ಮಾರುಕಟ್ಟೆಯಲ್ಲಿ ತರಕಾರಿ ಕೊರತೆ


Team Udayavani, Sep 8, 2018, 10:15 AM IST

8-sepctember-3.jpg

ಮಹಾನಗರ: ಕೆಥೋಲಿಕ್‌ ಕ್ರೈಸ್ತರ ತೆನೆ ಹಬ್ಬ ‘ಮೊಂತಿ ಫೆಸ್ತ್’ ಗೆ ಈ ವರ್ಷ ಹರಿವೆ, ಅಲಸಂಡೆ, ಹರಿವೆ ದಂಟು, ಕೆಸುವುದಂಟು ವಿರಳವಾಗಿದ್ದು, ಮಾರುಕಟ್ಟೆಯಲ್ಲಿ ಈ ನಾಲ್ಕು ತರಕಾರಿಗಳ ತೀವ್ರ ಕೊರತೆ ಕಂಡು ಬಂದಿದೆ. ಮಳೆ ಜಾಸ್ತಿ ಬಂದು ಬೆಳೆ ನಾಶವಾದ ಕಾರಣ ಹಾಗೂ ಅಳಿದುಳಿದ ಗಿಡಗಳಲ್ಲಿ ಫಸಲು ಕಡಿಮೆಯಾದ ಹಿನ್ನೆಲೆಯಲ್ಲಿ ಅಲಸಂಡೆ ಮತ್ತು ಹರಿವೆಯ ಅಭಾವ ಕಂಡು ಬಂದಿದೆ ಎನ್ನಲಾಗಿದೆ. ಕೆಸುವು ದಂಟಿಗೆ ಹೆಚ್ಚು ಬೇಡಿಕೆ ಇರಲಾರದೆಂಬ ಭಾವನೆ ಇದ್ದ ಕಾರಣ ಅದು ಸಾಕಷ್ಟು ಪ್ರಮಾಣದಲ್ಲಿ ಮಾರುಕಟ್ಟೆಗೆ ಪೂರೈಕೆ ಆಗಿಲ್ಲ ಎಂದು ಹೇಳಲಾಗುತ್ತಿದೆ.

ಕೆಥೋಲಿಕರು ಸೆ. 8ರಂದು ಆಚರಿಸುವ ತೆನೆ ಹಬ್ಬ ಎಂದರೆ ಅದು ಶಾಕಾಹಾರಿಯ ಹಬ್ಬ. ಅಂದು ಹಸಿರು ತರಕಾರಿಯ ಖಾದ್ಯಗಳೇ ಪ್ರಧಾನ. ಐದು, ಏಳು ಅಥವಾ ಒಂಬತ್ತು ಬಗೆಯ ತರಕಾರಿ ಪದಾರ್ಥಗಳನ್ನು ತಯಾರಿಸುವುದು ರೂಢಿ. ಆದರೆ ಈ ವರ್ಷ ಕೆಲವು ತರಕಾರಿಗಳೇ ವಿರಳವಾಗಿವೆ.

ಸ್ಥಳೀಯ ಬೆಂಡೆ ಬೆಲೆ ಏರಿಕೆ
ಪ್ರತಿ ವರ್ಷದಂತೆ ಈ ವರ್ಷ ಕೂಡ ಸ್ಥಳೀಯ ಬೆಂಡೆ ದುಬಾರಿಯಾಗಿದೆ; ಸಾಮಾನ್ಯವಾಗಿ ಸ್ಥಳೀಯ ಬೆಂಡೆ ಕೆ.ಜಿ.ಗೆ 50- 60 ರೂ. ಬೆಲೆ ಇರುತ್ತಿದ್ದು, ತೆನೆ ಹಬ್ಬದ ಮುಂಚಿನ ದಿನವಾದ ಶುಕ್ರವಾರ ನಗರದ ಸೆಂಟ್ರಲ್‌ ಮಾರ್ಕೆಟ್‌ನಲ್ಲಿ ಇದರ ಬೆಲೆ 120 ರೂ. ಇತ್ತು. ಸ್ಥಳೀಯ ಮುಳ್ಳು ಸೌತೆ (60 ರೂ.) ಮತ್ತು ಸ್ಥಳೀಯ ಹೀರೆ ಕಾಯಿ (50 ರೂ.)ಗೆ ಎಂದಿನ ದರಕ್ಕಿಂತ ತಲಾ 10 ರೂ. ಜಾಸ್ತಿಯಾಗಿದೆ. ಹರಿವೆ ದಂಟು ಬೆಲೆ 50 ರೂ. ಗಳಷ್ಟಿವೆ.

ಕೃಷ್ಣಾಷ್ಟಮಿ, ತೆನೆ ಹಬ್ಬ ಮತ್ತು ಚೌತಿ ಹಬ್ಬಗಳು ಕೆಲವು ದಿನಗಳ ಅಂತರದಲ್ಲಿ ಬಂದಿರುವುದರಿಂದ ಹಾಗೂ ಕೇರಳದಲ್ಲಿ ಪ್ರವಾಹದ ಕಾರಣ ಓಣಂ ಆಚರಣೆ ಇಲ್ಲದಿರುವುದರಿಂದ ಈ ವರ್ಷ ತರಕಾರಿಗಳ ಬೆಲೆ ಅಧಿಕ ಪ್ರಮಾಣದಲ್ಲಿ ಏರಿಕೆಯಾಗಿಲ್ಲ ಎಂದು ಮಾರುಕಟ್ಟೆ ಮೂಲಗಳು ತಿಳಿಸಿವೆ.

ಖರೀದಿ ಭರಾಟೆ 
ತೆನೆ ಹಬ್ಬದ ಪ್ರಯುಕ್ತ ಶುಕ್ರವಾರ ಮಾರುಕಟ್ಟೆಯಲ್ಲಿ ತರಕಾರಿಗಳ ಖರೀದಿಯ ಭರಾಟೆ ಕಂಡು ಬಂದಿತ್ತು. ಕೆಲವೊಂದು ತರಕಾರಿಗಳ ಕೊರತೆ ಇದ್ದ ಕಾರಣ ಈ ತರಕಾರಿಗಳು ಇರುವ ಅಂಗಡಿಗಳಲ್ಲಿ ಗ್ರಾಹಕರ ಒತ್ತಡ ಜಾಸ್ತಿ ಇತ್ತು. 

ಟಾಪ್ ನ್ಯೂಸ್

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.