ಕ್ರೈಸ್ತ ಬಾಂಧವರಿಂದ ಸಂಭ್ರಮದ ತೆನೆಹಬ್ಬ ಆಚರಣೆ


Team Udayavani, Sep 9, 2018, 10:42 AM IST

9-sepctember-4.jpg

ವಾಮಂಜೂರು: ಇಲ್ಲಿನ ಶ್ರಮಿಕ ಸಂತ ಜೋಸೆಫ್‌ ಚರ್ಚ್‌ನಲ್ಲಿ ಚರ್ಚ್‌ನ ಧರ್ಮಗುರು ವಂ| ಸಿಪ್ರಿಯನ್‌ ಪಿಂಟೋ ಅವರ ನೇತೃತ್ವದಲ್ಲಿ ತೆನೆಹಬ್ಬ ಆಚರಿಸಲಾಯಿತು. ವಾಮಂಜೂರು ಚರ್ಚಿನ ಕ್ರೈಸ್ತ ಬಾಂಧವರು ‘ಮೊಂತಿ ಫೆಸ್ತ್’ ಮರಿಯಮ್ಮ ಮಾತೆಯ ಹುಟ್ಟು ಹಬ್ಬವನ್ನು ಶನಿವಾರ ಭಕ್ತಿಶ್ರದ್ಧೆಯಿಂದ ಆಚರಿಸಿದರು. ಬೆಳಗ್ಗೆ ವಾಮಂಜೂರು ಪೇಟೆಯಲ್ಲಿ ಭಕ್ತರು ಪ್ರಥಮ ತೆನೆ, ಫಲಪುಷ್ಪಗಳನ್ನು ಸಂಗ್ರಹಿಸಿ ಪ್ರಾರ್ಥನಾ ವಿಧಿಯಲ್ಲಿ ಪಾಲ್ಗೊಂಡರು. ಚರ್ಚಿನ ಪ್ರಧಾನ ಗುರುಗಳು ವಂ| ಸಿಪ್ರಿಯಾನ್‌ ಪಿಂಟೊ ಪ್ರಾರ್ಥನಾ ವಿಧಿಯನ್ನು ನಡೆಸಿ ‘ತೆನೆ’ ಆಶೀರ್ವದಿಸಿದರು. ಮಕ್ಕಳು ಮರಿಯಮ್ಮ ಮಾತೆಗೆ ಹೂಗಳನ್ನು ಅರ್ಪಿಸಿದರು. ಬಳಿಕ ಧರ್ಮಗುರುಗಳು, ವೇದಿಕೆ ಸೇವಕರು, ಧರ್ಮಭಗಿನಿಯರು ಮತ್ತು ಭಕ್ತರು ವಾದ್ಯ ಮೇಳದೊಂದಿಗೆ ಸ್ತೋತ್ರ ಗೀತೆಗಳನ್ನು ಹಾಡಿ ಚರ್ಚಿಗೆ ಮೆರವಣಿಗೆಯಲ್ಲಿ ಆಗಮಿಸಿದರು.

ಚರ್ಚಿನಲ್ಲಿ ವಂ| ಅನಿಲ್‌ ಲೋಬೋ ಅವರು ಪವಿತ್ರ ದಿವ್ಯಬಲಿಪೂಜೆಯನ್ನು ನೆರವೇರಿಸಿದರು ಮತ್ತು ಮಾತೆ ಮರಿಯಮ್ಮನವರ ಆದರ್ಶಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಲು ಭಕ್ತರಿಗೆ ಕರೆ ನೀಡಿ ಮಾತೆ ಮರಿಯಮ್ಮನವರು ಸದಾ ನಮ್ಮನ್ನು ಹರಸಲಿ ಎಂದು ಪ್ರಾರ್ಥಿಸಿದರು. ಹಿರಿಯ ಗುರುಗಳು ವಂ| ಜೋನ್‌ ಫೆರ್ನಾಂಡಿಸ್‌ ಮತ್ತು ಚರ್ಚಿನ ಪ್ರಧಾನ ಗುರುಗಳು ದಿವ್ಯ ಬಲಿಪೂಜೆಯಲ್ಲಿ ಪಾಲ್ಗೊಂಡರು.

ದಿವ್ಯಪೂಜೆಯ ಬಳಿಕ 26 ವಾರ್ಡ್‌ನ ಗುರಿಕಾರರಿಗೆ ಧರ್ಮಗುರುಗಳು ಆಶೀರ್ವದಿತ ತೆನೆಗಳನ್ನು ನೀಡಿದರು. ಗುರಿಕಾರರು ನೆರೆದ ಭಕ್ತರಿಗೆ ಹೊಸ ತೆನೆಯನ್ನು ವಿತರಿಸಿದರು. ದಿವ್ಯಪೂಜೆಯ ಬಳಿಕ ಭಕ್ತರಿಗೆ ಲಘು ಉಪಾಹಾರ ಮತ್ತು ಕಬ್ಬು ವಿತರಿಸಲಾಯಿತು.

ವಾಮಂಜೂರು ವಾಳೆಯ ಗುರಿಕಾರ ಮತ್ತು ಸದಸ್ಯರು ಹಬ್ಬದ ಮೇಲುಸ್ತುವಾರಿಯನ್ನು ನೋಡಿಕೊಂಡರು. ಕೆಥೋಲಿಕ್‌ ಸಭಾ ವಾಮಂಜೂರು ಘಟಕದ ಅಧ್ಯಕ್ಷರು ಮತ್ತು ಸದಸ್ಯರು ಹೊಸ ತೆನೆಗಳನ್ನು ಸಂಗ್ರಹಿಸಿದರು. ಹಬ್ಬದ ಪ್ರಯುಕ್ತ ಬಡ ಕುಟುಂಬಗಳಿಗೆ ದವಸಧಾನ್ಯಗಳನ್ನು ನೀಡಿದರು. ಚರ್ಚ್‌ ಪಾಲನಾ ಸಮಿತಿಯ ಉಪಾಧ್ಯಕ್ಷ ಸುನಿಲ್‌ ಪಿಂಟೋ ಮತ್ತು ಕಾರ್ಯದರ್ಶಿ ರೋಹನ್‌ ಪಿರೇರ ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.