ಕಿನ್ನಿಗೋಳಿ: ಟಿಪ್ಪರ್ ಹರಿದು ಸ್ಕೂಟರ್ ಸವಾರ ವಿದ್ಯಾರ್ಥಿ ಸಾವು
Team Udayavani, Sep 7, 2018, 2:10 PM IST
ಕಿನ್ನಿಗೋಳಿ: ಯಮದೂತನಾಗಿ ಬಂದ ಟಿಪ್ಪರ್ ಕಾಲೇಜು ವಿದ್ಯಾರ್ಥಿಯೋರ್ವನ ಬಲಿ ತೆಗೆದುಕೊಂಡ ಘಟನೆ ಶುಕ್ರವಾರ ಮಧ್ಯಾಹ್ನ ಕಿನ್ನಿಗೋಳಿ ಸಮೀಪದ ಪೊಂಪೈ ಕಾಲೇಜು ಸಮೀಪ ನಡೆದಿದೆ. ಕಾರ್ನಾಡು ನಿವಾಸಿ ವರ್ಶಿತ್ (21) ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟ ವಿದ್ಯಾರ್ಥಿ. ಇನ್ನೊಬ್ಬ ವಿದ್ಯಾರ್ಥಿ ಡೆರಿಕ್ ವಾಸ್ (20) ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ವಿವರ: ಶುಕ್ರವಾರ ಮಧ್ಯಾಹ್ನ ವರ್ಶಿತ್ ಮತ್ತು ಡೆರಿಕ್ ವಾಸ್ ಆ್ಯಕ್ಟಿವಾ ಸ್ಕೂಟಿಯಲ್ಲಿ ಊಟಕ್ಕೆಂದು ಹೊರಟ ಸಂದರ್ಭದಲ್ಲಿ ಟಿಪ್ಪರ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಟಿಪ್ಪರ್ ವರ್ಶಿತ್ ಮೇಲೆ ಹರಿದ ಪರಿಣಾಮ ಆತ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ವರ್ಶಿತ್ ಪೊಂಪೈ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಬಿಎಮ್ ವಿದ್ಯಾಥಿಯಾಗಿದ್ದು, ಡೆರಿಕ್ ವಾಸ್ ದ್ವಿತೀಯ ಬಿಬಿಎಮ್ ವಿದ್ಯಾರ್ಥಿಯಾಗಿದ್ದಾರೆ.
ಮಂಗಳೂರು ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್