ಕ್ರೈಸ್ತ ಬಾಂಧವರಿಂದ ಸಂಭ್ರಮದ ತೆನೆಹಬ್ಬ ಆಚರಣೆ


Team Udayavani, Sep 9, 2018, 10:42 AM IST

9-sepctember-4.jpg

ವಾಮಂಜೂರು: ಇಲ್ಲಿನ ಶ್ರಮಿಕ ಸಂತ ಜೋಸೆಫ್‌ ಚರ್ಚ್‌ನಲ್ಲಿ ಚರ್ಚ್‌ನ ಧರ್ಮಗುರು ವಂ| ಸಿಪ್ರಿಯನ್‌ ಪಿಂಟೋ ಅವರ ನೇತೃತ್ವದಲ್ಲಿ ತೆನೆಹಬ್ಬ ಆಚರಿಸಲಾಯಿತು. ವಾಮಂಜೂರು ಚರ್ಚಿನ ಕ್ರೈಸ್ತ ಬಾಂಧವರು ‘ಮೊಂತಿ ಫೆಸ್ತ್’ ಮರಿಯಮ್ಮ ಮಾತೆಯ ಹುಟ್ಟು ಹಬ್ಬವನ್ನು ಶನಿವಾರ ಭಕ್ತಿಶ್ರದ್ಧೆಯಿಂದ ಆಚರಿಸಿದರು. ಬೆಳಗ್ಗೆ ವಾಮಂಜೂರು ಪೇಟೆಯಲ್ಲಿ ಭಕ್ತರು ಪ್ರಥಮ ತೆನೆ, ಫಲಪುಷ್ಪಗಳನ್ನು ಸಂಗ್ರಹಿಸಿ ಪ್ರಾರ್ಥನಾ ವಿಧಿಯಲ್ಲಿ ಪಾಲ್ಗೊಂಡರು. ಚರ್ಚಿನ ಪ್ರಧಾನ ಗುರುಗಳು ವಂ| ಸಿಪ್ರಿಯಾನ್‌ ಪಿಂಟೊ ಪ್ರಾರ್ಥನಾ ವಿಧಿಯನ್ನು ನಡೆಸಿ ‘ತೆನೆ’ ಆಶೀರ್ವದಿಸಿದರು. ಮಕ್ಕಳು ಮರಿಯಮ್ಮ ಮಾತೆಗೆ ಹೂಗಳನ್ನು ಅರ್ಪಿಸಿದರು. ಬಳಿಕ ಧರ್ಮಗುರುಗಳು, ವೇದಿಕೆ ಸೇವಕರು, ಧರ್ಮಭಗಿನಿಯರು ಮತ್ತು ಭಕ್ತರು ವಾದ್ಯ ಮೇಳದೊಂದಿಗೆ ಸ್ತೋತ್ರ ಗೀತೆಗಳನ್ನು ಹಾಡಿ ಚರ್ಚಿಗೆ ಮೆರವಣಿಗೆಯಲ್ಲಿ ಆಗಮಿಸಿದರು.

ಚರ್ಚಿನಲ್ಲಿ ವಂ| ಅನಿಲ್‌ ಲೋಬೋ ಅವರು ಪವಿತ್ರ ದಿವ್ಯಬಲಿಪೂಜೆಯನ್ನು ನೆರವೇರಿಸಿದರು ಮತ್ತು ಮಾತೆ ಮರಿಯಮ್ಮನವರ ಆದರ್ಶಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಲು ಭಕ್ತರಿಗೆ ಕರೆ ನೀಡಿ ಮಾತೆ ಮರಿಯಮ್ಮನವರು ಸದಾ ನಮ್ಮನ್ನು ಹರಸಲಿ ಎಂದು ಪ್ರಾರ್ಥಿಸಿದರು. ಹಿರಿಯ ಗುರುಗಳು ವಂ| ಜೋನ್‌ ಫೆರ್ನಾಂಡಿಸ್‌ ಮತ್ತು ಚರ್ಚಿನ ಪ್ರಧಾನ ಗುರುಗಳು ದಿವ್ಯ ಬಲಿಪೂಜೆಯಲ್ಲಿ ಪಾಲ್ಗೊಂಡರು.

ದಿವ್ಯಪೂಜೆಯ ಬಳಿಕ 26 ವಾರ್ಡ್‌ನ ಗುರಿಕಾರರಿಗೆ ಧರ್ಮಗುರುಗಳು ಆಶೀರ್ವದಿತ ತೆನೆಗಳನ್ನು ನೀಡಿದರು. ಗುರಿಕಾರರು ನೆರೆದ ಭಕ್ತರಿಗೆ ಹೊಸ ತೆನೆಯನ್ನು ವಿತರಿಸಿದರು. ದಿವ್ಯಪೂಜೆಯ ಬಳಿಕ ಭಕ್ತರಿಗೆ ಲಘು ಉಪಾಹಾರ ಮತ್ತು ಕಬ್ಬು ವಿತರಿಸಲಾಯಿತು.

ವಾಮಂಜೂರು ವಾಳೆಯ ಗುರಿಕಾರ ಮತ್ತು ಸದಸ್ಯರು ಹಬ್ಬದ ಮೇಲುಸ್ತುವಾರಿಯನ್ನು ನೋಡಿಕೊಂಡರು. ಕೆಥೋಲಿಕ್‌ ಸಭಾ ವಾಮಂಜೂರು ಘಟಕದ ಅಧ್ಯಕ್ಷರು ಮತ್ತು ಸದಸ್ಯರು ಹೊಸ ತೆನೆಗಳನ್ನು ಸಂಗ್ರಹಿಸಿದರು. ಹಬ್ಬದ ಪ್ರಯುಕ್ತ ಬಡ ಕುಟುಂಬಗಳಿಗೆ ದವಸಧಾನ್ಯಗಳನ್ನು ನೀಡಿದರು. ಚರ್ಚ್‌ ಪಾಲನಾ ಸಮಿತಿಯ ಉಪಾಧ್ಯಕ್ಷ ಸುನಿಲ್‌ ಪಿಂಟೋ ಮತ್ತು ಕಾರ್ಯದರ್ಶಿ ರೋಹನ್‌ ಪಿರೇರ ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.