ರಾಮ ದಂಡು ಯಾತ್ರೆ ಮಂಗಳೂರಿಗೆ


Team Udayavani, Sep 7, 2018, 12:18 PM IST

7-september-11.jpg

ಮಹಾನಗರ: ತಿರುಪತಿಯ ಶ್ರೀ ವೆಂಕಟ್ರಮಣ ದೇವಸ್ಥಾನಕ್ಕೆ ನೀಡುವ ಕಾಣಿಕೆಯನ್ನು ಸಂಗ್ರಹಿಸಿ ಮೂಲ್ಕಿಯ ಕಾಲ ಭೈರವ ದೇವ ದರ್ಶನದೊಂದಿಗೆ ತಿರುಪತಿಗೆ ತಲುಪಿಸುವ ರಾಮ ದಂಡು ಯಾತ್ರೆ ಮೂಲ್ಕಿಯ ಶ್ರೀ ವೆಂಕಟ್ರಮಣ ದೇವಸ್ಥಾನದಿಂದ ಪ್ರಾರಂಭಗೊಂಡು ಮಂಗಳೂರು ತಲುಪಿತು.

ಇಲ್ಲಿಂದ ಯಾತ್ರೆಯು ಬಂಟ್ವಾಳ, ಮೂಡಬಿದಿರೆ, ಬೆಳ್ತಂಗಡಿ, ಉದಯಪುರ, ನರಸಾಪುರ ಮಾರ್ಗವಾಗಿ ತಿರುಪತಿ ತಲುಪಲಿದೆ. ಯಾತ್ರೆಯು ದಾರಿಯಲ್ಲಿ ಬರುವ ಸ್ಥಳೀಯ ದೇವಸ್ಥಾನಗಳಿಗೆ ಭೇಟಿ ನೀಡಿ ತಿರುಪತಿ ವೆಂಕಟ್ರಮಣ ಸ್ವಾಮಿಗಾಗಿ ಮೀಸಲಿರಿಸಿದ ಕಾಣಿಕೆಯನ್ನು ಸ್ವೀಕರಿಸಿ ಮುಂದೆ ಸಾಗಲಿದೆ. ಯಾತ್ರೆಯಲ್ಲಿ ಬರುವ ಭಕ್ತಾದಿಗಳಿಗೆ ಶ್ರೀ ತಿರುಪತಿ ತಿರುಮಲ ಹಾಗೂ ಶ್ರೀ ಕಾಶೀ ಮಠಕ್ಕೆ ಭೇಟಿ ನೀಡುವ ಕಾರ್ಯಕ್ರಮವಿದ್ದು ಸುಮಾರು ಐನೂರಕ್ಕೂ ಅಧಿಕ ಮಂದಿ ಮೂಲ್ಕಿ ಹಾಗೂ ಮಂಗಳೂರಿನಿಂದ ತಿರುಪತಿಗೆ ತೆರಳಲಿದ್ದಾರೆ.

ಹರಕೆ ಅಥವಾ ಯಾವುದೇ ರೂಪದಲ್ಲಿ ತಿರುಪತಿ ವೆಂಕಟ್ರಮಣ ದೇವರಿಗಾಗಿ ಮೀಸಲಿರಿಸಿದ ಕಾಣಿಕೆಯನ್ನು ಮೂಲ್ಕಿಯ ಶ್ರೀ ವೆಂಕಟ್ರಮಣ ದೇವಸ್ಥಾನದಲ್ಲಿ, ಪ್ರತೀ ಶನಿವಾರ ನಡೆಯುವ ಕಾಲ ಭೈರವ ದೇವ ದರ್ಶನದಲ್ಲಿ ಸಮರ್ಪಿಸಿ ಪ್ರಸಾದ ಸ್ವೀಕರಿಸುವ ವಾಡಿಕೆ ಇದ್ದು ಇದು ಸುಮಾರು ಐನೂರು ವರ್ಷಗಳ ಹಿಂದಿನಿಂದಲೂ ನಡೆದು ಬಂದಿದೆ. ಇದೇ ಕಾಣಿಕೆಗಾಗಿ ಮೂಲ್ಕಿಯಲ್ಲಿ ವಿಶೇಷ ಕಾಣಿಕೆ ಡಬ್ಬಿಯೊಂದು ಇರಿಸಲಾಗಿದ್ದು, ಇದರಲ್ಲಿ ಸ್ವೀಕರಿಸಿದ ಕಾಣಿಕೆಯನ್ನು ಸಾಲಿಗ್ರಾಮ, ಆಂಜನೇಯ ಹಾಗೂ ಉತ್ಸವದ ಕಾಲ ಭೈರವ ಮುದ್ರೆಯೊಂದಿಗೆ ಮೆರವಣಿಗೆಯಲ್ಲಿ ಸಾಗಿ ತಿರುಪತಿಗೆ ಸಮರ್ಪಿಸುವ ಈ ಯಾತ್ರೆಗೆ ರಾಮ ದಂಡು ಯಾತ್ರೆ ಎಂದು ಕರೆಯಲಾಗುತ್ತದೆ. ಶ್ರೀ ಕಾಶೀ ಮಠದ ಏಳನೇಯ ಮಠಾಧಿಪತಿಗಳಾದ ಶ್ರೀಮತ್‌ ಮಾಧವೇಂದ್ರ ತೀರ್ಥ ಸ್ವಾಮೀಜಿಯವರ ನೇತೃತ್ವದಲ್ಲಿ ಕಾಲ ಭೈರವ ದರ್ಶನ ಸೇವೆ ನಡೆಯುತ್ತಿದ್ದು, ಈಗ ಶ್ರೀ ಕಾಲಭೈರವ ದೇವರ ದರ್ಶನ ನಡೆಸುವಂತೆ ಮೂಲಮುದ್ರೆಯನ್ನು ಸತ್ಯನಾರಾಯಣ ನಾಯಕ್‌ ಅವರಿಗೆ ಕಾಶೀ ಮಠಾಧೀಶ ಶ್ರೀಮತ್‌ ಸಂಯಮೀಂದ್ರ ತೀರ್ಥ ಸ್ವಾಮಿಜಿಯವರು 2017ನೇ ಅಕ್ಟೋಬರ್‌ನಲ್ಲಿ ಮೂಲ್ಕಿಯಲ್ಲಿ ನಡೆದ ಸಮಾರಂಭದಲ್ಲಿ ಹಸ್ತಾಂತರಿಸಿದ್ದಾರೆ. 

ಯಾತ್ರೆಗೆ ಪುನಃ ಚಾಲನೆ
ಹಲವಾರು ವರ್ಷಗಳಿಂದ ಈ ಸೇವೆ ಕಾರಣಾಂತರಗಳಿಂದ ನಿಂತುಹೋಗಿದ್ದು, ತಿರುಪತಿ ದೇವಸ್ಥಾನದ ಅಧಿಕಾರಿಗಳು ಪ್ರತೀ ವರ್ಷ ಮೂಲ್ಕಿಗೆ ಬಂದು ಈ ಕಾಣಿಕೆಯನ್ನು ಸ್ವೀಕರಿಸಿ ತಿರುಪತಿ ಶ್ರೀನಿವಾಸ ದೇವರಿಗೆ ಸಮರ್ಪಿಸುತ್ತಿದ್ದು, ಈಗ ಕಾಶೀ ಮಠಾಧೀಶ ಶ್ರೀಮತ್‌ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ಆದೇಶದ ಮೇರೆಗೆ ದರ್ಶನ ಸೇವೆ ಹಾಗೂ ರಾಮ ದಂಡು ಯಾತ್ರೆಗೆ ಪುನಃ ಚಾಲನೆ ದೊರೆತಿದೆ.

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.