ರಾಮ ದಂಡು ಯಾತ್ರೆ ಮಂಗಳೂರಿಗೆ


Team Udayavani, Sep 7, 2018, 12:18 PM IST

7-september-11.jpg

ಮಹಾನಗರ: ತಿರುಪತಿಯ ಶ್ರೀ ವೆಂಕಟ್ರಮಣ ದೇವಸ್ಥಾನಕ್ಕೆ ನೀಡುವ ಕಾಣಿಕೆಯನ್ನು ಸಂಗ್ರಹಿಸಿ ಮೂಲ್ಕಿಯ ಕಾಲ ಭೈರವ ದೇವ ದರ್ಶನದೊಂದಿಗೆ ತಿರುಪತಿಗೆ ತಲುಪಿಸುವ ರಾಮ ದಂಡು ಯಾತ್ರೆ ಮೂಲ್ಕಿಯ ಶ್ರೀ ವೆಂಕಟ್ರಮಣ ದೇವಸ್ಥಾನದಿಂದ ಪ್ರಾರಂಭಗೊಂಡು ಮಂಗಳೂರು ತಲುಪಿತು.

ಇಲ್ಲಿಂದ ಯಾತ್ರೆಯು ಬಂಟ್ವಾಳ, ಮೂಡಬಿದಿರೆ, ಬೆಳ್ತಂಗಡಿ, ಉದಯಪುರ, ನರಸಾಪುರ ಮಾರ್ಗವಾಗಿ ತಿರುಪತಿ ತಲುಪಲಿದೆ. ಯಾತ್ರೆಯು ದಾರಿಯಲ್ಲಿ ಬರುವ ಸ್ಥಳೀಯ ದೇವಸ್ಥಾನಗಳಿಗೆ ಭೇಟಿ ನೀಡಿ ತಿರುಪತಿ ವೆಂಕಟ್ರಮಣ ಸ್ವಾಮಿಗಾಗಿ ಮೀಸಲಿರಿಸಿದ ಕಾಣಿಕೆಯನ್ನು ಸ್ವೀಕರಿಸಿ ಮುಂದೆ ಸಾಗಲಿದೆ. ಯಾತ್ರೆಯಲ್ಲಿ ಬರುವ ಭಕ್ತಾದಿಗಳಿಗೆ ಶ್ರೀ ತಿರುಪತಿ ತಿರುಮಲ ಹಾಗೂ ಶ್ರೀ ಕಾಶೀ ಮಠಕ್ಕೆ ಭೇಟಿ ನೀಡುವ ಕಾರ್ಯಕ್ರಮವಿದ್ದು ಸುಮಾರು ಐನೂರಕ್ಕೂ ಅಧಿಕ ಮಂದಿ ಮೂಲ್ಕಿ ಹಾಗೂ ಮಂಗಳೂರಿನಿಂದ ತಿರುಪತಿಗೆ ತೆರಳಲಿದ್ದಾರೆ.

ಹರಕೆ ಅಥವಾ ಯಾವುದೇ ರೂಪದಲ್ಲಿ ತಿರುಪತಿ ವೆಂಕಟ್ರಮಣ ದೇವರಿಗಾಗಿ ಮೀಸಲಿರಿಸಿದ ಕಾಣಿಕೆಯನ್ನು ಮೂಲ್ಕಿಯ ಶ್ರೀ ವೆಂಕಟ್ರಮಣ ದೇವಸ್ಥಾನದಲ್ಲಿ, ಪ್ರತೀ ಶನಿವಾರ ನಡೆಯುವ ಕಾಲ ಭೈರವ ದೇವ ದರ್ಶನದಲ್ಲಿ ಸಮರ್ಪಿಸಿ ಪ್ರಸಾದ ಸ್ವೀಕರಿಸುವ ವಾಡಿಕೆ ಇದ್ದು ಇದು ಸುಮಾರು ಐನೂರು ವರ್ಷಗಳ ಹಿಂದಿನಿಂದಲೂ ನಡೆದು ಬಂದಿದೆ. ಇದೇ ಕಾಣಿಕೆಗಾಗಿ ಮೂಲ್ಕಿಯಲ್ಲಿ ವಿಶೇಷ ಕಾಣಿಕೆ ಡಬ್ಬಿಯೊಂದು ಇರಿಸಲಾಗಿದ್ದು, ಇದರಲ್ಲಿ ಸ್ವೀಕರಿಸಿದ ಕಾಣಿಕೆಯನ್ನು ಸಾಲಿಗ್ರಾಮ, ಆಂಜನೇಯ ಹಾಗೂ ಉತ್ಸವದ ಕಾಲ ಭೈರವ ಮುದ್ರೆಯೊಂದಿಗೆ ಮೆರವಣಿಗೆಯಲ್ಲಿ ಸಾಗಿ ತಿರುಪತಿಗೆ ಸಮರ್ಪಿಸುವ ಈ ಯಾತ್ರೆಗೆ ರಾಮ ದಂಡು ಯಾತ್ರೆ ಎಂದು ಕರೆಯಲಾಗುತ್ತದೆ. ಶ್ರೀ ಕಾಶೀ ಮಠದ ಏಳನೇಯ ಮಠಾಧಿಪತಿಗಳಾದ ಶ್ರೀಮತ್‌ ಮಾಧವೇಂದ್ರ ತೀರ್ಥ ಸ್ವಾಮೀಜಿಯವರ ನೇತೃತ್ವದಲ್ಲಿ ಕಾಲ ಭೈರವ ದರ್ಶನ ಸೇವೆ ನಡೆಯುತ್ತಿದ್ದು, ಈಗ ಶ್ರೀ ಕಾಲಭೈರವ ದೇವರ ದರ್ಶನ ನಡೆಸುವಂತೆ ಮೂಲಮುದ್ರೆಯನ್ನು ಸತ್ಯನಾರಾಯಣ ನಾಯಕ್‌ ಅವರಿಗೆ ಕಾಶೀ ಮಠಾಧೀಶ ಶ್ರೀಮತ್‌ ಸಂಯಮೀಂದ್ರ ತೀರ್ಥ ಸ್ವಾಮಿಜಿಯವರು 2017ನೇ ಅಕ್ಟೋಬರ್‌ನಲ್ಲಿ ಮೂಲ್ಕಿಯಲ್ಲಿ ನಡೆದ ಸಮಾರಂಭದಲ್ಲಿ ಹಸ್ತಾಂತರಿಸಿದ್ದಾರೆ. 

ಯಾತ್ರೆಗೆ ಪುನಃ ಚಾಲನೆ
ಹಲವಾರು ವರ್ಷಗಳಿಂದ ಈ ಸೇವೆ ಕಾರಣಾಂತರಗಳಿಂದ ನಿಂತುಹೋಗಿದ್ದು, ತಿರುಪತಿ ದೇವಸ್ಥಾನದ ಅಧಿಕಾರಿಗಳು ಪ್ರತೀ ವರ್ಷ ಮೂಲ್ಕಿಗೆ ಬಂದು ಈ ಕಾಣಿಕೆಯನ್ನು ಸ್ವೀಕರಿಸಿ ತಿರುಪತಿ ಶ್ರೀನಿವಾಸ ದೇವರಿಗೆ ಸಮರ್ಪಿಸುತ್ತಿದ್ದು, ಈಗ ಕಾಶೀ ಮಠಾಧೀಶ ಶ್ರೀಮತ್‌ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ಆದೇಶದ ಮೇರೆಗೆ ದರ್ಶನ ಸೇವೆ ಹಾಗೂ ರಾಮ ದಂಡು ಯಾತ್ರೆಗೆ ಪುನಃ ಚಾಲನೆ ದೊರೆತಿದೆ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.