ಅನ್ನ ಭಾಗ್ಯದ ಅಕ್ಕಿ ಖಾಸಗಿಯವರಿಗೆ ಮಾರಾಟ ಆರೋಪ, ದಾಳಿ
Team Udayavani, Sep 8, 2018, 2:45 AM IST
ಮಂಗಳೂರು: ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಶುಕ್ರವಾರ ಬೋಂದೆಲ್ ಸಮೀಪದ ಮಂಜಲ್ಪಾದೆ- ಪಡುಶೆಡ್ಡೆ ರಸ್ತೆಯ ಖಾಸಗಿ ಗೋದಾಮಿಗೆ ದಾಳಿ ಮಾಡಿ ಅನಧಿಕೃತವಾಗಿ ದಾಸ್ತಾನು ಇರಿಸಿದ್ದ 290 ಕ್ವಿಂಟಾಲ್ ಅಕ್ಕಿ ಮತ್ತು 9 ಕ್ವಿಂಟಾಲ್ ಗೋಧಿ ಸಹಿತ ಒಟ್ಟು 8,20,000 ರೂ. ಮೌಲ್ಯದ ಆಹಾರ ವಸ್ತುಗಳನ್ನು ಮತ್ತು 9 ಲ. ರೂ. ಮೌಲ್ಯದ 3 ವಾಹನಗಳನ್ನು ವಶಪಡಿಸಿಕೊಂಡು ಲಾರಿ ಚಾಲಕ ಮುಬಿರುಲ್ ಇಸ್ಲಾಂ ರಾಜ್ನನ್ನು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಇನ್ನೂ ಇಬ್ಬರು ಆರೋಪಿಗಳಿದ್ದು ಅವರು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪತ್ತೆಯಾಗಿರುವ ಅಕ್ಕಿ ರಾಜ್ಯ ಸರಕಾರದ ಅನ್ನ ಭಾಗ್ಯ ಯೋಜನೆಗೆ ಸೇರಿದ್ದೆಂದು ಹೇಳಲಾಗಿದೆ. ರಾಜ್ಯ ಆಹಾರ ಇಲಾಖೆಯ ಶಕ್ತಿ ನಗರದ ಗೋದಾಮಿನಿಂದ ಹಾಸ್ಟೆಲ್ಗೆಂದು ಸಾಗಿಸುತ್ತಿದ್ದ ಈ ಅಕ್ಕಿ ಮತ್ತು ಗೋಧಿಯನ್ನು ಖಾಸಗಿಯವರಿಗೆ ಮಾರಾಟ ಮಾಡಲು ಯತ್ತಿಸುತ್ತಿದ್ದಾಗ ನಗರದ ಬಿಜೆಪಿ ಕಾರ್ಪೊರೇಟರ್ ದಿವಾಕರ್ ಮತ್ತು ಇತರರು ಮಾಹಿತಿ ಪಡೆದು ಆಹಾರ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ. ತಾಲೂಕು ಕಚೇರಿಯಲ್ಲಿ ಆಹಾರ ಇಲಾಖೆಯ ಶಿರಸ್ತೇದಾರರಾಗಿರುವ ಕಸ್ತೂರಿ ನೀಡಿದ ದೂರಿನನ್ವಯ ಕಾವೂರು ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಅಕ್ಕಿ ಮತ್ತು ಗೋಧಿಯ ಜತೆಗೆ ಲಾರಿ, 407 ಟೆಂಪೋ ಮತ್ತು ಪಿಕಪ್ ಸಹಿತ ಮೂರು ವಾಹನಗಳು, ಎಲೆಕ್ಟ್ರಾನಿಕ್ ತೂಕದ ಯಂತ್ರ ಮತ್ತು ಪ್ಯಾಕಿಂಗ್ ಯಂತ್ರವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಅನ್ನ ಭಾಗ್ಯದ ಅಕ್ಕಿ ಮತ್ತು ಗೋಧಿಯನ್ನು ಲಾರಿ ಮಾಲಕ ಮತ್ತು ಚಾಲಕ ಸೇರಿ ಖಾಸಗಿಯವರಿಗೆ ಮಾರಾಟ ಮಾಡುತ್ತಿದ್ದರು ಹಾಗೂ ಬೋಂದೆಲ್ನ ಗೋದಾಮಿನಲ್ಲಿ ಈ ಅಕ್ಕಿಯನ್ನು ರಿಪ್ಯಾಕ್ ಮಾಡಿ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುತ್ತಿತ್ತು ಎಂದು ಆರೋಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ