ನಿಷೇಧದ ಮಧ್ಯೆಯೇ ಎಗ್ಗಿಲ್ಲದೆ ನಡೆದಿದೆ ‘ಬುಲ್‌ ಟ್ರಾಲ್‌’ !


Team Udayavani, Sep 9, 2018, 9:54 AM IST

9-sepctember-1.jpg

ಮಹಾನಗರ: ಈ ಋತುವಿನಿಂದ ಸಮುದ್ರದಲ್ಲಿ ಎರಡು ಬೋಟುಗಳ ಮಧ್ಯೆ ಒಂದು ಬಲೆ ಬೀಸಿ ಮೀನುಗಾರಿಕೆ ನಡೆಸುವ ‘ಬುಲ್‌ ಟ್ರಾಲ್‌’ ಮೀನುಗಾರಿಕೆಗೆ ರಾಜ್ಯ ಸರಕಾರವು ಕಟ್ಟುನಿಟ್ಟಾಗಿ ನಿಷೇಧಿಸಿದ್ದರೂ ಕೆಲವರು ಮೀನುಗಾರಿಕೆ ನಡೆಸುತ್ತಿರುವುದು ಪತ್ತೆಯಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿದ ಮೀನುಗಾರಿಕಾ ಇಲಾಖೆ ಅವರಿಗೆ ನೋಟಿಸ್‌ ಜಾರಿಗೊಳಿಸಿದೆ.

ಕೆಲವು ದಿನಗಳ ಹಿಂದೆ ನಗರದ ಹಳೆಬಂದರಿನಿಂದ ಮೀನುಗಾರಿಕೆಗೆ ತೆರಳಿದ ಎರಡು ಸ್ಥಳೀಯ ಮೀನುಗಾರಿಕಾ ಬೋಟುಗಳು ‘ಕರೆ ಫಿಶ್ ಬುಲ್‌ ಟ್ರಾಲಿಂಗ್‌’ ನಡೆಸುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಮತ್ತೊಂದು  ಬೋಟಿನ ಮೀನುಗಾರರು ಬುಲ್‌ಟ್ರಾಲ್‌ ಮಾಡುತ್ತಿದ್ದ ಎರಡು ಬೋಟುಗಳ ನಾಲ್ಕೂ ಸುತ್ತ ಮೊಬೈಲ್‌ನಲ್ಲಿ ವೀಡಿಯೋ ಮಾಡಿದ್ದು, ಈಗ ಅದು ವೈರಲ್‌ ಆಗಿದೆ. ಜತೆಗೆ ಮೀನುಗಾರಿಕಾ ಇಲಾಖೆಗೂ ವೀಡಿಯೋ ನೀಡಲಾಗಿದೆ. ಅದನ್ನು ಪರಿಶೀಲಿಸಿ ಇಲಾಖೆ ಬೋಟಿನ ಮಾಲಕರಿಗೆ ನೋಟೀಸ್‌ ಜಾರಿಗೊಳಿಸಿದೆ. ಅದರಂತೆ ಸೆ. 10ರಂದು ಇಲಾಖೆಯಲ್ಲಿ ಅಧಿಕಾರಿಗಳ ಸಮಕ್ಷಮ ತನಿಖೆ ನಡೆಯುವ ಸಾಧ್ಯತೆ ಇದೆ.

ಕಟ್ಟುನಿಟ್ಟಾಗಿ ಜಾರಿ
ಬುಲ್‌ ಟ್ರಾಲ್‌ ಮೀನುಗಾರಿಕೆಯಿಂದ ಸಣ್ಣ ಮೀನಿನ ಮರಿಗಳು ಬಲೆಯಲ್ಲಿ ಸಿಲುಕಿ ಮೀನು ಸಂತತಿಗೆ ಧಕ್ಕೆ ಆಗಲಿದೆ ಎಂಬ ಕಾರಣಕ್ಕೆ ಬುಲ್‌ ಟ್ರಾಲ್‌ ನಿಷೇಧಿಸಲಾಗಿದೆ. ಕೆಲವು ವರ್ಷಗಳಿಂದ ಈ ಕಾನೂನು ಜಾರಿಯಲ್ಲಿದ್ದರೂ ಪರಿಣಾಮ ಕಾರಿಯಾಗಿ ಅನುಷ್ಠಾನವಾಗಿರಲಿಲ್ಲ. ಆದರೆ, ಈ ವರ್ಷದಿಂದ ಕಟ್ಟುನಿಟ್ಟಾಗಿ ಇದು ಜಾರಿಯಾಗಿದೆ. ಈ ಕುರಿತು ಕರಾವಳಿ ತಟರಕ್ಷಣಾ ಪಡೆ, ಕರಾವಳಿ ಕಾವಲು ಪೊಲೀಸ್‌, ಮೀನುಗಾರಿಕೆ ನಡೆಸುವ ಬೋಟಿನ ಸಿಬಂದಿ ಸಹಿತ ವಿವಿಧ ಮೂಲಗಳಿಂದ ಮಾಹಿತಿ ಪಡೆದು ನಿಷೇಧಿತ ಮೀನುಗಾರಿಕೆ ಮೇಲೆ ಕಣ್ಣಿಡಲಾಗಿದೆ.

ಹೊರ ರಾಜ್ಯದ ಮೀನುಗಾರರದ್ದೇ ಸವಾಲು
ಸರಕಾರದ ಎಲ್ಲ ಸೂಚನೆಯನ್ನು ಕರಾವಳಿ ಭಾಗದ ಮೀನುಗಾರರು ಪಾಲಿಸುತ್ತಾ ಬಂದಿದ್ದಾರೆ. ಆದರೆ, ಸದ್ಯ ಕೇರಳ, ತಮಿಳುನಾಡು ಹಾಗೂ ಗೋವಾ ಭಾಗದವರು ಇಲ್ಲಿ ಬಂದು ಮೀನುಗಾರಿಕೆ ನಡೆಸುತ್ತಿರುವುದು ಬಹುದೊಡ್ಡ ಸವಾಲಾಗಿದೆ. ರಾಜ್ಯದ ಸಮುದ್ರ ವ್ಯಾಪ್ತಿಯ 12 ನಾಟಿಕಲ್‌ ಮೈಲು (1 ನಾಟಿಕಲ್‌ ಮೈಲು ಅಂದರೆ 1.8 ಕಿ.ಮೀ.) ಒಳಗೆ ಇತರ ರಾಜ್ಯದ ಮೀನುಗಾರರು ಬಂದು ಮೀನುಗಾರಿಕೆ ನಡೆಸುವಂತಿಲ್ಲ. ಇದರ ವಿರುದ್ಧವೂ ಮೀನುಗಾರಿಕಾ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎನ್ನುತ್ತಾರೆ ಪರ್ಸಿನ್‌ ಮೀನುಗಾರರ ಸಂಘದ ಅಧ್ಯಕ್ಷ ಮೋಹನ್‌ ಬೆಂಗ್ರೆ.

ಯಾವುದೆಲ್ಲ ನಿಷೇಧ?
ಸರಕಾರದ ಆದೇಶದಂತೆ ಬೆಳಕು ಮೀನುಗಾರಿಕೆ, ಬುಲ್‌ಟ್ರಾಲ್‌ ಮೀನುಗಾರಿಕೆ, ಅವೈಜ್ಞಾನಿಕವಾಗಿ ಪಚ್ಚಿಲೆ ಮೀನುಗಾರಿಕೆ, ಚೌರಿ ಮತ್ತು ಪ್ಲಾಸ್ಟಿಕ್‌ ಬಳಸಿ ಅನಧಿಕೃತವಾಗಿ ಕಪ್ಪೆ ಬಂಡಸನ್ನು ಹಿಡಿಯುವುದನ್ನು ನಿಷೇಧಿಸಲಾಗಿದೆ. ಈ ರೀತಿ ನಿಷೇಧಿತ ಪದ್ಧತಿಗಳಲ್ಲಿ ಮೀನುಗಾರಿಕೆ ಮಾಡುವುದು ಕಂಡು ಬಂದಲ್ಲಿ ಆ ಮೀನುಗಾರಿಕಾ ದೋಣಿಗಳ ಲೈಸನ್ಸ್‌ ಹಾಗೂ ಅವರಿಗೆ ನೀಡುವ ಕರರಹಿತ ಡೀಸೆಲ್‌ ಸೌಲಭ್ಯವನ್ನು ರದ್ದುಗೊಳಿಸಲಾಗುವುದು. ಅಲ್ಲದೇ ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ ಕಾಯ್ದೆ (1986)ಯಂತೆ ಆ ದೋಣಿಗಳು ಹಿಡಿದ ಮೀನಿನ 5 ಪಟ್ಟು ದರದಲ್ಲಿ ದಂಡ ವಸೂಲು ಮಾಡಲಾಗುತ್ತದೆ. ಆದ್ದರಿಂದ ಎಲ್ಲ ಮೀನುಗಾರರು ಇಲಾಖೆಯೊಡನೆ ಸಹಕರಿಸಬೇಕು ಎಂದು ಇಲಾಖೆ ತಿಳಿಸಿದೆ.

ಬೋಟ್‌ ಮಾಲಕರಿಗೆ ನೋಟಿಸ್‌
ಬುಲ್‌ಟ್ರಾಲ್‌, ಲೈಟ್‌ ಫಿಶಿಂಗ್‌ ಸಹಿತ ನಿಷೇಧಿತ ಮೀನುಗಾರಿಕೆ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು. ಬುಲ್‌ ಟ್ರಾಲ್‌ ಮಾಡಿದ ಬಗ್ಗೆ ಈಗಾಗಲೇ ಒಂದು ವೀಡಿಯೋ ದಾಖಲೆ ಮೂಲಕ ದೂರು ಬಂದಿದ್ದು, ಈ ಸಂಬಂಧ ಬೋಟಿನ ಮಾಲಕರಿಗೆ ನೋಟಿಸ್‌ ನೀಡಲಾಗಿದೆ. ವಿಚಾರಣೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
– ಚಿಕ್ಕವೀರ ನಾಯಕ್‌
 ಉಪನಿರ್ದೇಶಕರು, ಮೀನುಗಾರಿಕಾ ಇಲಾಖೆ-ದ.ಕ

ದಿನೇಶ್‌ ಇರಾ

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.