಾ ತರಬೇತಿ ಕೇಂದ್ರದಲ್ಲಿ ರೈತರಿಗೆ ಹಾಗೂ ಗ್ರಾಮ ಅರಣ್ಯ ಸಮಿತಿ ಸದಸ್ಯರಿಗೆ ನಡೆದ ಗೇರು ಕೃಷಿ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ನಿಗಮದ ವ್ಯವಸ್ಥಾಪಕ ನಿರ್ದೇಶಕ ಪ್ರಕಾಶ್‌ ಎಸ್‌. ನೆಟಾಲ್ಕರ್‌ ಅಧ್ಯಕ್ಷತೆ ವಹಿಸಿ ಸಾಂಕೇತಿಕವಾಗಿ ಪ್ರಗತಿಪರ ರೈತರಿಗೆ ಕಸಿಗೇರು ಗಿಡಗಳನ್ನು ವಿತರಿಸಿದರು.

ಸಮ್ಮಾನ
ಪ್ರಗತಿಪರ ಗೇರು ಕೃಷಿಕ ಹಾಗೂ ಮಾಜಿ ಸೈನಿಕ ಜಯ ಶೆಟ್ಟಿ ಬೆಳುವಾಯಿ ಅವರನ್ನು ನಿಗಮದ ವತಿಯಿಂದ ಸಮ್ಮಾನಿಸಲಾಯಿತು. ಪುತ್ತೂರು ವಿಭಾಗದ ನೆಡುತೋಪು ಅಧೀಕ್ಷಕ ಸುರೇಶ್‌ ಸಮ್ಮಾನ ಪತ್ರವಾಚಿಸಿದರು. ಕುಂದಾಪುರ ವಿಭಾಗದ ನೆಡುತೋಪು ಅಧಿಧೀಕ್ಷಕ ರವಿರಾಜ್‌ ಸ್ವಾಗತಿಸಿದರು. ಕುಮಟಾ ವಿಭಾಗದ ನೆಡುತೋಪು ಅಧೀಕ್ಷಕ ಮಲ್ಲಪ್ಪ ನಿರೂಪಿಸಿದರು. ಪುತ್ತೂರು ಗೇರು ಸಂಶೋಧನ ನಿರ್ದೇಶಕ ಡಾ| ಎಂ. ಗಂಗಾಧರ ನಾಯಕ್‌ ಪ್ರಸ್ತಾವನೆಗೈದರು. ಮೂಡಬಿದಿರೆ ನೆಡುತೋಪು ವಿಭಾಗದ ಅಧೀಕ್ಷಕ ಮುರಳೀಧರನ್‌ ಉಪಸ್ಥಿತರಿದ್ದರು.

ಮಾಹಿತಿ, ಸಂವಾದ
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಪುತ್ತೂರು ಗೇರು ಸಂಶೋಧನ ನಿರ್ದೇಶನಾಲಯದ ನಿರ್ದೇಶಕ ಡಾ| ಎಂ. ಗಂಗಾಧರ ನಾಯಕ್‌, ಗೇರು ಕೃಷಿಯ ಬಗ್ಗೆ ಮಾಹಿತಿ ನೀಡಿ, ಗೇರು ತಳಿಗಳ ಬಗ್ಗೆ ಮತ್ತು ಯಾವ ಮಣ್ಣಿಗೆ ಯಾವ ತಳಿ ಸೂಕ್ತ ಎಂದು ವಿವರಿಸಿದರು. ಪುತ್ತೂರು ಗೇರು ಸಂಶೋಧನ ನಿರ್ದೇಶನಾಲಯದ ವಿಜ್ಞಾನಿ ಮುರಳೀಧರ್‌ ಅವರು ಗೇರು ಮರಗಳಿಗೆ ಬರುವ ವಿವಿಧ ಕೀಟಗಳ ಹಾವಳಿ ಮತ್ತು ಅವುಗಳ ನಿಯಂತ್ರಣದ ಬಗ್ಗೆ ಮಾಹಿತಿ ನೀಡಿದರು. ಗೇರು ಕೃಷಿಕರೊಂದಿಗೆ ಸಂವಾದ ನಡೆಯಿತು.150 ಮಂದಿ ಗ್ರಾಮ ಅರಣ್ಯ ಸಮಿತಿ ಸದಸ್ಯರು, ಕೃಷಿಕರಿಗೆ ಕಸಿ ಗೇರು ಸಸಿಗಳನ್ನು ಉಚಿತವಾಗಿ ವಿತರಿಸಲಾಯಿತು.

ಟಾಪ್ ನ್ಯೂಸ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.