ರಾಮ ದಂಡು ಯಾತ್ರೆ ಮಂಗಳೂರಿಗೆ


Team Udayavani, Sep 7, 2018, 12:18 PM IST

7-september-11.jpg

ಮಹಾನಗರ: ತಿರುಪತಿಯ ಶ್ರೀ ವೆಂಕಟ್ರಮಣ ದೇವಸ್ಥಾನಕ್ಕೆ ನೀಡುವ ಕಾಣಿಕೆಯನ್ನು ಸಂಗ್ರಹಿಸಿ ಮೂಲ್ಕಿಯ ಕಾಲ ಭೈರವ ದೇವ ದರ್ಶನದೊಂದಿಗೆ ತಿರುಪತಿಗೆ ತಲುಪಿಸುವ ರಾಮ ದಂಡು ಯಾತ್ರೆ ಮೂಲ್ಕಿಯ ಶ್ರೀ ವೆಂಕಟ್ರಮಣ ದೇವಸ್ಥಾನದಿಂದ ಪ್ರಾರಂಭಗೊಂಡು ಮಂಗಳೂರು ತಲುಪಿತು.

ಇಲ್ಲಿಂದ ಯಾತ್ರೆಯು ಬಂಟ್ವಾಳ, ಮೂಡಬಿದಿರೆ, ಬೆಳ್ತಂಗಡಿ, ಉದಯಪುರ, ನರಸಾಪುರ ಮಾರ್ಗವಾಗಿ ತಿರುಪತಿ ತಲುಪಲಿದೆ. ಯಾತ್ರೆಯು ದಾರಿಯಲ್ಲಿ ಬರುವ ಸ್ಥಳೀಯ ದೇವಸ್ಥಾನಗಳಿಗೆ ಭೇಟಿ ನೀಡಿ ತಿರುಪತಿ ವೆಂಕಟ್ರಮಣ ಸ್ವಾಮಿಗಾಗಿ ಮೀಸಲಿರಿಸಿದ ಕಾಣಿಕೆಯನ್ನು ಸ್ವೀಕರಿಸಿ ಮುಂದೆ ಸಾಗಲಿದೆ. ಯಾತ್ರೆಯಲ್ಲಿ ಬರುವ ಭಕ್ತಾದಿಗಳಿಗೆ ಶ್ರೀ ತಿರುಪತಿ ತಿರುಮಲ ಹಾಗೂ ಶ್ರೀ ಕಾಶೀ ಮಠಕ್ಕೆ ಭೇಟಿ ನೀಡುವ ಕಾರ್ಯಕ್ರಮವಿದ್ದು ಸುಮಾರು ಐನೂರಕ್ಕೂ ಅಧಿಕ ಮಂದಿ ಮೂಲ್ಕಿ ಹಾಗೂ ಮಂಗಳೂರಿನಿಂದ ತಿರುಪತಿಗೆ ತೆರಳಲಿದ್ದಾರೆ.

ಹರಕೆ ಅಥವಾ ಯಾವುದೇ ರೂಪದಲ್ಲಿ ತಿರುಪತಿ ವೆಂಕಟ್ರಮಣ ದೇವರಿಗಾಗಿ ಮೀಸಲಿರಿಸಿದ ಕಾಣಿಕೆಯನ್ನು ಮೂಲ್ಕಿಯ ಶ್ರೀ ವೆಂಕಟ್ರಮಣ ದೇವಸ್ಥಾನದಲ್ಲಿ, ಪ್ರತೀ ಶನಿವಾರ ನಡೆಯುವ ಕಾಲ ಭೈರವ ದೇವ ದರ್ಶನದಲ್ಲಿ ಸಮರ್ಪಿಸಿ ಪ್ರಸಾದ ಸ್ವೀಕರಿಸುವ ವಾಡಿಕೆ ಇದ್ದು ಇದು ಸುಮಾರು ಐನೂರು ವರ್ಷಗಳ ಹಿಂದಿನಿಂದಲೂ ನಡೆದು ಬಂದಿದೆ. ಇದೇ ಕಾಣಿಕೆಗಾಗಿ ಮೂಲ್ಕಿಯಲ್ಲಿ ವಿಶೇಷ ಕಾಣಿಕೆ ಡಬ್ಬಿಯೊಂದು ಇರಿಸಲಾಗಿದ್ದು, ಇದರಲ್ಲಿ ಸ್ವೀಕರಿಸಿದ ಕಾಣಿಕೆಯನ್ನು ಸಾಲಿಗ್ರಾಮ, ಆಂಜನೇಯ ಹಾಗೂ ಉತ್ಸವದ ಕಾಲ ಭೈರವ ಮುದ್ರೆಯೊಂದಿಗೆ ಮೆರವಣಿಗೆಯಲ್ಲಿ ಸಾಗಿ ತಿರುಪತಿಗೆ ಸಮರ್ಪಿಸುವ ಈ ಯಾತ್ರೆಗೆ ರಾಮ ದಂಡು ಯಾತ್ರೆ ಎಂದು ಕರೆಯಲಾಗುತ್ತದೆ. ಶ್ರೀ ಕಾಶೀ ಮಠದ ಏಳನೇಯ ಮಠಾಧಿಪತಿಗಳಾದ ಶ್ರೀಮತ್‌ ಮಾಧವೇಂದ್ರ ತೀರ್ಥ ಸ್ವಾಮೀಜಿಯವರ ನೇತೃತ್ವದಲ್ಲಿ ಕಾಲ ಭೈರವ ದರ್ಶನ ಸೇವೆ ನಡೆಯುತ್ತಿದ್ದು, ಈಗ ಶ್ರೀ ಕಾಲಭೈರವ ದೇವರ ದರ್ಶನ ನಡೆಸುವಂತೆ ಮೂಲಮುದ್ರೆಯನ್ನು ಸತ್ಯನಾರಾಯಣ ನಾಯಕ್‌ ಅವರಿಗೆ ಕಾಶೀ ಮಠಾಧೀಶ ಶ್ರೀಮತ್‌ ಸಂಯಮೀಂದ್ರ ತೀರ್ಥ ಸ್ವಾಮಿಜಿಯವರು 2017ನೇ ಅಕ್ಟೋಬರ್‌ನಲ್ಲಿ ಮೂಲ್ಕಿಯಲ್ಲಿ ನಡೆದ ಸಮಾರಂಭದಲ್ಲಿ ಹಸ್ತಾಂತರಿಸಿದ್ದಾರೆ. 

ಯಾತ್ರೆಗೆ ಪುನಃ ಚಾಲನೆ
ಹಲವಾರು ವರ್ಷಗಳಿಂದ ಈ ಸೇವೆ ಕಾರಣಾಂತರಗಳಿಂದ ನಿಂತುಹೋಗಿದ್ದು, ತಿರುಪತಿ ದೇವಸ್ಥಾನದ ಅಧಿಕಾರಿಗಳು ಪ್ರತೀ ವರ್ಷ ಮೂಲ್ಕಿಗೆ ಬಂದು ಈ ಕಾಣಿಕೆಯನ್ನು ಸ್ವೀಕರಿಸಿ ತಿರುಪತಿ ಶ್ರೀನಿವಾಸ ದೇವರಿಗೆ ಸಮರ್ಪಿಸುತ್ತಿದ್ದು, ಈಗ ಕಾಶೀ ಮಠಾಧೀಶ ಶ್ರೀಮತ್‌ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ಆದೇಶದ ಮೇರೆಗೆ ದರ್ಶನ ಸೇವೆ ಹಾಗೂ ರಾಮ ದಂಡು ಯಾತ್ರೆಗೆ ಪುನಃ ಚಾಲನೆ ದೊರೆತಿದೆ.

ಟಾಪ್ ನ್ಯೂಸ್

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.